ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ ಪರಿಷೆಗೆ ಅಧಿಕೃತ ಚಾಲನೆ ಸಿಗಲಿದೆ. ಆದರೆ, ವಾರಾಂತ್ಯದ ಹಿನ್ನೆಲೆಯಲ್ಲಿ ಎರಡು ದಿನಗಳ ಮೊದಲೆ ಬಸವನಗುಡಿಯಲ್ಲಿ ಜಾತ್ರೆಯ ವಾತಾವರಣ ಸೃಷ್ಟಿಯಾಗಿದೆ. ಕಾರ್ತಿಕ ಮಾಸದ ಕೊನೆಯ ಸೋಮವಾರ ದೊಡ್ಡ ಬಸವಣ್ಣ ದೇವಸ್ಥಾನದಲ್ಲಿ ಬಸವನಿಗೆ ಕಡಲೆಕಾಯಿ ಹಾಗೂ ಪುಷ್ಪಗಳಿಂದ ಅಲಂಕಾರ ಮಾಡಲಾಗುತ್ತಿದೆ. ಕನಕಪುರ, ದೊಡ್ಡಬಳ್ಳಾಪುರ, ರಾಮನಗರ, ಮಾಗಡಿ, ಮೈಸೂರು, ಮಂಡ್ಯ ಸೇರಿದಂತೆ ರಾಜ್ಯದ ಹಲವೆಡೆಯಿಂದ ವ್ಯಾಪಾರಿಗಳು ಕಡಲೆಕಾಯಿ ತಂದು ಮಾರಾಟ ಮಾಡುತ್ತಾರೆ. ಈಗಾಗಲೇ ಪರಿಷೆ ನಡೆಯುತ್ತಿರುವುದರಿಂದ ವಾಹನ ಸಂಚಾರ ವ್ಯವಸ್ಥೆಯಲ್ಲಿ ಹಲವು ಬದಲಾವಣೆ ಮಾಡಲಾಗಿದೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…