Advertisement
ಸುದ್ದಿಗಳು

#JusticeforNandini | ಆನೆ ಆಯ್ತು…. ಈಗ ದನ | ಹಿಮಾಚಲ ಪ್ರದೇಶದಲ್ಲಿ ಸ್ಫೋಟಕ ತಿಂದು ದನದ ದವಡೆ ಸ್ಫೋಟ….|

Share

ಮಾನವ ಕ್ರೂರಿಯಾಗುತ್ತಿದ್ದಾನೆ.  ಆನೆ , ದನ ಹೀಗೆ ಎಲ್ಲಾ ಪ್ರಾಣಿಗಳನ್ನೂ ಕ್ರೂರವಾಗಿ ಸಾಯಿಸುತ್ತಿದ್ದಾನೆ. ಕೇರಳದಲ್ಲಿ ಗರ್ಭಿಣಿ ಕಾಡಾನೆ ಅನಾನಸಿನಲ್ಲಿ ಸ್ಫೋಟಕ  ತಿಂದು ನರಳಿ ಸತ್ತರೆ, ಇದೀಗ ಹಿಮಾಚಲ ಪ್ರದೇಶದಲ್ಲೂ ಅದೇ ಮಾದರಿಯ ಹೃದಯ ವಿದ್ರಾವಕ ಘಟನೆ ನಡೆದಿದೆ.  ಪಟಾಕಿ ಸುತ್ತಿದ ಗೋಧಿ ಉಂಡೆ ತಿಂದು ಹಸುವಿನ ದವಡೆ ಸ್ಫೋಟಗೊಂಡಿದೆ. ಈ ವರ್ಷದ ಮೊದಲು ಅಂದರೆ ಫೆಬ್ರವರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಅಂತಹದ್ದೇ ಘಟನೆ ನಡೆದಿತ್ತು. ಸ್ಫೋಟಕ ತಿಂದು ದನದ ದವಡೆ ಸೀಳಿತ್ತು.


 

ನವದೆಹಲಿ: ಕೇರಳದಲ್ಲಿ ಸ್ಫೋಟಕ ತುಂಬಿಸಿದ್ದ ಅನಾನಸ್ ತಿಂದು ದವಡೆ ಸೀಳಿ ಆಹಾರ ಸೇವಿಸಲಾಗದೆ ನರಳಿ ಸತ್ತ ಘಟನೆ ಮರೆಯುವ ಮುನ್ನವೇ ಹಿಮಾಚಲ ಪ್ರದೇಶದಲ್ಲಿ  ಗರ್ಭಿಣಿ ಹಸುವೊಂದು ಸ್ಫೋಟಕ ಸುತ್ತಿಟ್ಟ ಗೋಧಿ ಹಿಟ್ಟು ತಿಂದು ದವಡೆ ಸೀಳಿದ ಘಟನೆ ನಡೆದಿದೆ.

ಹಿಮಾಚಲ ಪ್ರದೇಶದ  ಬಿಲಾಸ್ಪುರ ಜಿಲ್ಲೆಯ ಜಾಂಡುಟ್ಟಾ ಪ್ರದೇಶದಲ್ಲಿ ನಡೆದಿದೆ ಎನ್ನಲಾಗಿರುವ ಈ ಘಟನೆ ನಡೆದು ವಾರ ಕಳೆದಿದೆ. ಸೋಶೀಯಲ್ ಮೀಡಿಯಾಗಳಲ್ಲಿ ದನದ ವೀಡಿಯೋ ವೈರಸ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಇದೀಗ ಗೋಪ್ರೇಮಿಗಳು #JusticeforNandini  ಎಂದು ಟ್ವಿಟ್ಟರ್ ನಲ್ಲಿ  ಅಭಿಯಾನ ಶುರು ಮಾಡಿದ್ದು ದನದ ದವಡೆ ಸ್ಫೋಟಕ್ಕೆ ಕಾರಣವಾದವರ ಮೇಲೆ ಸೂಕ್ತ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ  ಬಿಲಾಸ್ಪುರ್ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಗರ್ಭ ಧರಿಸಿದ ಹಸುವಿನ ಮಾಲೀಕರು ಸಲ್ಲಿಸಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮೇ 26 ರಂದು ಬಿಲಾಸ್ಪುರ ಜಿಲ್ಲೆಯ ಜಾಂಡುಟ್ಟಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದರೂ  ಶನಿವಾರ ಹಸುವಿನ ಮಾಲಕ ಗುರುದಯಾಲ್ ಸಿಂಗ್ ಅವರು ಗಾಯಗೊಂಡ ಗೋವಿನ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದಾಗ ಬೆಳಕಿಗೆ ಬಂದಿದೆ

ಹಸುವಿನ ಮಾಲೀಕರ ನೆರೆಹೊರೆಯವರಾದ ನಂದಾ ಲಾಲ್ ಅವರು  ಹಸುವಿಗೆ ಪಟಾಕಿ ತುಂಬಿದ ಗೋಧಿ ಹಿಟ್ಟಿನ ಚೆಂಡುಗಳನ್ನು ಆಹಾರಕ್ಕಾಗಿ ಹೊಲದಲ್ಲಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಲಾಸ್ಪುರ ಪೊಲೀಸ್ ಅಧೀಕ್ಷಕರು ಹಸುವಿಗೆ ಸ್ಥಳೀಯ ಭಾಷೆಯ ‘ಆಲು ಬಾಂಬ್’ ಎಂಬ  ಸ್ಫೋಟಕ ತಿನ್ನಿಸಿದ್ದಾರೆ ಎಂದು  ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇಂತಹದ್ದೇ ಘಟನೆ ನಡೆದಿತ್ತು….!

ಕೇರಳದಲ್ಲಿ ಕಾಡಾನೆ ಸ್ಫೋಟಕ ತಿಂದು ನರಳಿ ಸತ್ತರೆ, ಹಿಮಾಚಲ ಪ್ರದೇಶದಲ್ಲೂ ಅಂತಹದ್ದೇ ಮಾದರಿ ಕಂಡು ದೇಶವೇ ದಂಗಾಗಿ ಹೋಗಿದೆ. ಇಂತಹದ್ದೇ ಘಟನೆ ಫೆಬ್ರವರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ದೇರಾಜೆಯ ಬಲ್ಯದ  ಸಂಪಡ್ಕ ಎಂಬಲ್ಲಿ ಸ್ಫೋಟಕ ತಿಂದು ಹಸುವಿನ ದವಡೆ ಕಿತ್ತುಹೋಗಿ ಗಂಭೀರ ಗಾಯಗೊಂಡಿತ್ತು. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಅದಾದ ಬಳಿಕ ಸಂಘಟನೆಗಳು ಈ  ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದರು. ಬಳಿಕ ಇಲಾಖೆಗಳು ಕಾರ್ಯಪ್ರವೃತ್ತವಾದರೂ ಸೂಕ್ತ ನ್ಯಾಯ ಸಿಗಲಿಲ್ಲ ಎಂಬ ಆರೋಪಗಳು ಕೇಳಿಬಂದಿತ್ತು. ಇದಕ್ಕಾಗಿ ಆರೋಪ-ಪ್ರತ್ಯಾರೋಪಗಳು ನಡೆದಿತ್ತು. ಬಳಿಕ ಪ್ರಕರಣ ತಣ್ಣಗಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

2 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

6 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

16 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

16 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

17 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

19 hours ago