ಗ್ರಾಮೀಣ ಭಾರತ | ಅನಾರೋಗ್ಯಕ್ಕೆ ತುತ್ತಾದ ಮಹಿಳೆಯನ್ನು ಬಡಿಗೆಯಲ್ಲಿ ಕಟ್ಟಿ ಆಸ್ಪತ್ರೆಗೆ ಸಾಗಿಸಿದ ಘಟನೆ | ಜೀಪು ಸಾಗುವ ವ್ಯವಸ್ಥೆ ಇದ್ದರೂ ಬಡಿಗೆಯಲ್ಲಿ ಹೊತ್ತರು…! | ಗ್ರಾಪಂ ಸದಸ್ಯರಿಂದ ತರಾಟೆ | ರಸ್ತೆಗಾಗಿ ವಾಸ್ತವ ತಿರುಚಿದರು..!?

August 25, 2022
6:34 PM

ರಸ್ತೆ‌ ಸರಿಯಿಲ್ಲದ‌ ಕಾರಣ ವೃದ್ದೆಯನ್ನು ಮರದ ಬಡಿಗೆಯಲ್ಲಿ ಕಟ್ಟಿ ಆಸ್ಪತ್ರೆಗೆ ಸಾಗಾಟ ಘಟನೆ ವಾರಗಳ ಹಿಂದೆ ಸುಳ್ಯ ವಿಧಾನಸಭಾ ಕ್ಷೇತ್ರ ಕಡಬದ ಬಳ್ಳಕ್ಕದಿಂದ ವರದಿಯಾಗಿತ್ತು. ಇದೀಗ ಈ ಘಟನೆಯ ಅಸಲಿಯ ಬಗ್ಗೆ ಆ ವಾರ್ಡ್‌ ನ ಗ್ರಾಪಂ ಸದಸ್ಯರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸಿದ್ದಾರೆ. ರಸ್ತೆ ಸರಿ ಇಲ್ಲ ಎಂದು ಬಿಂಬಿಸಲು ವೃದ್ಧೆಯನ್ನು ಬಡಿಗೆಯಲ್ಲಿ ಕಟ್ಟಿ ವೈರಲ್‌ ಮಾಡಿರುವುದು  ಈಗ ಬೆಳಕಿಗೆ ಬಂದಿದೆ. ಗ್ರಾಮೀಣ ಭಾರತದ ನಿಜವಾದ ಕಾಳಜಿಗೆ ಇದೊಂದು ಅಪಚಾರವಾಗಿದೆ.

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾ.ಪಂ ವ್ಯಾಪ್ತಿಯ ಕಲ್ಲುಗುಡ್ಡೆ ಸಮೀಪದ ಬಳ್ಳಕ್ಕ ಎಂಬಲ್ಲಿ ಆ.19 ರಂದು ಈ ಘಟನೆ ನಡೆದಿದೆ. 70 ವರ್ಷದ ಮಹಿಳೆಯೊಬ್ಬರು ಕಾಲು ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಎಂಜಿರ ಮೂಲಕ ಉಪ್ಪಿನಂಗಡಿಗೆ ತುರ್ತಾಗಿ ಕರೆದೊಯ್ಯಬೇಕಿತ್ತು. ರಸ್ತೆ ಇದ್ದರೂ ಅಭಿವೃದ್ದಿ ಕಾರಣ ಹಿನ್ನೆಲೆಯಲ್ಲಿ ವಾಹನ ಓಡಾಟ ಕಷ್ಟಕರವಾಗಿತ್ತು. ಹೀಗಾಗಿ ಕುಟುಂಬಸ್ಥರು ಮರದ ಬಡಿಗೆಗೆ ಬಟ್ಟೆಯೊಂದನ್ನು ಕಟ್ಟಿ ಅದರಲ್ಲಿ ಮಹಿಳೆಯನ್ನು ಕುಳ್ಳಿರಿಸಿ ಎಂಜಿರ ಮುಖ್ಯ ರಸ್ತೆಗೆ ತಲುಪಿಸಿದ್ದರು. ರಸ್ತೆಯೇ ಸರಿ ಇಲ್ಲವೆಂದು ಬಿಂಬಿಸಲು ಮಹಿಳೆಯನ್ನು ಬಡಿಗೆಯಲ್ಲಿ ಕಟ್ಟಿ ಹೊತ್ತ ವಿಡಿಯೋ ಮಾಡಿ ವೈರಲ್‌ ಮಾಡಲಾಗಿತ್ತು. ಸಹಜವಾಗಿಯೇ ಗ್ರಾಮೀಣ ಭಾರತದ ಈ ವಿಡಿಯೋ ಎಲ್ಲಾ ಮಾಧ್ಯಮಗಳಿಗೂ ತಲುಪಿಸಿದ್ದರು. ರಾಜ್ಯಾದ್ಯಂತ ಗಮನಸೆಳೆದಿತ್ತು.

