Advertisement
ಸುದ್ದಿಗಳು

ಕಲ್ಮಡ್ಕ | ತಿಪ್ಪನಕಜೆ ಶಂಕರನಾರಾಯಣ ಭಟ್ ನಿಧನ | ಪುಟ್ಟಣ್ಣನ ನೆನಪಿಸಿದ ಹಿರಿಯ ಪತ್ರಕರ್ತ ಶಿವಸುಬ್ರಹ್ಮಣ್ಯ |

Share

ಕಲ್ಮಡ್ಕ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯ, ತಿಪ್ಪನಕಜೆ ಶಂಕರನಾರಾಯಣ ಭಟ್ ಮಂಗಳವಾರ ಮುಂಜಾನೆ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.

ಪತ್ನಿ ಮಹಾಲಕ್ಷ್ಮಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಮತ್ತು ಅಪಾರ ಸ್ನೇಹಿತ ವರ್ಗ, ಬಂಧು ಬಳಗವನ್ನು ಅವರು ಅಗಲಿದ್ದಾರೆ. ಅವರ ಪುತ್ರ ಪ್ರಶಾಂತ ಮುಂಬಯಿಯ ಇಂಡಿಯ ಟುಡೆ ಗ್ರೂಪ್ ನ ಆಜ್ ತಕ್ ವಾಹಿನಿಯಲ್ಲಿ ಸೀನಿಯರ್ ಕೆಮೆರಾ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕಲ್ಮಡ್ಕ ಗ್ರಾಮಕ್ಕೇ ತಿಪ್ಪನಕಜೆ ಪುಟ್ಟಣ ಎಂದೇ ಆತ್ಮೀಯರಾಗಿದ್ದ ಶಂಕರನಾರಾಯಣ ಭಟ್ ಉತ್ತಮ ಸಹಕಾರಿ ಮತ್ತು ಕೃಷಿಕರಾಗಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದ ಅವರು ಸಾಹಿತ್ಯ ಪ್ರೇಮಿಯೂ ಆಗಿದ್ದರು. ಅವರಲ್ಲಿ ಅಪಾರ ಕನ್ನಡ ಸಾಹಿತ್ಯ ಓದು ಇತ್ತು.
ಕಲ್ಮಡ್ಕ ವ್ಯವಸಾಯ ಸೇವಾ ಸಹಕಾರ ಸಂಘ, ಕಲ್ಮಡ್ಕ ಹಾಲು ಉತ್ಪಾದಕರ ಸಹಕಾರ ಸಂಘ, ಸಂಗಮ ಕಲಾ ಸಂಘ, ಯುವಕ ಮಂಡಲದಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ಕಲ್ಮಡ್ಕ ಶ್ರೀರಾಮ ಭಜನಾ ಮಂದಿರದ ಸ್ಥಾಪಕ ಖಜಾಂಜಿ , ಹವ್ಯಕ ಪಂಜ ವಲಯದ ಕಾರ್ಯದರ್ಶಿಯೂ ಆಗಿದ್ದರು.
ಪುಟ್ಟಣ್ಣನ ನೆನಪಿಸಿದ ಹಿರಿಯ ಪತ್ರಕರ್ತ ಶಿವಸುಬ್ರಹ್ಮಣ್ಯ

ನನಗೆ ಬಾಲ್ಯದಲ್ಲೇ ಪತ್ರಿಕೆ ಓದಲು ಪ್ರೋತ್ಸಾಹಿಸಿದವರು ಪುಟ್ಟಣ್ಣ ಎಂದು ನೆನಪಿಸಿಕೊಂಡಿದ್ದಾರೆ ಎಂದು ತಿಪ್ಪನ ಕಜೆ ಶಂಕರನಾರಾಯಣ ಭಟ್ ಅವರ ಸಹೋದರ ( ದೊಡ್ಡಪ್ಪನ ಮಗ) ಹಿರಿಯ ಪತ್ರಕರ್ತ ಶಿವಸುಬ್ರಹ್ಮಣ್ಯ ಅವರು. ನಾನು 6 ನೇ ತರಗತಿಯಲ್ಲಿ ಇದ್ದಾಗ ಮೊದಲ ಬಾರಿಗೆ ಪತ್ರಿಕೆ (ಕನ್ನಡಪ್ರಭ) ಓದಲು ಪ್ರೋತ್ಸಾಹಿಸಿದವರು. ಮುಂದೆ ಅದೇ ಪತ್ರಿಕೆಗೆ ನಾನು ಸಂಪಾದಕನಾದಾಗ ತುಂಬಾ ಖುಷಿಪಟ್ಟಿದ್ದರು.ಮುಂಗಾರು ಪತ್ರಿಕೆ, ಕನ್ನಡಪ್ರಭ ಪತ್ರಿಕೆಯಲ್ಲಿ ನನ್ನ ಬರಹಗಳನ್ನು ತಪ್ಪದೆ ಓದುತ್ತಿದ್ದರು. ಊರಿಗೆ ಬಂದಾಗ ಅದನ್ನು ನನಗೆ ಹೇಳುವುದರಲ್ಲಿ ಅವರು ಯಾವತ್ತೂ ಮರೆಯುತ್ತಿರಲಿಲ್ಲ. ಎಸ್.ಎಲ್. ಭೈರಪ್ಪ ನವರ ಕಾದಂಬರಿ ಓದು ಎಂದು ನಾನು ಹೈಸ್ಕೂಲಿನಲ್ಲಿ ಇದ್ದಾಗಲೇ ಹೇಳುತ್ತಿದ್ದರು.

ಅವರು ಆರ್‌ ಎಸ್‌ ಎಸ್ ಸ್ವಯಂ ಸೇವಕರು. ಅವರಲ್ಲಿ ಅಪಾರ ದೇಶಭಕ್ತಿ ಮತ್ತು ಸಾಹಿತ್ಯ ಓದು ಇತ್ತು. ಕಿರಿಯರ ಜತೆ ಸದಾ ಪ್ರೀತಿಯಿಂದ ಮಾತನಾಡಿಸುವ ಅಪರೂಪದ ವ್ಯಕ್ತಿತ್ವ ಅವರದ್ದಾಗಿತ್ತು. ಕಲ್ಮಡ್ಕ ಒಬ್ಬ ಹಿರಿಯ, ಸಜ್ಜನ ವ್ಯಕ್ತಿಯನ್ನು ಕಳೆದುಕೊಂಡಿದೆ. ಅವರ ನೆನಪು ಸದಾ. ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದೂ ಶಿವಸುಬ್ರಹ್ಮಣ್ಯ ಪ್ರಾರ್ಥಿಸಿದ್ದಾರೆ.‌

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

3 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

5 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

5 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

15 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

17 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

24 hours ago