ಕಲ್ಮಡ್ಕ ಗ್ರಾಮದ ಕಲ್ಲೇರಿಯಲ್ಲಿ ಪುತ್ತೂರು-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಳೆದ ಬಾರಿಯ ಸರ್ಕಾರದಿಂದ ಮಂಜೂರಾದ ಹಣದಿಂದ ನಿರ್ಮಿಸಿದ ಸೇತುವೆಯ ಉದ್ಘಾಟನೆಯನ್ನು ಪಕ್ಷದ ಕಾರ್ಯಕ್ರಮದಂತೆ ಬಿಂಬಿಸಿದ ಬಿಜೆಪಿ ನಡೆಯನ್ನು ಎಸ್ಡಿಪಿಐ ಬೆಳ್ಳಾರೆ ಬ್ಲಾಕ್ ಅಧ್ಯಕ್ಷರಾದ ಹಮೀದ್ ಮರಕ್ಕಡ ಖಂಡಿಸಿದ್ದಾರೆ.
ಉದ್ಘಾಟನೆಯ ಸಮಯದಲ್ಲಿ ಬಿಜೆಪಿ ಪಕ್ಷದ ಧ್ವಜ ಹಿಡಿದುಕೊಂಡು ಸ್ಥಳೀಯ ಪಂಚಾಯತ್ ಸದಸ್ಯರನ್ನು ಕೂಡಾ ಕಡೆಗಣಿಸಿ ಯಾವುದೇ ಪ್ರೋಟೋಕಾಲ್ ಪಾಲನೆ ಮಾಡದೆ ಕಾರ್ಯಕ್ರಮ ಮಾಡಲಾಗಿದೆ. ಸರ್ಕಾರಿ ಹಣದಿಂದ ಮಾಡಿದ ಕೆಲಸವನ್ನು ಬಿಜೆಪಿ ಪಕ್ಷದಿಂದ ಹಣ ಬಿಡುಗಡೆ ಮಾಡಿದ ರೀತಿಯಲ್ಲಿ ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಮಾಡಿದ್ದು ಕಾನೂನು ವಿರೋಧಿ ಕೃತ್ಯವಾಗಿದೆ. ಸೇತುವೆ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಅಂಗಾರರು ಕೂಡ ಇದರ ಬಗ್ಗೆ ತುಟಿ ಬಿಚ್ಚದೆ ಮೌನ ಸಮ್ಮತಿ ನೀಡಿದ್ದು ಖಂಡನಾರ್ಹವಾಗಿದೆ.ಈ ದಿನದವರಗೆ ಧ್ವಜವನ್ನು ತೆರವುಗೊಳಿಸಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…