Advertisement
ಸುದ್ದಿಗಳು

#JusticeforNandini | ಆನೆ ಆಯ್ತು…. ಈಗ ದನ | ಹಿಮಾಚಲ ಪ್ರದೇಶದಲ್ಲಿ ಸ್ಫೋಟಕ ತಿಂದು ದನದ ದವಡೆ ಸ್ಫೋಟ….|

Share

ಮಾನವ ಕ್ರೂರಿಯಾಗುತ್ತಿದ್ದಾನೆ.  ಆನೆ , ದನ ಹೀಗೆ ಎಲ್ಲಾ ಪ್ರಾಣಿಗಳನ್ನೂ ಕ್ರೂರವಾಗಿ ಸಾಯಿಸುತ್ತಿದ್ದಾನೆ. ಕೇರಳದಲ್ಲಿ ಗರ್ಭಿಣಿ ಕಾಡಾನೆ ಅನಾನಸಿನಲ್ಲಿ ಸ್ಫೋಟಕ  ತಿಂದು ನರಳಿ ಸತ್ತರೆ, ಇದೀಗ ಹಿಮಾಚಲ ಪ್ರದೇಶದಲ್ಲೂ ಅದೇ ಮಾದರಿಯ ಹೃದಯ ವಿದ್ರಾವಕ ಘಟನೆ ನಡೆದಿದೆ.  ಪಟಾಕಿ ಸುತ್ತಿದ ಗೋಧಿ ಉಂಡೆ ತಿಂದು ಹಸುವಿನ ದವಡೆ ಸ್ಫೋಟಗೊಂಡಿದೆ. ಈ ವರ್ಷದ ಮೊದಲು ಅಂದರೆ ಫೆಬ್ರವರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಅಂತಹದ್ದೇ ಘಟನೆ ನಡೆದಿತ್ತು. ಸ್ಫೋಟಕ ತಿಂದು ದನದ ದವಡೆ ಸೀಳಿತ್ತು.

Advertisement
Advertisement

 

ನವದೆಹಲಿ: ಕೇರಳದಲ್ಲಿ ಸ್ಫೋಟಕ ತುಂಬಿಸಿದ್ದ ಅನಾನಸ್ ತಿಂದು ದವಡೆ ಸೀಳಿ ಆಹಾರ ಸೇವಿಸಲಾಗದೆ ನರಳಿ ಸತ್ತ ಘಟನೆ ಮರೆಯುವ ಮುನ್ನವೇ ಹಿಮಾಚಲ ಪ್ರದೇಶದಲ್ಲಿ  ಗರ್ಭಿಣಿ ಹಸುವೊಂದು ಸ್ಫೋಟಕ ಸುತ್ತಿಟ್ಟ ಗೋಧಿ ಹಿಟ್ಟು ತಿಂದು ದವಡೆ ಸೀಳಿದ ಘಟನೆ ನಡೆದಿದೆ.

ಹಿಮಾಚಲ ಪ್ರದೇಶದ  ಬಿಲಾಸ್ಪುರ ಜಿಲ್ಲೆಯ ಜಾಂಡುಟ್ಟಾ ಪ್ರದೇಶದಲ್ಲಿ ನಡೆದಿದೆ ಎನ್ನಲಾಗಿರುವ ಈ ಘಟನೆ ನಡೆದು ವಾರ ಕಳೆದಿದೆ. ಸೋಶೀಯಲ್ ಮೀಡಿಯಾಗಳಲ್ಲಿ ದನದ ವೀಡಿಯೋ ವೈರಸ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಇದೀಗ ಗೋಪ್ರೇಮಿಗಳು #JusticeforNandini  ಎಂದು ಟ್ವಿಟ್ಟರ್ ನಲ್ಲಿ  ಅಭಿಯಾನ ಶುರು ಮಾಡಿದ್ದು ದನದ ದವಡೆ ಸ್ಫೋಟಕ್ಕೆ ಕಾರಣವಾದವರ ಮೇಲೆ ಸೂಕ್ತ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ  ಬಿಲಾಸ್ಪುರ್ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಗರ್ಭ ಧರಿಸಿದ ಹಸುವಿನ ಮಾಲೀಕರು ಸಲ್ಲಿಸಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮೇ 26 ರಂದು ಬಿಲಾಸ್ಪುರ ಜಿಲ್ಲೆಯ ಜಾಂಡುಟ್ಟಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದರೂ  ಶನಿವಾರ ಹಸುವಿನ ಮಾಲಕ ಗುರುದಯಾಲ್ ಸಿಂಗ್ ಅವರು ಗಾಯಗೊಂಡ ಗೋವಿನ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದಾಗ ಬೆಳಕಿಗೆ ಬಂದಿದೆ

ಹಸುವಿನ ಮಾಲೀಕರ ನೆರೆಹೊರೆಯವರಾದ ನಂದಾ ಲಾಲ್ ಅವರು  ಹಸುವಿಗೆ ಪಟಾಕಿ ತುಂಬಿದ ಗೋಧಿ ಹಿಟ್ಟಿನ ಚೆಂಡುಗಳನ್ನು ಆಹಾರಕ್ಕಾಗಿ ಹೊಲದಲ್ಲಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಲಾಸ್ಪುರ ಪೊಲೀಸ್ ಅಧೀಕ್ಷಕರು ಹಸುವಿಗೆ ಸ್ಥಳೀಯ ಭಾಷೆಯ ‘ಆಲು ಬಾಂಬ್’ ಎಂಬ  ಸ್ಫೋಟಕ ತಿನ್ನಿಸಿದ್ದಾರೆ ಎಂದು  ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇಂತಹದ್ದೇ ಘಟನೆ ನಡೆದಿತ್ತು….!

ಕೇರಳದಲ್ಲಿ ಕಾಡಾನೆ ಸ್ಫೋಟಕ ತಿಂದು ನರಳಿ ಸತ್ತರೆ, ಹಿಮಾಚಲ ಪ್ರದೇಶದಲ್ಲೂ ಅಂತಹದ್ದೇ ಮಾದರಿ ಕಂಡು ದೇಶವೇ ದಂಗಾಗಿ ಹೋಗಿದೆ. ಇಂತಹದ್ದೇ ಘಟನೆ ಫೆಬ್ರವರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ದೇರಾಜೆಯ ಬಲ್ಯದ  ಸಂಪಡ್ಕ ಎಂಬಲ್ಲಿ ಸ್ಫೋಟಕ ತಿಂದು ಹಸುವಿನ ದವಡೆ ಕಿತ್ತುಹೋಗಿ ಗಂಭೀರ ಗಾಯಗೊಂಡಿತ್ತು. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಅದಾದ ಬಳಿಕ ಸಂಘಟನೆಗಳು ಈ  ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದರು. ಬಳಿಕ ಇಲಾಖೆಗಳು ಕಾರ್ಯಪ್ರವೃತ್ತವಾದರೂ ಸೂಕ್ತ ನ್ಯಾಯ ಸಿಗಲಿಲ್ಲ ಎಂಬ ಆರೋಪಗಳು ಕೇಳಿಬಂದಿತ್ತು. ಇದಕ್ಕಾಗಿ ಆರೋಪ-ಪ್ರತ್ಯಾರೋಪಗಳು ನಡೆದಿತ್ತು. ಬಳಿಕ ಪ್ರಕರಣ ತಣ್ಣಗಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

5 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago