ಕಲ್ಮಡ್ಕ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯ, ತಿಪ್ಪನಕಜೆ ಶಂಕರನಾರಾಯಣ ಭಟ್ ಮಂಗಳವಾರ ಮುಂಜಾನೆ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.
ನನಗೆ ಬಾಲ್ಯದಲ್ಲೇ ಪತ್ರಿಕೆ ಓದಲು ಪ್ರೋತ್ಸಾಹಿಸಿದವರು ಪುಟ್ಟಣ್ಣ ಎಂದು ನೆನಪಿಸಿಕೊಂಡಿದ್ದಾರೆ ಎಂದು ತಿಪ್ಪನ ಕಜೆ ಶಂಕರನಾರಾಯಣ ಭಟ್ ಅವರ ಸಹೋದರ ( ದೊಡ್ಡಪ್ಪನ ಮಗ) ಹಿರಿಯ ಪತ್ರಕರ್ತ ಶಿವಸುಬ್ರಹ್ಮಣ್ಯ ಅವರು. ನಾನು 6 ನೇ ತರಗತಿಯಲ್ಲಿ ಇದ್ದಾಗ ಮೊದಲ ಬಾರಿಗೆ ಪತ್ರಿಕೆ (ಕನ್ನಡಪ್ರಭ) ಓದಲು ಪ್ರೋತ್ಸಾಹಿಸಿದವರು. ಮುಂದೆ ಅದೇ ಪತ್ರಿಕೆಗೆ ನಾನು ಸಂಪಾದಕನಾದಾಗ ತುಂಬಾ ಖುಷಿಪಟ್ಟಿದ್ದರು.ಮುಂಗಾರು ಪತ್ರಿಕೆ, ಕನ್ನಡಪ್ರಭ ಪತ್ರಿಕೆಯಲ್ಲಿ ನನ್ನ ಬರಹಗಳನ್ನು ತಪ್ಪದೆ ಓದುತ್ತಿದ್ದರು. ಊರಿಗೆ ಬಂದಾಗ ಅದನ್ನು ನನಗೆ ಹೇಳುವುದರಲ್ಲಿ ಅವರು ಯಾವತ್ತೂ ಮರೆಯುತ್ತಿರಲಿಲ್ಲ. ಎಸ್.ಎಲ್. ಭೈರಪ್ಪ ನವರ ಕಾದಂಬರಿ ಓದು ಎಂದು ನಾನು ಹೈಸ್ಕೂಲಿನಲ್ಲಿ ಇದ್ದಾಗಲೇ ಹೇಳುತ್ತಿದ್ದರು.
ಅವರು ಆರ್ ಎಸ್ ಎಸ್ ಸ್ವಯಂ ಸೇವಕರು. ಅವರಲ್ಲಿ ಅಪಾರ ದೇಶಭಕ್ತಿ ಮತ್ತು ಸಾಹಿತ್ಯ ಓದು ಇತ್ತು. ಕಿರಿಯರ ಜತೆ ಸದಾ ಪ್ರೀತಿಯಿಂದ ಮಾತನಾಡಿಸುವ ಅಪರೂಪದ ವ್ಯಕ್ತಿತ್ವ ಅವರದ್ದಾಗಿತ್ತು. ಕಲ್ಮಡ್ಕ ಒಬ್ಬ ಹಿರಿಯ, ಸಜ್ಜನ ವ್ಯಕ್ತಿಯನ್ನು ಕಳೆದುಕೊಂಡಿದೆ. ಅವರ ನೆನಪು ಸದಾ. ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದೂ ಶಿವಸುಬ್ರಹ್ಮಣ್ಯ ಪ್ರಾರ್ಥಿಸಿದ್ದಾರೆ.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…