Advertisement
MIRROR FOCUS

ಗ್ರಾಮೀಣ ಭಾರತ | ಅನಾರೋಗ್ಯಕ್ಕೆ ತುತ್ತಾದ ಮಹಿಳೆಯನ್ನು ಬಡಿಗೆ ಕಟ್ಟಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿದರು…! | ಮತ್ತೊಂದು ಕರುಣಾಜನಕ ಕತೆ |

Share

ಗ್ರಾಮೀಣ ಭಾರತ. ಸ್ವಾತಂತ್ರ್ಯ ಅಮೃತಮಹೋತ್ಸವ ಸಂಭ್ರಮ. ಈ ಸಂಭ್ರಮದ ನಡುವೆಯೇ ಗ್ರಾಮೀಣ ಭಾರತದ ಇನ್ನೊಂದು ಕತೆ ಹೊರಬಂದಿದೆ. 70 ವರ್ಷದ ಮಹಿಳೆಯೊಬ್ಬರನ್ನು ಅನಾರೋಗ್ಯದ ಕಾರಣದಿಂದ ಬಟ್ಟೆ ಕಟ್ಟಿ ಬಡಿಗೆಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಘಟನೆ ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬದಿಂದ ಕೇಳಿಬಂದಿದೆ.

ಗ್ರಾಮೀಣ ಭಾರತ ಇನ್ನೂ ಸಂಪರ್ಕ ವ್ಯವಸ್ಥೆಯನ್ನು ಸಾಧಿಸಿಲ್ಲ ಎಂದರೆ ನಂಬಬೇಕು. ಅದು ಮನುಷ್ಯದ ಮೂಲಭೂತ ಆವಶ್ಯಕತೆಗಳಾದ ರಸ್ತೆ ಸೇರಿದಂತೆ ಇಂದಿನ ಆವಶ್ಯಕತೆಯಾದ ಸೇತುವೆ, ನೆಟ್ವರ್ಕ್‌ ವ್ಯವಸ್ಥೆಗಳ ಕೊರತೆ ಎದುರಿಸುತ್ತಿದೆ. ಸುಳ್ಯದ ಹಲವು ಕಡೆ ಇಂತಹದ್ದೇ ಸಮಸ್ಯೆ ಇದೆ, ಈಗ ಬೆಳಕಿಗೆ ಬಂದಿರುವ ಇನ್ನೊಂದು ಘಟನೆ ಕಡಬತಾಲೂಕಿನ ನೂಜಿಬಾಳ್ತಿಲ ಗ್ರಾ.ಪಂ ವ್ಯಾಪ್ತಿಯ ಕಲ್ಲುಗುಡ್ಡೆ ಸಮೀಪದ ಬಳ್ಳಕ್ಕ ಎಂಬಲ್ಲಿಂದ.

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾ.ಪಂ ವ್ಯಾಪ್ತಿಯ ಕಲ್ಲುಗುಡ್ಡೆ ಸಮೀಪದ ಬಳ್ಳಕ್ಕ ಎಂಬಲ್ಲಿ ಆ.19 ರಂದು ಈ ಘಟನೆ ನಡೆದಿದೆ. 70ವರ್ಷದ ಮಹಿಳೆಯೊಬ್ಬರು ಕಾಲು ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಎಂಜಿರ ಮೂಲಕ ಉಪ್ಪಿನಂಗಡಿಗೆ ತುರ್ತಾಗಿ ಕರೆದೊಯ್ಯಬೇಕಿತ್ತು. ಆದರೆ ರಸ್ತೆ ಇದ್ದರೂ ಅಭಿವೃದ್ದಿ ಕಾರಣ ಹಿನ್ನೆಲೆಯಲ್ಲಿ ವಾಹನ ಓಡಾಟ ಕಷ್ಟಕರವಾಗಿತ್ತು. ಹೀಗಾಗಿ ಕುಟುಂಬಸ್ಥರು ಮರದ ಬಡಿಗೆಗೆ ಬಟ್ಟೆಯೊಂದನ್ನು ಕಟ್ಟಿ ಅದರಲ್ಲಿ ಮಹಿಳೆಯನ್ನು ಕುಳ್ಳಿರಿಸಿ ಎಂಜಿರ ಮುಖ್ಯ ರಸ್ತೆಗೆ ತಲುಪಿಸಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗಿದೆ.

ನೂಜಿಬಾಳ್ತಿಲ-ಕೊಣಾಜೆ ಗ್ರಾಮವನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದ್ದು ಈ ಭಾಗದ ಜನರಿಗೆ ಎಂಜಿರ ಹತ್ತಿರದ ಪೇಟೆಯಾಗಿದೆ. ಇತ್ತೀಚೆಗೆ ಸುರಿದ ಮಹಾ ಮಳೆಗೆ ಈ ರಸ್ತೆ ಕೆಸರುಮಯವಾದ ಕಾರಣ ಈ ಭಾಗದ ಜನ ತಮ್ಮ ವಾಹನಗಳನ್ನು ಅರ್ಧ ದಾರಿಯಲ್ಲೇ ನಿಲ್ಲಿಸಿ ಕಿ.ಮೀ ಗಟ್ಟಲೆ ನಡೆದುಕೊಂಡು ಹೋಗಿ ಮನೆ ಸೇರುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ರಸ್ತೆ ಅಭಿವೃದ್ಧಿಗೆ ಹಲವು ವರ್ಷಗಳಿಂದ ಸ್ಥಳೀಯ ಪಂಚಾಯತ್‌ ಗೆ, ಜನಪ್ರತಿನಿಧಿಗಳಿಗೆ ಮನವಿ ಮಾಡುತ್ತಲೇ ಇದ್ದಾರೆ ಇಲ್ಲಿಯ ಜನರು. ಆದರೆ ಚುನಾವಣೆ ಸಮಯದ ಭರವಸೆಗಳ ಬಳಿಕ ಎಲ್ಲವೂ ನೆನಪಿನ ಪುಟಕ್ಕೆ ಸೇರುತ್ತಿತ್ತು. ಇದೀಗ ಜನರು ಸಂಕಟ ಪಡುವಂತಾಗಿದೆ.

ಸುಳ್ಯವಿಧಾನಸಭಾ ಕ್ಷೇತ್ರದಲ್ಲಿ ಒಂದು ಮಾತಿದೆ, ಆದ ಕೆಲಸ ಹೇಳಬೇಕು, ಮಾಧ್ಯಮಗಳೂ ಅದನ್ನೇ ವರದಿ ಮಾಡಿ ನಂತರ ಆಗಬೇಕಾದ ಕೆಲಸಗಳನ್ನು ಹೇಳಬೇಕು. ಈಚೆಗೆ ಕಲ್ಮಕಾರು ಪ್ರದೇಶದ ಉಪ್ಪುಕಳದ ಬಳಿ ಸೇತುವೆಯೊಂದು ಕೊಚ್ಚಿ ಹೋದ ಸಂದರ್ಭ ವೈರಲ್‌ ಆದ ವಿಡಿಯೋ ಬಳಿಕ ಇಂತಹ ಹೇಳಿಕೆಗಳು ಕೆಲವು ಜನಪ್ರತಿನಿಧಿಗಳಿಂದ ವ್ಯಕ್ತವಾಗಿತ್ತು. ಅಷ್ಟೇ ಅಲ್ಲ, ಮತದಾನ ಬಹಿಷ್ಕಾರ ಮಾಡಿದರೂ ಆಗದು, ಹೇಳಿದರೂ ಆಗದು, ಹೇಳದಿದ್ದರೂ ಆಗದು, ಮನವಿ ಮಾಡಿದರೂ ಆಗದು, ಮನವಿ ಮಾಡಿದರೂ ಆಗದು…! ಆದರೆ ಚುನಾವಣೆ ಸಮಯದಲ್ಲಿ ಓಟು ಮಾತ್ರಾ ಹಾಕಬೇಕು.. ಹೀಗೆಂದು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ ಆಗುವುದಕ್ಕೆ ಆರಂಭವಾಗಿದೆ. ಇದೀಗ ಮಾಧ್ಯಮಗಳ ಮೂಲಕ, ಸಾಮಾಜಿಕ ಜಾಲತಾಣಗಳ ಮೂಲಕ ಮತ್ತೆ ಗ್ರಾಮೀಣ ಭಾರತದ ಇನ್ನೊಂದು ಕತೆ ಹೊರಬಂದಿದೆ. ಆಡಳಿತಗಳು ಸ್ಪಂದಿಸಿಯಾವೇ ? ಈಗ ಇಂತಹ ಪ್ರಶ್ನೆಗಳು ಮಾತ್ರವೇ ಕೇಳಿವೆ. ಏಕೆಂದರೆ ಮಾಧ್ಯಮಗಳಲ್ಲಿ  ಬಂದರೆ ಆಗುತ್ತದೆಯೇ ? ಅವರೇ ಮಾಡಲಿ ..!, ವಾಟ್ಸಪ್‌ ಲಿ ಹಾಕಿದ್ರೆ ಆಗುತ್ತದಾ ? ಅವರೇ ಮಾಡಲಿ…! ಹೀಗೆಲ್ಲಾ ಪ್ರಶ್ನೆಗಳು ಬರುತ್ತದೆ.. ಅಷ್ಟೇ ಅಲ್ಲ, ಈಚೆಗೆ ಸುಳ್ಯದ ರಸ್ತೆ ಸಮಸ್ಯೆ ಬಗ್ಗೆ ಜಾಗೃತಿ ಮಾಡಿರುವ ಯುವಕನ ಮೇಲೆಯೇ ಪೊಲೀಸ್‌ ದೂರು ಆಗಿರುವುದು ಬಿಸಿ ಬಿಸಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

7 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

9 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

16 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

22 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago