ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯದ ಕಲಬುರಗಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ರಾಜ್ಯದಲ್ಲಿ 20 ಲಕ್ಷದ 77 ಸಾವಿರ ರೈತರು ಬೆಳೆ ವಿಮೆ ಮಾಡಿಸಿದ್ದು, ಕಲಬುರಗಿಯಲ್ಲಿ 3 ಲಕ್ಷಕ್ಕೂ ಹೆಚ್ಚು ರೈತರು ವಿಮೆ ಮಾಡಿಸಿದ್ದಾರೆ.
ಮುಂಗಾರು ಹಂಗಾಮಿನ ಬೆಳೆಗಳಾದ ತೊಗರಿ, ಹತ್ತಿ, ಭತ್ತ, ರಾಗಿ, ಮೆಕ್ಕೆಜೋಳ, ಸೊಯಾಬಿನ್, ಹೆಸರು, ನೆಲಗಡಲೆ ಸೇರಿದಂತೆ ವಿವಿಧ ಬೆಳೆಗಳಿಗೆ ರೈತರು ಬೆಳೆ ವಿಮೆ ನೋಂದಾವಣೆ ಮಾಡಿಸಿದ್ದಾರೆ. ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ , ಹಳ್ಳಿ ಹಳ್ಳಿಗೂ ತೆರಳಿ ಯೋಜನೆಯ ಬಗ್ಗೆ ಅರಿವು ಮೂಡಿಸಲಾಗಿದೆ. ಇದರಿಂದ 3 ಲಕ್ಷದ 1 ಸಾವಿರದ ರೈತರು, 3 ಲಕ್ಷ 61 ಸಾವಿರದ 590 ಹೆಕ್ಟೇರ್ ಭೂಮಿ ಫಸಲ್ ಭೀಮಾ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿದ್ದೆ ಎಂದು ಮಾಹಿತಿ ನೀಡಿದರು. ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ, ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ರೈತರು ಬೆಳೆ ವಿಮೆ ಮಾಡಿಸಿದ್ದು, ಜಿಲ್ಲೆಯಲ್ಲಿ 31 ಸಾವಿರ ಕೃಷಿಕರು ಬೆಳೆ ವಿಮೆ ಮಾಡಿಸಿದ್ದಾರೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…