ಗ್ರಾಮೀಣ ಭಾಗದಲ್ಲಿ ಶವಸಂಸ್ಕಾರದ್ದು ಸಮಸ್ಯೆಯಾಗಿ ಕಾಡುತ್ತದೆ. ನಗರದಲ್ಲಿ ಅತ್ಯುತ್ತಮ ತಂತ್ರಜ್ಞಾನದ ಶವಾಗಾರಗಳು, ಸ್ಮಶಾನಗಳು ಇರುತ್ತದೆ. ಗ್ರಾಮೀಣ ಭಾಗದ ಜನರು ಶವಸಂಸ್ಕಾರ ನಡೆಸಲು ಅನೇಕರು ಕಷ್ಟ ಪಡುತ್ತಾರೆ. ಕಟ್ಟಿಗೆ ಹಾಗೂ ಬೇಕಾದ ಸಲಕರಣೆಗಾಗಿ ಓಡಾಟ ಇರುತ್ತದೆ. ಈ ಎಲ್ಲಾ ಸಮಸ್ಯೆ ನಿವಾರಣೆಗೆ ಈಚೆಗೆ ಶವಸಂಸ್ಕಾರಕ್ಕೆ ಶವಪೆಟ್ಟಿಗೆಯ ಮಾದರಿಯೊಂದು ಗ್ರಾಮೀಣ ಭಾಗಕ್ಕೂ ಅನುಕೂಲವಾಗಿದೆ. ಈಗಾಗಲೇ ಹಲವು ಕಡೆ ಈ ಪೆಟ್ಟಿಗೆಯನ್ನು ಪಂಚಾಯತ್ ಮಟ್ಟದಲ್ಲಿ ಸಂಗ್ರಹಿಸಲಾಗುತ್ತಿದೆ. ಕಲ್ಮಡ್ಕ ಗ್ರಾಮ ಪಂಚಾಯತ್ ಗೆ ಕೂಡಾ ಇದೀಗ ಶವಸಂಸ್ಕಾರ ಪೆಟ್ಟಿಗೆ ಹಸ್ತಾಂತರ ಮಾಡಲಾಗಿದೆ.
ಶವ ಸಂಸ್ಕಾರಕ್ಕಾಗಿ ಶವಪೆಟ್ಟಿಗೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ ಇವರ ಉಸ್ತುವಾರಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಲ್ಮಡ್ಕ,ಪಂಬೆತ್ತಾಡಿ, ಸಂಘ ಸಂಸ್ಥೆಗಳು, ಸಾರ್ವಜನಿಕರು, ಗ್ರಾಮಸ್ಥರ ಸಹಕಾರದಿಂದ ಶವಪೆಟ್ಟಿಗೆಯನ್ನು ಖರೀದಿಸಿದ್ದು ಶವ ಸಂಸ್ಕಾರಕ್ಕೆ ಉಚಿತವಾಗಿ ನೀಡಲು ಸಿರ್ಧರಿಸಿ, ಕಲ್ಮಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ಸದಸ್ಯರು ನಿಕಟಪೂರ್ವ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಲ್ಮಡ್ಕ , ಗ್ರಾಮಸ್ಥರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.
ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಅಬ್ದುಲ್ ಗಫೂರ್ ಇವರು ಸ್ವಾಗತಿಸಿದರು , ಮಹೇಶ್ ಕರಿಕ್ಕಳ ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೀರ್ತಿಪ್ರಸಾದ್ ಸಿ.ಎಂ ಇವರು ವಂದಿಸಿದರು.
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…
ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…