Advertisement
The Rural Mirror ಫಾಲೋಅಪ್

ಗ್ರಾಮೀಣ ಭಾರತ | ಅನಾರೋಗ್ಯಕ್ಕೆ ತುತ್ತಾದ ಮಹಿಳೆಯನ್ನು ಬಡಿಗೆಯಲ್ಲಿ ಕಟ್ಟಿ ಆಸ್ಪತ್ರೆಗೆ ಸಾಗಿಸಿದ ಘಟನೆ | ಜೀಪು ಸಾಗುವ ವ್ಯವಸ್ಥೆ ಇದ್ದರೂ ಬಡಿಗೆಯಲ್ಲಿ ಹೊತ್ತರು…! | ಗ್ರಾಪಂ ಸದಸ್ಯರಿಂದ ತರಾಟೆ | ರಸ್ತೆಗಾಗಿ ವಾಸ್ತವ ತಿರುಚಿದರು..!?

Share

ರಸ್ತೆ‌ ಸರಿಯಿಲ್ಲದ‌ ಕಾರಣ ವೃದ್ದೆಯನ್ನು ಮರದ ಬಡಿಗೆಯಲ್ಲಿ ಕಟ್ಟಿ ಆಸ್ಪತ್ರೆಗೆ ಸಾಗಾಟ ಘಟನೆ ವಾರಗಳ ಹಿಂದೆ ಸುಳ್ಯ ವಿಧಾನಸಭಾ ಕ್ಷೇತ್ರ ಕಡಬದ ಬಳ್ಳಕ್ಕದಿಂದ ವರದಿಯಾಗಿತ್ತು. ಇದೀಗ ಈ ಘಟನೆಯ ಅಸಲಿಯ ಬಗ್ಗೆ ಆ ವಾರ್ಡ್‌ ನ ಗ್ರಾಪಂ ಸದಸ್ಯರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸಿದ್ದಾರೆ. ರಸ್ತೆ ಸರಿ ಇಲ್ಲ ಎಂದು ಬಿಂಬಿಸಲು ವೃದ್ಧೆಯನ್ನು ಬಡಿಗೆಯಲ್ಲಿ ಕಟ್ಟಿ ವೈರಲ್‌ ಮಾಡಿರುವುದು  ಈಗ ಬೆಳಕಿಗೆ ಬಂದಿದೆ. ಗ್ರಾಮೀಣ ಭಾರತದ ನಿಜವಾದ ಕಾಳಜಿಗೆ ಇದೊಂದು ಅಪಚಾರವಾಗಿದೆ.

Advertisement

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾ.ಪಂ ವ್ಯಾಪ್ತಿಯ ಕಲ್ಲುಗುಡ್ಡೆ ಸಮೀಪದ ಬಳ್ಳಕ್ಕ ಎಂಬಲ್ಲಿ ಆ.19 ರಂದು ಈ ಘಟನೆ ನಡೆದಿದೆ. 70 ವರ್ಷದ ಮಹಿಳೆಯೊಬ್ಬರು ಕಾಲು ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಎಂಜಿರ ಮೂಲಕ ಉಪ್ಪಿನಂಗಡಿಗೆ ತುರ್ತಾಗಿ ಕರೆದೊಯ್ಯಬೇಕಿತ್ತು. ರಸ್ತೆ ಇದ್ದರೂ ಅಭಿವೃದ್ದಿ ಕಾರಣ ಹಿನ್ನೆಲೆಯಲ್ಲಿ ವಾಹನ ಓಡಾಟ ಕಷ್ಟಕರವಾಗಿತ್ತು. ಹೀಗಾಗಿ ಕುಟುಂಬಸ್ಥರು ಮರದ ಬಡಿಗೆಗೆ ಬಟ್ಟೆಯೊಂದನ್ನು ಕಟ್ಟಿ ಅದರಲ್ಲಿ ಮಹಿಳೆಯನ್ನು ಕುಳ್ಳಿರಿಸಿ ಎಂಜಿರ ಮುಖ್ಯ ರಸ್ತೆಗೆ ತಲುಪಿಸಿದ್ದರು. ರಸ್ತೆಯೇ ಸರಿ ಇಲ್ಲವೆಂದು ಬಿಂಬಿಸಲು ಮಹಿಳೆಯನ್ನು ಬಡಿಗೆಯಲ್ಲಿ ಕಟ್ಟಿ ಹೊತ್ತ ವಿಡಿಯೋ ಮಾಡಿ ವೈರಲ್‌ ಮಾಡಲಾಗಿತ್ತು. ಸಹಜವಾಗಿಯೇ ಗ್ರಾಮೀಣ ಭಾರತದ ಈ ವಿಡಿಯೋ ಎಲ್ಲಾ ಮಾಧ್ಯಮಗಳಿಗೂ ತಲುಪಿಸಿದ್ದರು. ರಾಜ್ಯಾದ್ಯಂತ ಗಮನಸೆಳೆದಿತ್ತು.

ಆದರೆ ಈ ಘಟನೆ ನಡೆದ ನಂತರ ಇದೀಗ  ಅದೇ ಮನೆಯವರು ಜೀಪಲ್ಲಿ ಸುಮಾರು ಎಂಟು ಕ್ವಿಂಟಾಲ್‌ ಅಡಿಕೆ ಸಾಗಾಟ ಮಾಡುತ್ತಿರುವ ಬಗ್ಗೆ ಸ್ಥಳೀಯರು ವಿಡಿಯೋ ಮಾಡಿ ವೈರಲ್‌ ಮಾಡಿದ್ದಾರೆ. ವೃದ್ಧ  ಮಹಿಳೆಯನ್ನು ಬಡಿಗೆಯಲ್ಲಿ ಸಾಗಿಸಿದ ಎರಡು ದಿನಗಳ ಬಳಿಕ ಅದೇ ಮನೆಯಿಂದ ಜೀಪ್ ನಲ್ಲಿ ಅಡಿಕೆ ಸಾಗಾಟ ಮಾಡಿರುವ ವಿಡಿಯೋವನ್ನು ಸ್ಥಳೀಯರು ಚಿತ್ರೀಕರಿಸಿದ್ದಾರೆ. ಜೀಪು ಸಾಗುವ ದಾರಿ ಇದ್ದರೂ ವೃದ್ಧೆಯನ್ನು ಏಕೆ ಬಡಿಗೆಯಲ್ಲಿ ಕಟ್ಟಿ ಹೊತ್ತಿರಿ ಎಂದು ಪ್ರಶ್ನೆ ಮಾಡಿದ್ದಾರೆ. ಉದ್ದೇಶಪೂರ್ವಕವಾಗಿ ಈ ರೀತಿ ಮಾಡಿರುವುದು  ಸರಿಯಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ರಸ್ತೆಯ ಹೆಸರಿನಲ್ಲಿ ರಾಜಕೀಯ ಮಾಡಿದ  ಮನೆ ಮಂದಿಯನ್ನು ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ತರಾಟೆ ತೆಗೆದುಕೊಂಡಿದ್ದಾರೆ. ಮಳೆಯಿಂದಾಗಿ ಕಚ್ಛಾ ರಸ್ತೆ ಹಾನಿಗೊಳಗಾಗಿದ್ದು ನಿಜ. ಆದರೆ ರಸ್ತೆ ಇದೆ, ಜೀಪು ಓಡಾಟ ನಡೆಯುತ್ತದೆ. ಹಾಗಿದ್ದರೂ ಮಹಿಳೆಯನ್ನು ಬಡಿಗೆಯಲ್ಲಿ ಕಟ್ಟಿ ಹೊತ್ತಿರುವುದು ಅಮಾನವೀಯ ಎಂದೂ ಹೇಳಿದ್ದಾರೆ.

ಇಂದಿಗೂ ಹಲವಾರು ಗ್ರಾಮೀಣ ಭಾಗಗಳು ಮೂಲಭೂತ ಸಮಸ್ಯೆಯಿಂದ ಬಳಲುತ್ತಿವೆ. ಅಭಿವೃದ್ಧಿಯ ಕಡೆಗೆ ಆಡಳಿತವು ಗಮನಹರಿಸಬೇಕಿರುವುದೂ ನಿಜವೇ. ಆದರೆ ವಾಸ್ತವ ಸಂಗತಿಯನ್ನು ಮರೆಮಾಚಿ ಈ ರೀತಿ ವಿಡಿಯೋ ಮಾಡಿ ವೈರಲ್‌ ಮಾಡುವುದರ ಬಗ್ಗೆ ಅನೇಕರು ಖೇದ ವ್ಯಕ್ತಪಡಿಸಿದ್ದಾರೆ. ಈ ರೀತಿ ಮಾಡುವುದರಿಂದ ವಾಸ್ತವ ಸಂಗತಿಗಳೂ ಆಡಳಿತ ಗಮನಕ್ಕೆ ಬಾರದೇ ಇರುತ್ತವೆ. ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾಗಬೇಕಾದ್ದು ನಿಜ, ಈ ರೀತಿಯ ಘಟನೆಗಳು ನಡೆಯಬಾರದು ಎಂದು “ರೂರಲ್‌ ಮಿರರ್‌” ಉದ್ದೇಶಿಸುತ್ತದೆ. ಹೀಗಾಗಿ ತಪ್ಪು ಮಾಹಿತಿಯಿಂದ ಈ ಹಿಂದೆ ಪ್ರಕಟ ಮಾಡಿರುವ ವರದಿಗೆ ವಿಷಾದಿಸುತ್ತೇವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

15 minutes ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

20 minutes ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

17 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

17 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

17 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

17 hours ago