ಸುಳ್ಯ ತಾಲೂಕಿನ ಕಲ್ಮಕಾರು ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ನಿನ್ನೆ ತಡರಾತ್ರಿ ಸುರಿದ ಭಾರೀ ಮಳೆಗೆ ಕಲ್ಮಕಾರು ಎಸ್ಟೇಟ್ ಪ್ರದೇಶದಲ್ಲಿ ಭೂಕುಸಿತ ಉಂಟಾಗಿ, ಮಣ್ಣು ಮಿಶ್ರಿತ ನೀರಿನೊಂದಿಗೆ ಮರಗಳು ಉರುಳಿ ಬಂದಿದೆ. ಕಲ್ಮಕಾರು ಎಸ್ಟೇಟ್ ಸಂಪರ್ಕ ಕಡಿತವಾಗಿದೆ.
ನಿನ್ನೆ ತಡರಾತ್ರಿ ಸುಮಾರು 2 ಗಂಟೆಗೆ ಭಾರೀ ಮಳೆ ಆರಂಭವಾಗಿತ್ತು. ಆರಂಭದಲ್ಲಿ ಕಲ್ಮಕಾರು ಎಸ್ಟೇಟ್ ಪ್ರದೇಶದಲ್ಲಿ ಜಲಸ್ಫೋಟಗೊಂಡು ನೀರು ಹರಿಯಲು ಆರಂಭವಾಗಿತ್ತು. ಇದೇ ವೇಳೆಗೆ ಸಮೀಪದ ಜನರಿಗೆ ಸದ್ದು ಕೇಳಿದೆ. ಆದರೆ ಮಳೆಯ ಕಾರಣದಿಂದ ಹೊರಗಡೆ ಹೋಗಿರಲಿಲ್ಲ. ಸುಮಾರು 3 ಗಂಟೆಯ ಆಸುಪಾಸಿನಲ್ಲಿ ಭಾರೀ ನೀರು ಕಲ್ಮಕಾರು ಪ್ರದೇಶದ ಇಡ್ಯಡ್ಕ ಮೊದಲಾದ ಕಡೆ ಭಾರೀ ನೀರು ಹರಿದಿದೆ. ತೋಟದ ಪೂರ್ತಿ ಕಲುಷಿತ ನೀರು ಹಾಗೂ ಮರ ಬಿದ್ದುಕೊಂಡಿದೆ. ಇಡ್ಯಡ್ಕದ ಕೆಲವು ಮನೆಯ ಸಮೀಪದವರೆಗೂ ನೀರು ಬಂದಿತ್ತು. ಅನೇಕರಿಗೆ ಭಾರೀ ಮಳೆಯಿಂದ ನೀರು ಬಂದಿರುವುದು ತಿಳಿಯಲೇ ಇಲ್ಲ. ಬೆಳಗ್ಗೆ ನೋಡಿದಾಗ ಹಲವಾರು ಮಂದಿಗೆ ತಿಳಿದಿದೆ. ಬೇರೆಯೇ ಹೊಳೆ ನಿರ್ಮಾಣವಾಗಿದೆ.
ಎರಡು ದಿನಗಳ ಹಿಂದೆ ಇಡ್ಯಡ್ಕದ ಕಾಲು ಸಂಕ ತುಂಡಾಗಿತ್ತು. ಇದೀಗ ಕಲ್ಮಕಾರು ಕಡೆಗೆ ಸಂಪರ್ಕ ಕಡಿತಗೊಂಡಿದೆ. ಕಲ್ಮಕಾರು ಎಸ್ಟೇಟ್ ಪ್ರದೇಶದಲ್ಲಿ ಏನಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಕಲ್ಮಕಾರು ಸೇತುವೆ ಕೂಡಾ ಹಾನಿಯಾಗಿದೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…