Advertisement
ಸುದ್ದಿಗಳು

ಹಿರಿಯ ಉಡುಪಿ ಸೀರೆ ನೇಕಾರರಿಗೆ ” ನೇಕಾರ ರತ್ನ ” ಪ್ರಶಸ್ತಿ

Share

ಇಬ್ಬರು ಹಿರಿಯ ಕಾಯಕ ಯೋಗಿಗಳಿಗೆ ಕದಿಕೆ ಟ್ರಸ್ಟ್ ನ ಅತ್ಯುನ್ನತ ” ನೇಕಾರ ರತ್ನ ” ಪ್ರಶಸ್ತಿ ನೀಡಿ ಗೌರವಿಸಲಿದೆ.  ಅಳಿವಿನಂಚಿಗೆ ತಲುಪಿದ್ದ ಉಡುಪಿ ಸೀರೆ ನೇಕಾರಿಕೆ ಈಗ ಕದಿಕೆ ಟ್ರಸ್ಟ್ ನ ಪ್ರಯತ್ನದಿಂದ ಪುನಃಶ್ಚೇತನಗೊಂಡಿದೆ.

ಸಂಜೀವ ಶೆಟ್ಟಿಗಾರ್(74   ವರ್ಷ ) ಅಧ್ಯಕ್ಷರು, ಶಿವಳ್ಳಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಮತ್ತು ಸೋಮಪ್ಪ ಜತ್ತನ್ನ (89 ವರ್ಷ) ನಿರ್ದೇಶಕರು , ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘ ಇವರು ತಮ್ಮ ಜೀವಮಾನದ ಸಾಧನೆಗಾಗಿ ಕದಿಕೆ ಟ್ರಸ್ಟ್ , ಕೈಮಗ್ಗ ನೇಕಾರರಿಗೆ ಕೊಡ ಮಾಡುವ, ಪ್ರತಿಷ್ಟಿತ “ನೇಕಾರ ರತ್ನ ” ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಇವರಿಬ್ಬರು ಅವಿಭಜಿತ ದ. ಕ. ಜಿಲ್ಲೆಯ ಅತ್ಯಂತ ಹಿರಿಯ ಸಕ್ರಿಯ ನೇಕಾರರು. ಸಂಜೀವ ಶೆಟ್ಟಿಗಾರ್ ಅವರು ಸುಮಾರು 74 ವರ್ಷಗಳಿಂದ ನಿರಂತರ ನೇಯ್ಗೆ ಮಾಡುತ್ತಿರುವುದು ಒಂದು ದಾಖಲೆ ಆಗಿದೆ. ಸೋಮಪ್ಪ ಜತ್ತನ್ನ ಅವರು ಕಳೆದ 66 ವರುಷಗಳಿಂದ ನೇಕಾರಿಕೆಯ ಕಾಯಕದಲ್ಲಿ ನಿರತರಾಗಿದ್ದಾರೆ.

ಸಂಜೀವ ಶೆಟ್ಟಿಗಾರ್ ಈಗ ಅಳಿದು ಹೋದ ಮುತ್ತು ಬಾರ್ಡರ್ ನೇಯ್ಗೆ ಯನ್ನು 2019 ರವರೆಗೆ ನೇಯುತ್ತಿದ್ದರು . ಈಗಲೂ ತಮ್ಮದೇ ವಿನ್ಯಾಸದ ಸೆರಗಿನಲ್ಲಿ ಬುಟ್ಟಾ ಇರುವ 60 ಕೌಂಟ್ ಸೀರೆಗಳನ್ನು ನೇಯುವುದರ ಜೊತೆಗೆ ಅನೇಕ ನೇಕಾರರಿಗೆ ಹಾಸು ಮತ್ತು ವಿನ್ಯಾಸ ಮಾಡುವ ಕೆಲಸ ಮಾಡುತ್ತಾ ಸಕ್ರಿಯರಾಗಿದ್ದಾರೆ. ನೇಕಾರರ ಸಂಘದ ಕಾರ್ಯ ಚಟುವಟಿಗಳನ್ನು ಅತ್ಯಂತ ದಕ್ಷತೆಯಿಂದ ನಿರ್ವಹಣೆ ಮಾಡುತ್ತಿದ್ದಾರೆ.

ಸೋಮಪ್ಪ ಜತ್ತನ್ನ ಅವರು 60 ಕೌಂಟ್ ನ ಸಣ್ಣ ಚೌಕುಳಿ ವಿನ್ಯಾಸದ ಅಪೂರ್ವ ಕಟ್ ಬಾರ್ಡರ್ ಉಡುಪಿ ಸೀರೆಗಳನ್ನು ನೇಯುತ್ತಿದ್ದಾರೆ. ಈ ಹಿರಿಯ ಕಾಯಕ ಯೋಗಿಗಳು ಪರಿಸರ ಸ್ನೇಹಿ ಉಡುಪಿ ಸೀರೆ ನೇಕಾರಿಕೆಗೆ ನೀಡಿದ ಕೊಡುಗೆಗಾಗಿ ಪ್ರಶಸ್ತಿಯನ್ನು ನೀಡಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

15 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

17 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

1 day ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

1 day ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

2 days ago