MIRROR FOCUS

ಹವಾಮಾನ ವೈಪರೀತ್ಯ ತಡೆ ಅಗತ್ಯ | ಹವಾಮಾನ ಆಯೋಗ ರಚನೆ ಅಗತ್ಯ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಅಭಿಮತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹವಾಮಾನ ಬದಲಾವಣೆಯು ಈಗ ದೇಶದಲ್ಲಿ ಗಂಭೀರ ಸ್ಥಿತಿಯನ್ನು ಉಂಟು ಮಾಡುತ್ತಿದೆ, ಇದರ ನಿಯಂತ್ರಣಕ್ಕೆ ಹಾಗೂ ಸಮಸ್ಯೆಗೆ ಸಮಗ್ರ ಪರಿಹಾರವನ್ನು ಕಂಡುಹಿಡಿಯಲು ನೀತಿ ಆಯೋಗದಂತೆಯೇ ಭಾರತದಲ್ಲಿ ಶಾಶ್ವತವಾದ ಹವಾಮಾನ ಆಯೋಗವನ್ನು ಸ್ಥಾಪಿಸುವ ಅಗತ್ಯ ಇದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕೆ ವಿ ವಿಶ್ವನಾಥನ್  ಹೇಳಿದ್ದಾರೆ.

Advertisement
Advertisement

ನವದೆಹಲಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ ವಕೀಲ ಜತಿಂದರ್‌ ಚೀಮಾ ಅವರ ‘ಕ್ಲೈಮೇಟ್‌ ಚೇಂಜ್‌: ದ ಪಾಲಿಸಿ, ಲಾ ಅಂಡ್‌ ಪ್ರಾಕ್ಟೀಸ್‌’ (ಹವಾಮಾನ ವೈಪರೀತ್ಯ: ನೀತಿ, ಕಾನೂನು ಮತ್ತು ವಕೀಲಿಕೆ) ಕೃತಿ ಬಿಡುಗಡೆ ಸಮಾರಂಭದಲ್ಲಿ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಪಿ.ಎಸ್.ನರಸಿಂಹ, ಸಂಜಯ್ ಕರೋಲ್ ಹಾಗೂ ಕೆ.ವಿ.ವಿಶ್ವನಾಥನ್ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡರು.

ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರಕ್ಕೆ ಇಂಗಾಲ ಹೊರಸೂಸುವಿಕೆಯನ್ನು ಕಡಿಮೆ ಮಾಡುವಂತಹ ಕಾನೂನುಗಳು ಸಾಕಾಗುವುದಿಲ್ಲ ಎಂದು ನ್ಯಾಯಮೂರ್ತಿ ವಿಶ್ವನಾಥನ್ ಹೇಳಿದರು. ದೇಶಕ್ಕೆ ಹವಾಮಾನ ಆಯೋಗದ ಅವಶ್ಯಕತೆಯಿದ್ದು, ಅದು ನೀತಿ ಆಯೋಗದಂತಹ ಶಾಶ್ವತ ಸಂಸ್ಥೆಯಾಗಿರಬೇಕು. ಇದರಿಂದಾಗಿ ಎಲ್ಲಾ ಕೋನಗಳಿಂದ ಸಮಸ್ಯೆಗಳನ್ನು ಪರಿಹರಿಲು ಸಾಧ್ಯವಾಗುತ್ತದೆ ಎಂದು ಅವರು ವಿವರಿಸಿದರು. ಭಾರತವು ಅಳವಡಿಸಿಕೊಳ್ಳಬೇಕಾದ ಹವಾಮಾನ ಬದಲಾವಣೆಯ  ಶಾಸನದ ಚೌಕಟ್ಟಿನ ಬಗ್ಗೆ ತಜ್ಞರ ನಡುವೆ ತೀವ್ರ ಚರ್ಚೆ ನಡೆಯುತ್ತಿದೆ ಎಂದು ನ್ಯಾಯಮೂರ್ತಿ ವಿಶ್ವನಾಥನ್ ಹೇಳಿದರು.

ಕೆಲವು ಅಭಿವೃದ್ಧಿ ಹೊಂದಿದ ದೇಶಗಳು ಇಂಗಾಲದ ಹೊರಸೂಸುವಿಕೆಯನ್ನು ನಿಯಂತ್ರಿಸುವ ಮೇಲೆ ಮಾತ್ರ ಗಮನಹರಿಸಲು ತಮ್ಮ ಕಾನೂನುಗಳನ್ನು ಹೇಗೆ ರಚಿಸುತ್ತವೆ ಎಂಬುದರ ವಿಶ್ಲೇಷಣೆ ನಡೆದಿದೆ. ಆದರೆ  ಭಾರತದಂತಹ ಅಭಿವೃದ್ಧಿ ಹೊಂದುತ್ತಿರುವ ದೇಶಕ್ಕೆ ಆ ಮಾದರಿ ಸೂಕ್ತವಲ್ಲ ಎಂದು ಅವರು ಹೇಳಿದರು.

ಮೂಲಸೌಕರ್ಯ ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಯ ನಡುವೆ ನಿರ್ವಹಿಸಬೇಕಾದ ಸೂಕ್ಷ್ಮ ಸಮತೋಲನವನ್ನು ಸುಪ್ರೀಂ ಕೋರ್ಟ್ ಆಗಾಗ್ಗೆ ಒಪ್ಪಿಕೊಂಡಿದೆ ಎಂದು ನ್ಯಾಯಮೂರ್ತಿ ಕಾಂತ್ ಒತ್ತಿ ಹೇಳಿದರು. ಕಳೆದ ಕೆಲವು ದಶಕಗಳಲ್ಲಿ, ಪರಿಸರದ ಅವನತಿ, ಅರಣ್ಯನಾಶ ಮತ್ತು ಮಾಲಿನ್ಯವನ್ನು ತಡೆಗಟ್ಟಲು  ಕ್ರಮ ಕೈಗೊಳ್ಳಲಾಗಿದೆ ಎಂದು ನ್ಯಾಯಮೂರ್ತಿ ಕಾಂತ್ ಹೇಳಿದರು.

Advertisement

ಸುಪ್ರೀಂ ಕೋರ್ಟ್ ನ್ಯಾಯಾಧೀಶ, ನ್ಯಾಯಮೂರ್ತಿ ಸಂಜಯ್ ಕರೋಲ್, ಹವಾಮಾನ ಬದಲಾವಣೆಯನ್ನು ಕಾನೂನಿನ ಸ್ವತಂತ್ರ ಶಾಖೆಯಾಗಿ ಗುರುತಿಸುವ ಅಗತ್ಯವಿದೆ ಎಂದು ಹೇಳಿದರು, ಪರಿಸರ ಕಾನೂನುಗಳು, ಹವಾಮಾನ ಬದಲಾವಣೆಯ ಪರಿಣಾಮ, ಆಧುನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕಾದ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದರು.ಕೆಲವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳು, ತಮ್ಮ ಪ್ಲಾಸ್ಟಿಕ್ ತ್ಯಾಜ್ಯವನ್ನು ಹೆಚ್ಚಾಗಿ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ರಫ್ತು ಮಾಡುತ್ತವೆ. ಭಾರತ ಸೇರಿದಂತೆ ಅಭಿವೃದ್ಧಿಶೀಲ ರಾಷ್ಟ್ರಗಳು ಪರಿಸರ ಹಾನಿಯನ್ನು ತಡೆಗಟ್ಟಲು ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಕ್ರಮ ಕೈಗೊಂಡಿವೆ” ಎಂದು ನ್ಯಾಯಮೂರ್ತಿ ಕಾಂತ್ ಹೇಳಿದರು. ಅಭಿವೃದ್ಧಿಶೀಲ ರಾಷ್ಟ್ರಗಳು ಎದುರಿಸುತ್ತಿರುವ ಪರಿಸರ ಮತ್ತು ಆರ್ಥಿಕ ಸವಾಲುಗಳನ್ನು ಅವರು ಉಲ್ಬಣಗೊಳಿಸುತ್ತಾರೆ” ಎಂದು ಅವರು ಹೇಳಿದರು.

ನ್ಯಾ. ಕರೋಲ್‌ ಮಾತನಾಡಿ ರಸಗೊಬ್ಬರಗಳ ಅತಿಯಾದ ಬಳಕೆ ಮತ್ತು ಅತಿಯಾದ ಅಂತರ್ಜಲ ಬಳಕೆ ಹವಾಮಾನ ಬದಲಾವಣೆಯನ್ನು ತೀವ್ರಗೊಳಿಸಿದ್ದು ಕೃಷಿ ಮೇಲೆ ಪರಿಣಾಮ ಬೀರಿದೆ ಎಂದರು.  ಗಂಗಾನದಿಯನ್ನು ಸ್ವಚ್ಛಗೊಳಿಸಲು ಸರ್ಕಾರಗಳು ಸಾಕಷ್ಟು ಹಣ ಖರ್ಚು ಮಾಡಿದ್ದು, ಈಗ ಪರಿಸ್ಥಿತಿ ಏನಾಗಿದೆ ಎಂಬುದು ನಮಗೆ ತಿಳಿದಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಈ ಅಭಿಪ್ರಾಯಗಳಿಗೆ ಪೂರಕವಾಗಿ ಮಾತನಾಡಿದ ನ್ಯಾ. ನರಸಿಂಹ ಅವರು “ಜನರು ತಮ್ಮಷ್ಟಕ್ಕೆ ಬದಲಾಗದೆ ಕೇವಲ ಕಾನೂನು ಜಾರಿಯಿಂದ ಉಪಯೋಗವಾಗುವುದಿಲ್ಲ. ಜನ ಹಸಿರು ನ್ಯಾಯಮಂಡಳಿಗೆ ಅರ್ಜಿಗಳನ್ನು ಸಲ್ಲಿಸುತ್ತಲೇ ಇರುತ್ತಾರೆ” ನಿಷ್ಠುರ ಶಬ್ದಗಳಲ್ಲಿ ವಿವರಿಸಿದರು.

ಕಾರ್ಯಕ್ರಮದಲ್ಲಿ ಕೃತಿಕಾರ ಚೀಮಾ ಮಾತನಾಡಿದರು. ಹಾಲೆಂಡ್‌ನ ಹೇಗ್‌ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಮೂರ್ತಿ ದಲ್ವೀರ್ ಭಂಡಾರಿ ಅವರು ಪುಸ್ತಕಕ್ಕೆ ಮುನ್ನುಡಿ ಬರೆದಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

15 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

15 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

18 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

18 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

18 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

18 hours ago