ಗ್ರಾಮೀಣ ಭಾಗದಲ್ಲಿ ಶವಸಂಸ್ಕಾರದ್ದು ಸಮಸ್ಯೆಯಾಗಿ ಕಾಡುತ್ತದೆ. ನಗರದಲ್ಲಿ ಅತ್ಯುತ್ತಮ ತಂತ್ರಜ್ಞಾನದ ಶವಾಗಾರಗಳು, ಸ್ಮಶಾನಗಳು ಇರುತ್ತದೆ. ಗ್ರಾಮೀಣ ಭಾಗದ ಜನರು ಶವಸಂಸ್ಕಾರ ನಡೆಸಲು ಅನೇಕರು ಕಷ್ಟ ಪಡುತ್ತಾರೆ. ಕಟ್ಟಿಗೆ ಹಾಗೂ ಬೇಕಾದ ಸಲಕರಣೆಗಾಗಿ ಓಡಾಟ ಇರುತ್ತದೆ. ಈ ಎಲ್ಲಾ ಸಮಸ್ಯೆ ನಿವಾರಣೆಗೆ ಈಚೆಗೆ ಶವಸಂಸ್ಕಾರಕ್ಕೆ ಶವಪೆಟ್ಟಿಗೆಯ ಮಾದರಿಯೊಂದು ಗ್ರಾಮೀಣ ಭಾಗಕ್ಕೂ ಅನುಕೂಲವಾಗಿದೆ. ಈಗಾಗಲೇ ಹಲವು ಕಡೆ ಈ ಪೆಟ್ಟಿಗೆಯನ್ನು ಪಂಚಾಯತ್ ಮಟ್ಟದಲ್ಲಿ ಸಂಗ್ರಹಿಸಲಾಗುತ್ತಿದೆ. ಕಲ್ಮಡ್ಕ ಗ್ರಾಮ ಪಂಚಾಯತ್ ಗೆ ಕೂಡಾ ಇದೀಗ ಶವಸಂಸ್ಕಾರ ಪೆಟ್ಟಿಗೆ ಹಸ್ತಾಂತರ ಮಾಡಲಾಗಿದೆ.
ಶವ ಸಂಸ್ಕಾರಕ್ಕಾಗಿ ಶವಪೆಟ್ಟಿಗೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ ಇವರ ಉಸ್ತುವಾರಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಲ್ಮಡ್ಕ,ಪಂಬೆತ್ತಾಡಿ, ಸಂಘ ಸಂಸ್ಥೆಗಳು, ಸಾರ್ವಜನಿಕರು, ಗ್ರಾಮಸ್ಥರ ಸಹಕಾರದಿಂದ ಶವಪೆಟ್ಟಿಗೆಯನ್ನು ಖರೀದಿಸಿದ್ದು ಶವ ಸಂಸ್ಕಾರಕ್ಕೆ ಉಚಿತವಾಗಿ ನೀಡಲು ಸಿರ್ಧರಿಸಿ, ಕಲ್ಮಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ಸದಸ್ಯರು ನಿಕಟಪೂರ್ವ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಲ್ಮಡ್ಕ , ಗ್ರಾಮಸ್ಥರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.
ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಅಬ್ದುಲ್ ಗಫೂರ್ ಇವರು ಸ್ವಾಗತಿಸಿದರು , ಮಹೇಶ್ ಕರಿಕ್ಕಳ ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೀರ್ತಿಪ್ರಸಾದ್ ಸಿ.ಎಂ ಇವರು ವಂದಿಸಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…