ಕಲ್ಮಡ್ಕ ಗ್ರಾಮದ ಕಲ್ಲೇರಿಯಲ್ಲಿ ಪುತ್ತೂರು-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಳೆದ ಬಾರಿಯ ಸರ್ಕಾರದಿಂದ ಮಂಜೂರಾದ ಹಣದಿಂದ ನಿರ್ಮಿಸಿದ ಸೇತುವೆಯ ಉದ್ಘಾಟನೆಯನ್ನು ಪಕ್ಷದ ಕಾರ್ಯಕ್ರಮದಂತೆ ಬಿಂಬಿಸಿದ ಬಿಜೆಪಿ ನಡೆಯನ್ನು ಎಸ್ಡಿಪಿಐ ಬೆಳ್ಳಾರೆ ಬ್ಲಾಕ್ ಅಧ್ಯಕ್ಷರಾದ ಹಮೀದ್ ಮರಕ್ಕಡ ಖಂಡಿಸಿದ್ದಾರೆ.
ಉದ್ಘಾಟನೆಯ ಸಮಯದಲ್ಲಿ ಬಿಜೆಪಿ ಪಕ್ಷದ ಧ್ವಜ ಹಿಡಿದುಕೊಂಡು ಸ್ಥಳೀಯ ಪಂಚಾಯತ್ ಸದಸ್ಯರನ್ನು ಕೂಡಾ ಕಡೆಗಣಿಸಿ ಯಾವುದೇ ಪ್ರೋಟೋಕಾಲ್ ಪಾಲನೆ ಮಾಡದೆ ಕಾರ್ಯಕ್ರಮ ಮಾಡಲಾಗಿದೆ. ಸರ್ಕಾರಿ ಹಣದಿಂದ ಮಾಡಿದ ಕೆಲಸವನ್ನು ಬಿಜೆಪಿ ಪಕ್ಷದಿಂದ ಹಣ ಬಿಡುಗಡೆ ಮಾಡಿದ ರೀತಿಯಲ್ಲಿ ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಮಾಡಿದ್ದು ಕಾನೂನು ವಿರೋಧಿ ಕೃತ್ಯವಾಗಿದೆ. ಸೇತುವೆ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಅಂಗಾರರು ಕೂಡ ಇದರ ಬಗ್ಗೆ ತುಟಿ ಬಿಚ್ಚದೆ ಮೌನ ಸಮ್ಮತಿ ನೀಡಿದ್ದು ಖಂಡನಾರ್ಹವಾಗಿದೆ.ಈ ದಿನದವರಗೆ ಧ್ವಜವನ್ನು ತೆರವುಗೊಳಿಸಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…