ಆದರೆ ಈ ಘಟನೆ ನಡೆದ ನಂತರ ಇದೀಗ  ಅದೇ ಮನೆಯವರು ಜೀಪಲ್ಲಿ ಸುಮಾರು ಎಂಟು ಕ್ವಿಂಟಾಲ್‌ ಅಡಿಕೆ ಸಾಗಾಟ ಮಾಡುತ್ತಿರುವ ಬಗ್ಗೆ ಸ್ಥಳೀಯರು ವಿಡಿಯೋ ಮಾಡಿ ವೈರಲ್‌ ಮಾಡಿದ್ದಾರೆ. ವೃದ್ಧ  ಮಹಿಳೆಯನ್ನು ಬಡಿಗೆಯಲ್ಲಿ ಸಾಗಿಸಿದ ಎರಡು ದಿನಗಳ ಬಳಿಕ ಅದೇ ಮನೆಯಿಂದ ಜೀಪ್ ನಲ್ಲಿ ಅಡಿಕೆ ಸಾಗಾಟ ಮಾಡಿರುವ ವಿಡಿಯೋವನ್ನು ಸ್ಥಳೀಯರು ಚಿತ್ರೀಕರಿಸಿದ್ದಾರೆ. ಜೀಪು ಸಾಗುವ ದಾರಿ ಇದ್ದರೂ ವೃದ್ಧೆಯನ್ನು ಏಕೆ ಬಡಿಗೆಯಲ್ಲಿ ಕಟ್ಟಿ ಹೊತ್ತಿರಿ ಎಂದು ಪ್ರಶ್ನೆ ಮಾಡಿದ್ದಾರೆ. ಉದ್ದೇಶಪೂರ್ವಕವಾಗಿ ಈ ರೀತಿ ಮಾಡಿರುವುದು  ಸರಿಯಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ರಸ್ತೆಯ ಹೆಸರಿನಲ್ಲಿ ರಾಜಕೀಯ ಮಾಡಿದ  ಮನೆ ಮಂದಿಯನ್ನು ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ತರಾಟೆ ತೆಗೆದುಕೊಂಡಿದ್ದಾರೆ. ಮಳೆಯಿಂದಾಗಿ ಕಚ್ಛಾ ರಸ್ತೆ ಹಾನಿಗೊಳಗಾಗಿದ್ದು ನಿಜ. ಆದರೆ ರಸ್ತೆ ಇದೆ, ಜೀಪು ಓಡಾಟ ನಡೆಯುತ್ತದೆ. ಹಾಗಿದ್ದರೂ ಮಹಿಳೆಯನ್ನು ಬಡಿಗೆಯಲ್ಲಿ ಕಟ್ಟಿ ಹೊತ್ತಿರುವುದು ಅಮಾನವೀಯ ಎಂದೂ ಹೇಳಿದ್ದಾರೆ.

ಇಂದಿಗೂ ಹಲವಾರು ಗ್ರಾಮೀಣ ಭಾಗಗಳು ಮೂಲಭೂತ ಸಮಸ್ಯೆಯಿಂದ ಬಳಲುತ್ತಿವೆ. ಅಭಿವೃದ್ಧಿಯ ಕಡೆಗೆ ಆಡಳಿತವು ಗಮನಹರಿಸಬೇಕಿರುವುದೂ ನಿಜವೇ. ಆದರೆ ವಾಸ್ತವ ಸಂಗತಿಯನ್ನು ಮರೆಮಾಚಿ ಈ ರೀತಿ ವಿಡಿಯೋ ಮಾಡಿ ವೈರಲ್‌ ಮಾಡುವುದರ ಬಗ್ಗೆ ಅನೇಕರು ಖೇದ ವ್ಯಕ್ತಪಡಿಸಿದ್ದಾರೆ. ಈ ರೀತಿ ಮಾಡುವುದರಿಂದ ವಾಸ್ತವ ಸಂಗತಿಗಳೂ ಆಡಳಿತ ಗಮನಕ್ಕೆ ಬಾರದೇ ಇರುತ್ತವೆ. ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾಗಬೇಕಾದ್ದು ನಿಜ, ಈ ರೀತಿಯ ಘಟನೆಗಳು ನಡೆಯಬಾರದು ಎಂದು “ರೂರಲ್‌ ಮಿರರ್‌” ಉದ್ದೇಶಿಸುತ್ತದೆ. ಹೀಗಾಗಿ ತಪ್ಪು ಮಾಹಿತಿಯಿಂದ ಈ ಹಿಂದೆ ಪ್ರಕಟ ಮಾಡಿರುವ ವರದಿಗೆ ವಿಷಾದಿಸುತ್ತೇವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ
ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ
March 13, 2026
10:02 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ
March 13, 2026
8:47 PM
by: ದ ರೂರಲ್ ಮಿರರ್.ಕಾಂ
ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ
March 13, 2026
8:08 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror