ಸುಳ್ಯ ತಾಲೂಕಿನ ಕಲ್ಮಕಾರು ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ನಿನ್ನೆ ತಡರಾತ್ರಿ ಸುರಿದ ಭಾರೀ ಮಳೆಗೆ ಕಲ್ಮಕಾರು ಎಸ್ಟೇಟ್ ಪ್ರದೇಶದಲ್ಲಿ ಭೂಕುಸಿತ ಉಂಟಾಗಿ, ಮಣ್ಣು ಮಿಶ್ರಿತ ನೀರಿನೊಂದಿಗೆ ಮರಗಳು ಉರುಳಿ ಬಂದಿದೆ. ಕಲ್ಮಕಾರು ಎಸ್ಟೇಟ್ ಸಂಪರ್ಕ ಕಡಿತವಾಗಿದೆ.
ನಿನ್ನೆ ತಡರಾತ್ರಿ ಸುಮಾರು 2 ಗಂಟೆಗೆ ಭಾರೀ ಮಳೆ ಆರಂಭವಾಗಿತ್ತು. ಆರಂಭದಲ್ಲಿ ಕಲ್ಮಕಾರು ಎಸ್ಟೇಟ್ ಪ್ರದೇಶದಲ್ಲಿ ಜಲಸ್ಫೋಟಗೊಂಡು ನೀರು ಹರಿಯಲು ಆರಂಭವಾಗಿತ್ತು. ಇದೇ ವೇಳೆಗೆ ಸಮೀಪದ ಜನರಿಗೆ ಸದ್ದು ಕೇಳಿದೆ. ಆದರೆ ಮಳೆಯ ಕಾರಣದಿಂದ ಹೊರಗಡೆ ಹೋಗಿರಲಿಲ್ಲ. ಸುಮಾರು 3 ಗಂಟೆಯ ಆಸುಪಾಸಿನಲ್ಲಿ ಭಾರೀ ನೀರು ಕಲ್ಮಕಾರು ಪ್ರದೇಶದ ಇಡ್ಯಡ್ಕ ಮೊದಲಾದ ಕಡೆ ಭಾರೀ ನೀರು ಹರಿದಿದೆ. ತೋಟದ ಪೂರ್ತಿ ಕಲುಷಿತ ನೀರು ಹಾಗೂ ಮರ ಬಿದ್ದುಕೊಂಡಿದೆ. ಇಡ್ಯಡ್ಕದ ಕೆಲವು ಮನೆಯ ಸಮೀಪದವರೆಗೂ ನೀರು ಬಂದಿತ್ತು. ಅನೇಕರಿಗೆ ಭಾರೀ ಮಳೆಯಿಂದ ನೀರು ಬಂದಿರುವುದು ತಿಳಿಯಲೇ ಇಲ್ಲ. ಬೆಳಗ್ಗೆ ನೋಡಿದಾಗ ಹಲವಾರು ಮಂದಿಗೆ ತಿಳಿದಿದೆ. ಬೇರೆಯೇ ಹೊಳೆ ನಿರ್ಮಾಣವಾಗಿದೆ.
ಎರಡು ದಿನಗಳ ಹಿಂದೆ ಇಡ್ಯಡ್ಕದ ಕಾಲು ಸಂಕ ತುಂಡಾಗಿತ್ತು. ಇದೀಗ ಕಲ್ಮಕಾರು ಕಡೆಗೆ ಸಂಪರ್ಕ ಕಡಿತಗೊಂಡಿದೆ. ಕಲ್ಮಕಾರು ಎಸ್ಟೇಟ್ ಪ್ರದೇಶದಲ್ಲಿ ಏನಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಕಲ್ಮಕಾರು ಸೇತುವೆ ಕೂಡಾ ಹಾನಿಯಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ವಿಷಯಗಳನ್ನು ಹಂಚಿಕೊಂಡು ಪ್ರಚಾರ ನಡೆಸುತ್ತಿದ್ದ ಆರು ಮಂದಿ…
ಅಡಿಕೆ ರೋಗಗಳಿಗೆ “ಬಯೋ” ಔಷಧಿಗಳ ಹೆಸರಿನಲ್ಲಿ ರೈತರನ್ನು ವಂಚಿಸಲಾಗುತ್ತಿದೆ ಎಂಬ ಆತಂಕ ಹೆಚ್ಚುತ್ತಿದೆ.…
ಅಡಿಕೆ ಆಧಾರಿತ ಅಗರೋಫಾರೆಸ್ಟ್ರಿ ವ್ಯವಸ್ಥೆಯಲ್ಲಿ ಲೆಮನ್ ಗ್ರಾಸ್ ವಿವಿಧ ಜಾತಿಗಳ ಬೆಳವಣಿಗೆ ಮತ್ತು…
ಕರ್ನಾಟಕ ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಮಿಶ್ರ ವಾತಾವರಣದ ಲಕ್ಷಣಗಳು ಕಂಡುಬರುತ್ತಿವೆ.…
ಕರ್ನಾಟಕದ ಸುಳ್ಯ, ಸುಬ್ರಹ್ಮಣ್ಯ ಹಾಗೂ ಕೊಡಗು ಭಾಗಗಳಲ್ಲಿ ಫೆಬ್ರವರಿ 27ರವರೆಗೆ ಮಳೆಯ ಸಾಧ್ಯತೆ…
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…