Advertisement
ಸುದ್ದಿಗಳು

#JusticeforNandini | ಆನೆ ಆಯ್ತು…. ಈಗ ದನ | ಹಿಮಾಚಲ ಪ್ರದೇಶದಲ್ಲಿ ಸ್ಫೋಟಕ ತಿಂದು ದನದ ದವಡೆ ಸ್ಫೋಟ….|

Share

ಮಾನವ ಕ್ರೂರಿಯಾಗುತ್ತಿದ್ದಾನೆ.  ಆನೆ , ದನ ಹೀಗೆ ಎಲ್ಲಾ ಪ್ರಾಣಿಗಳನ್ನೂ ಕ್ರೂರವಾಗಿ ಸಾಯಿಸುತ್ತಿದ್ದಾನೆ. ಕೇರಳದಲ್ಲಿ ಗರ್ಭಿಣಿ ಕಾಡಾನೆ ಅನಾನಸಿನಲ್ಲಿ ಸ್ಫೋಟಕ  ತಿಂದು ನರಳಿ ಸತ್ತರೆ, ಇದೀಗ ಹಿಮಾಚಲ ಪ್ರದೇಶದಲ್ಲೂ ಅದೇ ಮಾದರಿಯ ಹೃದಯ ವಿದ್ರಾವಕ ಘಟನೆ ನಡೆದಿದೆ.  ಪಟಾಕಿ ಸುತ್ತಿದ ಗೋಧಿ ಉಂಡೆ ತಿಂದು ಹಸುವಿನ ದವಡೆ ಸ್ಫೋಟಗೊಂಡಿದೆ. ಈ ವರ್ಷದ ಮೊದಲು ಅಂದರೆ ಫೆಬ್ರವರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಅಂತಹದ್ದೇ ಘಟನೆ ನಡೆದಿತ್ತು. ಸ್ಫೋಟಕ ತಿಂದು ದನದ ದವಡೆ ಸೀಳಿತ್ತು.


 

ನವದೆಹಲಿ: ಕೇರಳದಲ್ಲಿ ಸ್ಫೋಟಕ ತುಂಬಿಸಿದ್ದ ಅನಾನಸ್ ತಿಂದು ದವಡೆ ಸೀಳಿ ಆಹಾರ ಸೇವಿಸಲಾಗದೆ ನರಳಿ ಸತ್ತ ಘಟನೆ ಮರೆಯುವ ಮುನ್ನವೇ ಹಿಮಾಚಲ ಪ್ರದೇಶದಲ್ಲಿ  ಗರ್ಭಿಣಿ ಹಸುವೊಂದು ಸ್ಫೋಟಕ ಸುತ್ತಿಟ್ಟ ಗೋಧಿ ಹಿಟ್ಟು ತಿಂದು ದವಡೆ ಸೀಳಿದ ಘಟನೆ ನಡೆದಿದೆ.

ಹಿಮಾಚಲ ಪ್ರದೇಶದ  ಬಿಲಾಸ್ಪುರ ಜಿಲ್ಲೆಯ ಜಾಂಡುಟ್ಟಾ ಪ್ರದೇಶದಲ್ಲಿ ನಡೆದಿದೆ ಎನ್ನಲಾಗಿರುವ ಈ ಘಟನೆ ನಡೆದು ವಾರ ಕಳೆದಿದೆ. ಸೋಶೀಯಲ್ ಮೀಡಿಯಾಗಳಲ್ಲಿ ದನದ ವೀಡಿಯೋ ವೈರಸ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಇದೀಗ ಗೋಪ್ರೇಮಿಗಳು #JusticeforNandini  ಎಂದು ಟ್ವಿಟ್ಟರ್ ನಲ್ಲಿ  ಅಭಿಯಾನ ಶುರು ಮಾಡಿದ್ದು ದನದ ದವಡೆ ಸ್ಫೋಟಕ್ಕೆ ಕಾರಣವಾದವರ ಮೇಲೆ ಸೂಕ್ತ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ  ಬಿಲಾಸ್ಪುರ್ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಗರ್ಭ ಧರಿಸಿದ ಹಸುವಿನ ಮಾಲೀಕರು ಸಲ್ಲಿಸಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮೇ 26 ರಂದು ಬಿಲಾಸ್ಪುರ ಜಿಲ್ಲೆಯ ಜಾಂಡುಟ್ಟಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದರೂ  ಶನಿವಾರ ಹಸುವಿನ ಮಾಲಕ ಗುರುದಯಾಲ್ ಸಿಂಗ್ ಅವರು ಗಾಯಗೊಂಡ ಗೋವಿನ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದಾಗ ಬೆಳಕಿಗೆ ಬಂದಿದೆ

ಹಸುವಿನ ಮಾಲೀಕರ ನೆರೆಹೊರೆಯವರಾದ ನಂದಾ ಲಾಲ್ ಅವರು  ಹಸುವಿಗೆ ಪಟಾಕಿ ತುಂಬಿದ ಗೋಧಿ ಹಿಟ್ಟಿನ ಚೆಂಡುಗಳನ್ನು ಆಹಾರಕ್ಕಾಗಿ ಹೊಲದಲ್ಲಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಲಾಸ್ಪುರ ಪೊಲೀಸ್ ಅಧೀಕ್ಷಕರು ಹಸುವಿಗೆ ಸ್ಥಳೀಯ ಭಾಷೆಯ ‘ಆಲು ಬಾಂಬ್’ ಎಂಬ  ಸ್ಫೋಟಕ ತಿನ್ನಿಸಿದ್ದಾರೆ ಎಂದು  ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇಂತಹದ್ದೇ ಘಟನೆ ನಡೆದಿತ್ತು….!

ಕೇರಳದಲ್ಲಿ ಕಾಡಾನೆ ಸ್ಫೋಟಕ ತಿಂದು ನರಳಿ ಸತ್ತರೆ, ಹಿಮಾಚಲ ಪ್ರದೇಶದಲ್ಲೂ ಅಂತಹದ್ದೇ ಮಾದರಿ ಕಂಡು ದೇಶವೇ ದಂಗಾಗಿ ಹೋಗಿದೆ. ಇಂತಹದ್ದೇ ಘಟನೆ ಫೆಬ್ರವರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ದೇರಾಜೆಯ ಬಲ್ಯದ  ಸಂಪಡ್ಕ ಎಂಬಲ್ಲಿ ಸ್ಫೋಟಕ ತಿಂದು ಹಸುವಿನ ದವಡೆ ಕಿತ್ತುಹೋಗಿ ಗಂಭೀರ ಗಾಯಗೊಂಡಿತ್ತು. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಅದಾದ ಬಳಿಕ ಸಂಘಟನೆಗಳು ಈ  ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದರು. ಬಳಿಕ ಇಲಾಖೆಗಳು ಕಾರ್ಯಪ್ರವೃತ್ತವಾದರೂ ಸೂಕ್ತ ನ್ಯಾಯ ಸಿಗಲಿಲ್ಲ ಎಂಬ ಆರೋಪಗಳು ಕೇಳಿಬಂದಿತ್ತು. ಇದಕ್ಕಾಗಿ ಆರೋಪ-ಪ್ರತ್ಯಾರೋಪಗಳು ನಡೆದಿತ್ತು. ಬಳಿಕ ಪ್ರಕರಣ ತಣ್ಣಗಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

3 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

4 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

14 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

15 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

20 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

20 hours ago