Advertisement
MIRROR FOCUS

ಕೇರಳ | ಎರ್ನಾಕುಲಂ ಜಿಲ್ಲೆಯ ಕಲಮಸ್ಸೇರಿ ಸಭಾಭವನದಲ್ಲಿ ಸ್ಫೋಟ | ಟಿಫನ್‌ ಬಾಕ್ಸ್‌ನಲ್ಲಿ ಸ್ಫೋಟ…| ಕೇರಳಾದ್ಯಂತ ಕಟ್ಟೆಚ್ಚರ | ಪ್ರಚೋದನಾಕಾರಿ ಸಂದೇಶ ಹರಡಿದರೆ ಕ್ರಮ |

Share

ಕೇರಳದ ಎರ್ನಾಕುಲಂ ಜಿಲ್ಲೆಯ ಕಲಮಸ್ಸೆರಿಯ ಸಭಾಭವನದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಸರಣಿ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು  ವರದಿಯಾಗಿದೆ. ಭಯೋತ್ಪಾದಕ ದಾಳಿ ಎಂದು ಶಂಕಿಸಲಾಗುತ್ತಿದ್ದು, ಕೇರಳದಾದ್ಯಂತ ಕಟ್ಟೆಚ್ಚರ ವಹಿಸಲು ಇಲಾಖೆ ಸೂಚಿಸಿದೆ.

ಸ್ಫೋಟ ಸಂಭವಿಸಿದಾಗ 2,000ಕ್ಕೂ ಹೆಚ್ಚು ಜನರು ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ. ಗಾಯಗೊಂಡಿರುವ 36 ಮಂದಿಯ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಪ್ರಾಥಮಿಕ ಮಾಹಿತಿ ಪ್ರಕಾರ ಇದು ಭಯೋತ್ಪಾದಕ ದಾಳಿಯಾಗಿದ್ದು, ಬಾಂಬ್ ಸ್ಕ್ವಾಡ್, ಫೊರೆನ್ಸಿಕ್ಸ್ ತಂಡ ಮತ್ತು ಎನ್‌ಐಎ ತಂಡ ಸ್ಥಳಕ್ಕೆ ತಲುಪಿದೆ. ಕೇರಳ ರಾಜ್ಯ ಪೊಲೀಸ್‌ ಮುಖ್ಯಸ್ಥ ಡಾ.ಶೇಕ್ ದರ್ವೇಶ್ ಸಾಹೇಬ್  ಅವರು  ಭಾನುವಾರ ನಡೆದ ಸ್ಫೋಟದಲ್ಲಿ ಐಇಡಿ  ಬಳಸಲಾಗಿದೆ ಎಂದು ಖಚಿತಪಡಿಸಿದ್ದಾರೆ. ತನಿಖಾ ತಂಡವು ಹಾಲ್‌ನಿಂದ ಐಇಡಿ ಅವಶೇಷಗಳನ್ನು ವಶಪಡಿಸಿಕೊಂಡಿದೆ.

ಟಿಫಿನ್ ಬಾಕ್ಸ್‌ನಲ್ಲಿ ಇರಿಸಲಾಗಿದ್ದ ಐಇಡಿ ಸ್ಫೋಟಕ್ಕೆ ಕಾರಣವಾಯಿತು ಎಂದು ವರದಿಯಾಗಿದೆ. ಸ್ಫೋಟಕ್ಕೂ ಮುನ್ನ ಕಾರೊಂದು ಸಭಾಭವನದ ಬಳಿ  ವೇಗವಾಗಿ ಹೊರಡುತ್ತಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.  ಐಇಡಿ ಹಾಕಿದ ವ್ಯಕ್ತಿಯೇ ಕಾರು ಚಾಲನೆ ಮಾಡಿರಬಹುದು ಎಂದು ತನಿಖಾ ತಂಡ ಶಂಕಿಸಿದೆ.

ಸ್ಫೋಟದ ಸುದ್ದಿ ತಿಳಿದ ತಕ್ಷಣವೇ ಕೇರಳದ ಅಧಿಕಾರಿಗಳು ರಾಜ್ಯದ ಎಲ್ಲಾ 14 ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ಎಚ್ಚರಿಕೆ ಮತ್ತು ವಿಶೇಷವಾಗಿ ರೈಲ್ವೆ ನಿಲ್ದಾಣಗಳು ಮತ್ತು ಬಸ್ ನಿಲ್ದಾಣಗಳ ಸುತ್ತಲೂ ಜಾಗರೂಕರಾಗಿರಿ ಎಂದು ನಿರ್ದೇಶನ ನೀಡಿದರು.

ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷದ ಸಂದೇಶಗಳ ವಿರುದ್ಧ ಕೇರಳ ಡಿಜಿಪಿ ಎಚ್ಚರಿಕೆ ನೀಡಿದ್ದು, ಎರ್ನಾಕುಲಂನಲ್ಲಿ ಇಂದು ಬೆಳಗ್ಗೆ ಧಾರ್ಮಿಕ ಸಭೆಯಲ್ಲಿ ಸ್ಫೋಟ ಸಂಭವಿಸಿದ ನಂತರ,  ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಅಥವಾ ದ್ವೇಷದ ಸಂದೇಶಗಳನ್ನು ಹರಡದಂತೆ ಕೇರಳ ಡಿಜಿಪಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಒಂದು ವೇಳೆ ಪ್ರಚೋದನಾಕಾರಿ ಸಂದೇಶ ಹರಡಿದರೆ  ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

A series of blasts was reported at convention centre in Ernakumal Kalamassery on Sunday morning. leading to the death of one person and injuring over 50 others, as reported by local police.Kerala Chief Minister Pinarayi Vijayan confirmed the casualty figures and stressed the seriousness of the incident.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

5 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

6 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

6 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

13 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

18 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago