Advertisement
ಸುದ್ದಿಗಳು

#JusticeforNandini | ಆನೆ ಆಯ್ತು…. ಈಗ ದನ | ಹಿಮಾಚಲ ಪ್ರದೇಶದಲ್ಲಿ ಸ್ಫೋಟಕ ತಿಂದು ದನದ ದವಡೆ ಸ್ಫೋಟ….|

Share

ಮಾನವ ಕ್ರೂರಿಯಾಗುತ್ತಿದ್ದಾನೆ.  ಆನೆ , ದನ ಹೀಗೆ ಎಲ್ಲಾ ಪ್ರಾಣಿಗಳನ್ನೂ ಕ್ರೂರವಾಗಿ ಸಾಯಿಸುತ್ತಿದ್ದಾನೆ. ಕೇರಳದಲ್ಲಿ ಗರ್ಭಿಣಿ ಕಾಡಾನೆ ಅನಾನಸಿನಲ್ಲಿ ಸ್ಫೋಟಕ  ತಿಂದು ನರಳಿ ಸತ್ತರೆ, ಇದೀಗ ಹಿಮಾಚಲ ಪ್ರದೇಶದಲ್ಲೂ ಅದೇ ಮಾದರಿಯ ಹೃದಯ ವಿದ್ರಾವಕ ಘಟನೆ ನಡೆದಿದೆ.  ಪಟಾಕಿ ಸುತ್ತಿದ ಗೋಧಿ ಉಂಡೆ ತಿಂದು ಹಸುವಿನ ದವಡೆ ಸ್ಫೋಟಗೊಂಡಿದೆ. ಈ ವರ್ಷದ ಮೊದಲು ಅಂದರೆ ಫೆಬ್ರವರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಅಂತಹದ್ದೇ ಘಟನೆ ನಡೆದಿತ್ತು. ಸ್ಫೋಟಕ ತಿಂದು ದನದ ದವಡೆ ಸೀಳಿತ್ತು.

Advertisement

 

ನವದೆಹಲಿ: ಕೇರಳದಲ್ಲಿ ಸ್ಫೋಟಕ ತುಂಬಿಸಿದ್ದ ಅನಾನಸ್ ತಿಂದು ದವಡೆ ಸೀಳಿ ಆಹಾರ ಸೇವಿಸಲಾಗದೆ ನರಳಿ ಸತ್ತ ಘಟನೆ ಮರೆಯುವ ಮುನ್ನವೇ ಹಿಮಾಚಲ ಪ್ರದೇಶದಲ್ಲಿ  ಗರ್ಭಿಣಿ ಹಸುವೊಂದು ಸ್ಫೋಟಕ ಸುತ್ತಿಟ್ಟ ಗೋಧಿ ಹಿಟ್ಟು ತಿಂದು ದವಡೆ ಸೀಳಿದ ಘಟನೆ ನಡೆದಿದೆ.

ಹಿಮಾಚಲ ಪ್ರದೇಶದ  ಬಿಲಾಸ್ಪುರ ಜಿಲ್ಲೆಯ ಜಾಂಡುಟ್ಟಾ ಪ್ರದೇಶದಲ್ಲಿ ನಡೆದಿದೆ ಎನ್ನಲಾಗಿರುವ ಈ ಘಟನೆ ನಡೆದು ವಾರ ಕಳೆದಿದೆ. ಸೋಶೀಯಲ್ ಮೀಡಿಯಾಗಳಲ್ಲಿ ದನದ ವೀಡಿಯೋ ವೈರಸ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಇದೀಗ ಗೋಪ್ರೇಮಿಗಳು #JusticeforNandini  ಎಂದು ಟ್ವಿಟ್ಟರ್ ನಲ್ಲಿ  ಅಭಿಯಾನ ಶುರು ಮಾಡಿದ್ದು ದನದ ದವಡೆ ಸ್ಫೋಟಕ್ಕೆ ಕಾರಣವಾದವರ ಮೇಲೆ ಸೂಕ್ತ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ  ಬಿಲಾಸ್ಪುರ್ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಗರ್ಭ ಧರಿಸಿದ ಹಸುವಿನ ಮಾಲೀಕರು ಸಲ್ಲಿಸಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮೇ 26 ರಂದು ಬಿಲಾಸ್ಪುರ ಜಿಲ್ಲೆಯ ಜಾಂಡುಟ್ಟಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದರೂ  ಶನಿವಾರ ಹಸುವಿನ ಮಾಲಕ ಗುರುದಯಾಲ್ ಸಿಂಗ್ ಅವರು ಗಾಯಗೊಂಡ ಗೋವಿನ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದಾಗ ಬೆಳಕಿಗೆ ಬಂದಿದೆ

ಹಸುವಿನ ಮಾಲೀಕರ ನೆರೆಹೊರೆಯವರಾದ ನಂದಾ ಲಾಲ್ ಅವರು  ಹಸುವಿಗೆ ಪಟಾಕಿ ತುಂಬಿದ ಗೋಧಿ ಹಿಟ್ಟಿನ ಚೆಂಡುಗಳನ್ನು ಆಹಾರಕ್ಕಾಗಿ ಹೊಲದಲ್ಲಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಲಾಸ್ಪುರ ಪೊಲೀಸ್ ಅಧೀಕ್ಷಕರು ಹಸುವಿಗೆ ಸ್ಥಳೀಯ ಭಾಷೆಯ ‘ಆಲು ಬಾಂಬ್’ ಎಂಬ  ಸ್ಫೋಟಕ ತಿನ್ನಿಸಿದ್ದಾರೆ ಎಂದು  ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇಂತಹದ್ದೇ ಘಟನೆ ನಡೆದಿತ್ತು….!

ಕೇರಳದಲ್ಲಿ ಕಾಡಾನೆ ಸ್ಫೋಟಕ ತಿಂದು ನರಳಿ ಸತ್ತರೆ, ಹಿಮಾಚಲ ಪ್ರದೇಶದಲ್ಲೂ ಅಂತಹದ್ದೇ ಮಾದರಿ ಕಂಡು ದೇಶವೇ ದಂಗಾಗಿ ಹೋಗಿದೆ. ಇಂತಹದ್ದೇ ಘಟನೆ ಫೆಬ್ರವರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ದೇರಾಜೆಯ ಬಲ್ಯದ  ಸಂಪಡ್ಕ ಎಂಬಲ್ಲಿ ಸ್ಫೋಟಕ ತಿಂದು ಹಸುವಿನ ದವಡೆ ಕಿತ್ತುಹೋಗಿ ಗಂಭೀರ ಗಾಯಗೊಂಡಿತ್ತು. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಅದಾದ ಬಳಿಕ ಸಂಘಟನೆಗಳು ಈ  ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದರು. ಬಳಿಕ ಇಲಾಖೆಗಳು ಕಾರ್ಯಪ್ರವೃತ್ತವಾದರೂ ಸೂಕ್ತ ನ್ಯಾಯ ಸಿಗಲಿಲ್ಲ ಎಂಬ ಆರೋಪಗಳು ಕೇಳಿಬಂದಿತ್ತು. ಇದಕ್ಕಾಗಿ ಆರೋಪ-ಪ್ರತ್ಯಾರೋಪಗಳು ನಡೆದಿತ್ತು. ಬಳಿಕ ಪ್ರಕರಣ ತಣ್ಣಗಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

2 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

16 hours ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

16 hours ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

1 day ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

1 day ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

2 days ago