ಕಲ್ಮಡ್ಕ ಗ್ರಾಮದ ಕಲ್ಲೇರಿಯಲ್ಲಿ ಪುತ್ತೂರು-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಳೆದ ಬಾರಿಯ ಸರ್ಕಾರದಿಂದ ಮಂಜೂರಾದ ಹಣದಿಂದ ನಿರ್ಮಿಸಿದ ಸೇತುವೆಯ ಉದ್ಘಾಟನೆಯನ್ನು ಪಕ್ಷದ ಕಾರ್ಯಕ್ರಮದಂತೆ ಬಿಂಬಿಸಿದ ಬಿಜೆಪಿ ನಡೆಯನ್ನು ಎಸ್ಡಿಪಿಐ ಬೆಳ್ಳಾರೆ ಬ್ಲಾಕ್ ಅಧ್ಯಕ್ಷರಾದ ಹಮೀದ್ ಮರಕ್ಕಡ ಖಂಡಿಸಿದ್ದಾರೆ.
ಉದ್ಘಾಟನೆಯ ಸಮಯದಲ್ಲಿ ಬಿಜೆಪಿ ಪಕ್ಷದ ಧ್ವಜ ಹಿಡಿದುಕೊಂಡು ಸ್ಥಳೀಯ ಪಂಚಾಯತ್ ಸದಸ್ಯರನ್ನು ಕೂಡಾ ಕಡೆಗಣಿಸಿ ಯಾವುದೇ ಪ್ರೋಟೋಕಾಲ್ ಪಾಲನೆ ಮಾಡದೆ ಕಾರ್ಯಕ್ರಮ ಮಾಡಲಾಗಿದೆ. ಸರ್ಕಾರಿ ಹಣದಿಂದ ಮಾಡಿದ ಕೆಲಸವನ್ನು ಬಿಜೆಪಿ ಪಕ್ಷದಿಂದ ಹಣ ಬಿಡುಗಡೆ ಮಾಡಿದ ರೀತಿಯಲ್ಲಿ ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಮಾಡಿದ್ದು ಕಾನೂನು ವಿರೋಧಿ ಕೃತ್ಯವಾಗಿದೆ. ಸೇತುವೆ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಅಂಗಾರರು ಕೂಡ ಇದರ ಬಗ್ಗೆ ತುಟಿ ಬಿಚ್ಚದೆ ಮೌನ ಸಮ್ಮತಿ ನೀಡಿದ್ದು ಖಂಡನಾರ್ಹವಾಗಿದೆ.ಈ ದಿನದವರಗೆ ಧ್ವಜವನ್ನು ತೆರವುಗೊಳಿಸಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…