ಇಬ್ಬರು ಹಿರಿಯ ಕಾಯಕ ಯೋಗಿಗಳಿಗೆ ಕದಿಕೆ ಟ್ರಸ್ಟ್ ನ ಅತ್ಯುನ್ನತ ” ನೇಕಾರ ರತ್ನ ” ಪ್ರಶಸ್ತಿ ನೀಡಿ ಗೌರವಿಸಲಿದೆ. ಅಳಿವಿನಂಚಿಗೆ ತಲುಪಿದ್ದ ಉಡುಪಿ ಸೀರೆ ನೇಕಾರಿಕೆ ಈಗ ಕದಿಕೆ ಟ್ರಸ್ಟ್ ನ ಪ್ರಯತ್ನದಿಂದ ಪುನಃಶ್ಚೇತನಗೊಂಡಿದೆ.
ಸಂಜೀವ ಶೆಟ್ಟಿಗಾರ್(74 ವರ್ಷ ) ಅಧ್ಯಕ್ಷರು, ಶಿವಳ್ಳಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಮತ್ತು ಸೋಮಪ್ಪ ಜತ್ತನ್ನ (89 ವರ್ಷ) ನಿರ್ದೇಶಕರು , ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘ ಇವರು ತಮ್ಮ ಜೀವಮಾನದ ಸಾಧನೆಗಾಗಿ ಕದಿಕೆ ಟ್ರಸ್ಟ್ , ಕೈಮಗ್ಗ ನೇಕಾರರಿಗೆ ಕೊಡ ಮಾಡುವ, ಪ್ರತಿಷ್ಟಿತ “ನೇಕಾರ ರತ್ನ ” ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಇವರಿಬ್ಬರು ಅವಿಭಜಿತ ದ. ಕ. ಜಿಲ್ಲೆಯ ಅತ್ಯಂತ ಹಿರಿಯ ಸಕ್ರಿಯ ನೇಕಾರರು. ಸಂಜೀವ ಶೆಟ್ಟಿಗಾರ್ ಅವರು ಸುಮಾರು 74 ವರ್ಷಗಳಿಂದ ನಿರಂತರ ನೇಯ್ಗೆ ಮಾಡುತ್ತಿರುವುದು ಒಂದು ದಾಖಲೆ ಆಗಿದೆ. ಸೋಮಪ್ಪ ಜತ್ತನ್ನ ಅವರು ಕಳೆದ 66 ವರುಷಗಳಿಂದ ನೇಕಾರಿಕೆಯ ಕಾಯಕದಲ್ಲಿ ನಿರತರಾಗಿದ್ದಾರೆ.
ಸಂಜೀವ ಶೆಟ್ಟಿಗಾರ್ ಈಗ ಅಳಿದು ಹೋದ ಮುತ್ತು ಬಾರ್ಡರ್ ನೇಯ್ಗೆ ಯನ್ನು 2019 ರವರೆಗೆ ನೇಯುತ್ತಿದ್ದರು . ಈಗಲೂ ತಮ್ಮದೇ ವಿನ್ಯಾಸದ ಸೆರಗಿನಲ್ಲಿ ಬುಟ್ಟಾ ಇರುವ 60 ಕೌಂಟ್ ಸೀರೆಗಳನ್ನು ನೇಯುವುದರ ಜೊತೆಗೆ ಅನೇಕ ನೇಕಾರರಿಗೆ ಹಾಸು ಮತ್ತು ವಿನ್ಯಾಸ ಮಾಡುವ ಕೆಲಸ ಮಾಡುತ್ತಾ ಸಕ್ರಿಯರಾಗಿದ್ದಾರೆ. ನೇಕಾರರ ಸಂಘದ ಕಾರ್ಯ ಚಟುವಟಿಗಳನ್ನು ಅತ್ಯಂತ ದಕ್ಷತೆಯಿಂದ ನಿರ್ವಹಣೆ ಮಾಡುತ್ತಿದ್ದಾರೆ.
ಸೋಮಪ್ಪ ಜತ್ತನ್ನ ಅವರು 60 ಕೌಂಟ್ ನ ಸಣ್ಣ ಚೌಕುಳಿ ವಿನ್ಯಾಸದ ಅಪೂರ್ವ ಕಟ್ ಬಾರ್ಡರ್ ಉಡುಪಿ ಸೀರೆಗಳನ್ನು ನೇಯುತ್ತಿದ್ದಾರೆ. ಈ ಹಿರಿಯ ಕಾಯಕ ಯೋಗಿಗಳು ಪರಿಸರ ಸ್ನೇಹಿ ಉಡುಪಿ ಸೀರೆ ನೇಕಾರಿಕೆಗೆ ನೀಡಿದ ಕೊಡುಗೆಗಾಗಿ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…
ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…