Advertisement
MIRROR FOCUS

ಹವಾಮಾನ ವೈಪರೀತ್ಯ ತಡೆ ಅಗತ್ಯ | ಹವಾಮಾನ ಆಯೋಗ ರಚನೆ ಅಗತ್ಯ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಅಭಿಮತ |

Share

ಹವಾಮಾನ ಬದಲಾವಣೆಯು ಈಗ ದೇಶದಲ್ಲಿ ಗಂಭೀರ ಸ್ಥಿತಿಯನ್ನು ಉಂಟು ಮಾಡುತ್ತಿದೆ, ಇದರ ನಿಯಂತ್ರಣಕ್ಕೆ ಹಾಗೂ ಸಮಸ್ಯೆಗೆ ಸಮಗ್ರ ಪರಿಹಾರವನ್ನು ಕಂಡುಹಿಡಿಯಲು ನೀತಿ ಆಯೋಗದಂತೆಯೇ ಭಾರತದಲ್ಲಿ ಶಾಶ್ವತವಾದ ಹವಾಮಾನ ಆಯೋಗವನ್ನು ಸ್ಥಾಪಿಸುವ ಅಗತ್ಯ ಇದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕೆ ವಿ ವಿಶ್ವನಾಥನ್  ಹೇಳಿದ್ದಾರೆ.

Advertisement
Advertisement

ನವದೆಹಲಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ ವಕೀಲ ಜತಿಂದರ್‌ ಚೀಮಾ ಅವರ ‘ಕ್ಲೈಮೇಟ್‌ ಚೇಂಜ್‌: ದ ಪಾಲಿಸಿ, ಲಾ ಅಂಡ್‌ ಪ್ರಾಕ್ಟೀಸ್‌’ (ಹವಾಮಾನ ವೈಪರೀತ್ಯ: ನೀತಿ, ಕಾನೂನು ಮತ್ತು ವಕೀಲಿಕೆ) ಕೃತಿ ಬಿಡುಗಡೆ ಸಮಾರಂಭದಲ್ಲಿ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಪಿ.ಎಸ್.ನರಸಿಂಹ, ಸಂಜಯ್ ಕರೋಲ್ ಹಾಗೂ ಕೆ.ವಿ.ವಿಶ್ವನಾಥನ್ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡರು.

ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರಕ್ಕೆ ಇಂಗಾಲ ಹೊರಸೂಸುವಿಕೆಯನ್ನು ಕಡಿಮೆ ಮಾಡುವಂತಹ ಕಾನೂನುಗಳು ಸಾಕಾಗುವುದಿಲ್ಲ ಎಂದು ನ್ಯಾಯಮೂರ್ತಿ ವಿಶ್ವನಾಥನ್ ಹೇಳಿದರು. ದೇಶಕ್ಕೆ ಹವಾಮಾನ ಆಯೋಗದ ಅವಶ್ಯಕತೆಯಿದ್ದು, ಅದು ನೀತಿ ಆಯೋಗದಂತಹ ಶಾಶ್ವತ ಸಂಸ್ಥೆಯಾಗಿರಬೇಕು. ಇದರಿಂದಾಗಿ ಎಲ್ಲಾ ಕೋನಗಳಿಂದ ಸಮಸ್ಯೆಗಳನ್ನು ಪರಿಹರಿಲು ಸಾಧ್ಯವಾಗುತ್ತದೆ ಎಂದು ಅವರು ವಿವರಿಸಿದರು. ಭಾರತವು ಅಳವಡಿಸಿಕೊಳ್ಳಬೇಕಾದ ಹವಾಮಾನ ಬದಲಾವಣೆಯ  ಶಾಸನದ ಚೌಕಟ್ಟಿನ ಬಗ್ಗೆ ತಜ್ಞರ ನಡುವೆ ತೀವ್ರ ಚರ್ಚೆ ನಡೆಯುತ್ತಿದೆ ಎಂದು ನ್ಯಾಯಮೂರ್ತಿ ವಿಶ್ವನಾಥನ್ ಹೇಳಿದರು.

ಕೆಲವು ಅಭಿವೃದ್ಧಿ ಹೊಂದಿದ ದೇಶಗಳು ಇಂಗಾಲದ ಹೊರಸೂಸುವಿಕೆಯನ್ನು ನಿಯಂತ್ರಿಸುವ ಮೇಲೆ ಮಾತ್ರ ಗಮನಹರಿಸಲು ತಮ್ಮ ಕಾನೂನುಗಳನ್ನು ಹೇಗೆ ರಚಿಸುತ್ತವೆ ಎಂಬುದರ ವಿಶ್ಲೇಷಣೆ ನಡೆದಿದೆ. ಆದರೆ  ಭಾರತದಂತಹ ಅಭಿವೃದ್ಧಿ ಹೊಂದುತ್ತಿರುವ ದೇಶಕ್ಕೆ ಆ ಮಾದರಿ ಸೂಕ್ತವಲ್ಲ ಎಂದು ಅವರು ಹೇಳಿದರು.

ಮೂಲಸೌಕರ್ಯ ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಯ ನಡುವೆ ನಿರ್ವಹಿಸಬೇಕಾದ ಸೂಕ್ಷ್ಮ ಸಮತೋಲನವನ್ನು ಸುಪ್ರೀಂ ಕೋರ್ಟ್ ಆಗಾಗ್ಗೆ ಒಪ್ಪಿಕೊಂಡಿದೆ ಎಂದು ನ್ಯಾಯಮೂರ್ತಿ ಕಾಂತ್ ಒತ್ತಿ ಹೇಳಿದರು. ಕಳೆದ ಕೆಲವು ದಶಕಗಳಲ್ಲಿ, ಪರಿಸರದ ಅವನತಿ, ಅರಣ್ಯನಾಶ ಮತ್ತು ಮಾಲಿನ್ಯವನ್ನು ತಡೆಗಟ್ಟಲು  ಕ್ರಮ ಕೈಗೊಳ್ಳಲಾಗಿದೆ ಎಂದು ನ್ಯಾಯಮೂರ್ತಿ ಕಾಂತ್ ಹೇಳಿದರು.

ಸುಪ್ರೀಂ ಕೋರ್ಟ್ ನ್ಯಾಯಾಧೀಶ, ನ್ಯಾಯಮೂರ್ತಿ ಸಂಜಯ್ ಕರೋಲ್, ಹವಾಮಾನ ಬದಲಾವಣೆಯನ್ನು ಕಾನೂನಿನ ಸ್ವತಂತ್ರ ಶಾಖೆಯಾಗಿ ಗುರುತಿಸುವ ಅಗತ್ಯವಿದೆ ಎಂದು ಹೇಳಿದರು, ಪರಿಸರ ಕಾನೂನುಗಳು, ಹವಾಮಾನ ಬದಲಾವಣೆಯ ಪರಿಣಾಮ, ಆಧುನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕಾದ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದರು.ಕೆಲವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳು, ತಮ್ಮ ಪ್ಲಾಸ್ಟಿಕ್ ತ್ಯಾಜ್ಯವನ್ನು ಹೆಚ್ಚಾಗಿ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ರಫ್ತು ಮಾಡುತ್ತವೆ. ಭಾರತ ಸೇರಿದಂತೆ ಅಭಿವೃದ್ಧಿಶೀಲ ರಾಷ್ಟ್ರಗಳು ಪರಿಸರ ಹಾನಿಯನ್ನು ತಡೆಗಟ್ಟಲು ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಕ್ರಮ ಕೈಗೊಂಡಿವೆ” ಎಂದು ನ್ಯಾಯಮೂರ್ತಿ ಕಾಂತ್ ಹೇಳಿದರು. ಅಭಿವೃದ್ಧಿಶೀಲ ರಾಷ್ಟ್ರಗಳು ಎದುರಿಸುತ್ತಿರುವ ಪರಿಸರ ಮತ್ತು ಆರ್ಥಿಕ ಸವಾಲುಗಳನ್ನು ಅವರು ಉಲ್ಬಣಗೊಳಿಸುತ್ತಾರೆ” ಎಂದು ಅವರು ಹೇಳಿದರು.

ನ್ಯಾ. ಕರೋಲ್‌ ಮಾತನಾಡಿ ರಸಗೊಬ್ಬರಗಳ ಅತಿಯಾದ ಬಳಕೆ ಮತ್ತು ಅತಿಯಾದ ಅಂತರ್ಜಲ ಬಳಕೆ ಹವಾಮಾನ ಬದಲಾವಣೆಯನ್ನು ತೀವ್ರಗೊಳಿಸಿದ್ದು ಕೃಷಿ ಮೇಲೆ ಪರಿಣಾಮ ಬೀರಿದೆ ಎಂದರು.  ಗಂಗಾನದಿಯನ್ನು ಸ್ವಚ್ಛಗೊಳಿಸಲು ಸರ್ಕಾರಗಳು ಸಾಕಷ್ಟು ಹಣ ಖರ್ಚು ಮಾಡಿದ್ದು, ಈಗ ಪರಿಸ್ಥಿತಿ ಏನಾಗಿದೆ ಎಂಬುದು ನಮಗೆ ತಿಳಿದಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಈ ಅಭಿಪ್ರಾಯಗಳಿಗೆ ಪೂರಕವಾಗಿ ಮಾತನಾಡಿದ ನ್ಯಾ. ನರಸಿಂಹ ಅವರು “ಜನರು ತಮ್ಮಷ್ಟಕ್ಕೆ ಬದಲಾಗದೆ ಕೇವಲ ಕಾನೂನು ಜಾರಿಯಿಂದ ಉಪಯೋಗವಾಗುವುದಿಲ್ಲ. ಜನ ಹಸಿರು ನ್ಯಾಯಮಂಡಳಿಗೆ ಅರ್ಜಿಗಳನ್ನು ಸಲ್ಲಿಸುತ್ತಲೇ ಇರುತ್ತಾರೆ” ನಿಷ್ಠುರ ಶಬ್ದಗಳಲ್ಲಿ ವಿವರಿಸಿದರು.

ಕಾರ್ಯಕ್ರಮದಲ್ಲಿ ಕೃತಿಕಾರ ಚೀಮಾ ಮಾತನಾಡಿದರು. ಹಾಲೆಂಡ್‌ನ ಹೇಗ್‌ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಮೂರ್ತಿ ದಲ್ವೀರ್ ಭಂಡಾರಿ ಅವರು ಪುಸ್ತಕಕ್ಕೆ ಮುನ್ನುಡಿ ಬರೆದಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

30 minutes ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago