ಕಲ್ಲೇರಿ ಸೇತುವೆ ಉದ್ಘಾಟನೆಯನ್ನು ಪಕ್ಷದ ಕಾರ್ಯಕ್ರಮದಂತೆ ಬಿಂಬಿಸಿದ ಬಿಜೆಪಿ ನಡೆ ಖಂಡನೀಯ -ಎಸ್‌ಡಿಪಿಐ

June 17, 2022
3:14 PM

ಕಲ್ಮಡ್ಕ ಗ್ರಾಮದ ಕಲ್ಲೇರಿಯಲ್ಲಿ ಪುತ್ತೂರು-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಳೆದ ಬಾರಿಯ ಸರ್ಕಾರದಿಂದ ಮಂಜೂರಾದ ಹಣದಿಂದ ನಿರ್ಮಿಸಿದ ಸೇತುವೆಯ ಉದ್ಘಾಟನೆಯನ್ನು ಪಕ್ಷದ ಕಾರ್ಯಕ್ರಮದಂತೆ ಬಿಂಬಿಸಿದ ಬಿಜೆಪಿ ನಡೆಯನ್ನು ಎಸ್‌ಡಿಪಿಐ ಬೆಳ್ಳಾರೆ ಬ್ಲಾಕ್ ಅಧ್ಯಕ್ಷರಾದ ಹಮೀದ್ ಮರಕ್ಕಡ ಖಂಡಿಸಿದ್ದಾರೆ.

ಉದ್ಘಾಟನೆಯ ಸಮಯದಲ್ಲಿ ಬಿಜೆಪಿ ಪಕ್ಷದ ಧ್ವಜ ಹಿಡಿದುಕೊಂಡು ಸ್ಥಳೀಯ ಪಂಚಾಯತ್ ಸದಸ್ಯರನ್ನು ಕೂಡಾ ಕಡೆಗಣಿಸಿ ಯಾವುದೇ ಪ್ರೋಟೋಕಾಲ್  ಪಾಲನೆ ಮಾಡದೆ ಕಾರ್ಯಕ್ರಮ ಮಾಡಲಾಗಿದೆ.  ಸರ್ಕಾರಿ ಹಣದಿಂದ ಮಾಡಿದ ಕೆಲಸವನ್ನು ಬಿಜೆಪಿ ಪಕ್ಷದಿಂದ ಹಣ ಬಿಡುಗಡೆ ಮಾಡಿದ ರೀತಿಯಲ್ಲಿ ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಮಾಡಿದ್ದು ಕಾನೂನು ವಿರೋಧಿ ಕೃತ್ಯವಾಗಿದೆ. ಸೇತುವೆ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಅಂಗಾರರು ಕೂಡ ಇದರ ಬಗ್ಗೆ ತುಟಿ ಬಿಚ್ಚದೆ ಮೌನ ಸಮ್ಮತಿ ನೀಡಿದ್ದು ಖಂಡನಾರ್ಹವಾಗಿದೆ.ಈ ದಿನದವರಗೆ ಧ್ವಜವನ್ನು ತೆರವುಗೊಳಿಸಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror