ಹಿರಿಯ ಉಡುಪಿ ಸೀರೆ ನೇಕಾರರಿಗೆ ” ನೇಕಾರ ರತ್ನ ” ಪ್ರಶಸ್ತಿ

August 7, 2024
11:47 AM

ಇಬ್ಬರು ಹಿರಿಯ ಕಾಯಕ ಯೋಗಿಗಳಿಗೆ ಕದಿಕೆ ಟ್ರಸ್ಟ್ ನ ಅತ್ಯುನ್ನತ ” ನೇಕಾರ ರತ್ನ ” ಪ್ರಶಸ್ತಿ ನೀಡಿ ಗೌರವಿಸಲಿದೆ.  ಅಳಿವಿನಂಚಿಗೆ ತಲುಪಿದ್ದ ಉಡುಪಿ ಸೀರೆ ನೇಕಾರಿಕೆ ಈಗ ಕದಿಕೆ ಟ್ರಸ್ಟ್ ನ ಪ್ರಯತ್ನದಿಂದ ಪುನಃಶ್ಚೇತನಗೊಂಡಿದೆ.

Advertisement
Advertisement

ಸಂಜೀವ ಶೆಟ್ಟಿಗಾರ್(74   ವರ್ಷ ) ಅಧ್ಯಕ್ಷರು, ಶಿವಳ್ಳಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಮತ್ತು ಸೋಮಪ್ಪ ಜತ್ತನ್ನ (89 ವರ್ಷ) ನಿರ್ದೇಶಕರು , ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘ ಇವರು ತಮ್ಮ ಜೀವಮಾನದ ಸಾಧನೆಗಾಗಿ ಕದಿಕೆ ಟ್ರಸ್ಟ್ , ಕೈಮಗ್ಗ ನೇಕಾರರಿಗೆ ಕೊಡ ಮಾಡುವ, ಪ್ರತಿಷ್ಟಿತ “ನೇಕಾರ ರತ್ನ ” ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಇವರಿಬ್ಬರು ಅವಿಭಜಿತ ದ. ಕ. ಜಿಲ್ಲೆಯ ಅತ್ಯಂತ ಹಿರಿಯ ಸಕ್ರಿಯ ನೇಕಾರರು. ಸಂಜೀವ ಶೆಟ್ಟಿಗಾರ್ ಅವರು ಸುಮಾರು 74 ವರ್ಷಗಳಿಂದ ನಿರಂತರ ನೇಯ್ಗೆ ಮಾಡುತ್ತಿರುವುದು ಒಂದು ದಾಖಲೆ ಆಗಿದೆ. ಸೋಮಪ್ಪ ಜತ್ತನ್ನ ಅವರು ಕಳೆದ 66 ವರುಷಗಳಿಂದ ನೇಕಾರಿಕೆಯ ಕಾಯಕದಲ್ಲಿ ನಿರತರಾಗಿದ್ದಾರೆ.

ಸಂಜೀವ ಶೆಟ್ಟಿಗಾರ್ ಈಗ ಅಳಿದು ಹೋದ ಮುತ್ತು ಬಾರ್ಡರ್ ನೇಯ್ಗೆ ಯನ್ನು 2019 ರವರೆಗೆ ನೇಯುತ್ತಿದ್ದರು . ಈಗಲೂ ತಮ್ಮದೇ ವಿನ್ಯಾಸದ ಸೆರಗಿನಲ್ಲಿ ಬುಟ್ಟಾ ಇರುವ 60 ಕೌಂಟ್ ಸೀರೆಗಳನ್ನು ನೇಯುವುದರ ಜೊತೆಗೆ ಅನೇಕ ನೇಕಾರರಿಗೆ ಹಾಸು ಮತ್ತು ವಿನ್ಯಾಸ ಮಾಡುವ ಕೆಲಸ ಮಾಡುತ್ತಾ ಸಕ್ರಿಯರಾಗಿದ್ದಾರೆ. ನೇಕಾರರ ಸಂಘದ ಕಾರ್ಯ ಚಟುವಟಿಗಳನ್ನು ಅತ್ಯಂತ ದಕ್ಷತೆಯಿಂದ ನಿರ್ವಹಣೆ ಮಾಡುತ್ತಿದ್ದಾರೆ.

ಸೋಮಪ್ಪ ಜತ್ತನ್ನ ಅವರು 60 ಕೌಂಟ್ ನ ಸಣ್ಣ ಚೌಕುಳಿ ವಿನ್ಯಾಸದ ಅಪೂರ್ವ ಕಟ್ ಬಾರ್ಡರ್ ಉಡುಪಿ ಸೀರೆಗಳನ್ನು ನೇಯುತ್ತಿದ್ದಾರೆ. ಈ ಹಿರಿಯ ಕಾಯಕ ಯೋಗಿಗಳು ಪರಿಸರ ಸ್ನೇಹಿ ಉಡುಪಿ ಸೀರೆ ನೇಕಾರಿಕೆಗೆ ನೀಡಿದ ಕೊಡುಗೆಗಾಗಿ ಪ್ರಶಸ್ತಿಯನ್ನು ನೀಡಲಾಗುತ್ತದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ
January 30, 2026
6:18 PM
by: ವಿಶೇಷ ಪ್ರತಿನಿಧಿ
ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ
January 30, 2026
6:04 PM
by: ದ ರೂರಲ್ ಮಿರರ್.ಕಾಂ
AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ
“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror