ಸುಳ್ಯ ತಾಲೂಕಿನ ಕಲ್ಮಕಾರು ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ನಿನ್ನೆ ತಡರಾತ್ರಿ ಸುರಿದ ಭಾರೀ ಮಳೆಗೆ ಕಲ್ಮಕಾರು ಎಸ್ಟೇಟ್ ಪ್ರದೇಶದಲ್ಲಿ ಭೂಕುಸಿತ ಉಂಟಾಗಿ, ಮಣ್ಣು ಮಿಶ್ರಿತ ನೀರಿನೊಂದಿಗೆ ಮರಗಳು ಉರುಳಿ ಬಂದಿದೆ. ಕಲ್ಮಕಾರು ಎಸ್ಟೇಟ್ ಸಂಪರ್ಕ ಕಡಿತವಾಗಿದೆ.
ನಿನ್ನೆ ತಡರಾತ್ರಿ ಸುಮಾರು 2 ಗಂಟೆಗೆ ಭಾರೀ ಮಳೆ ಆರಂಭವಾಗಿತ್ತು. ಆರಂಭದಲ್ಲಿ ಕಲ್ಮಕಾರು ಎಸ್ಟೇಟ್ ಪ್ರದೇಶದಲ್ಲಿ ಜಲಸ್ಫೋಟಗೊಂಡು ನೀರು ಹರಿಯಲು ಆರಂಭವಾಗಿತ್ತು. ಇದೇ ವೇಳೆಗೆ ಸಮೀಪದ ಜನರಿಗೆ ಸದ್ದು ಕೇಳಿದೆ. ಆದರೆ ಮಳೆಯ ಕಾರಣದಿಂದ ಹೊರಗಡೆ ಹೋಗಿರಲಿಲ್ಲ. ಸುಮಾರು 3 ಗಂಟೆಯ ಆಸುಪಾಸಿನಲ್ಲಿ ಭಾರೀ ನೀರು ಕಲ್ಮಕಾರು ಪ್ರದೇಶದ ಇಡ್ಯಡ್ಕ ಮೊದಲಾದ ಕಡೆ ಭಾರೀ ನೀರು ಹರಿದಿದೆ. ತೋಟದ ಪೂರ್ತಿ ಕಲುಷಿತ ನೀರು ಹಾಗೂ ಮರ ಬಿದ್ದುಕೊಂಡಿದೆ. ಇಡ್ಯಡ್ಕದ ಕೆಲವು ಮನೆಯ ಸಮೀಪದವರೆಗೂ ನೀರು ಬಂದಿತ್ತು. ಅನೇಕರಿಗೆ ಭಾರೀ ಮಳೆಯಿಂದ ನೀರು ಬಂದಿರುವುದು ತಿಳಿಯಲೇ ಇಲ್ಲ. ಬೆಳಗ್ಗೆ ನೋಡಿದಾಗ ಹಲವಾರು ಮಂದಿಗೆ ತಿಳಿದಿದೆ. ಬೇರೆಯೇ ಹೊಳೆ ನಿರ್ಮಾಣವಾಗಿದೆ.
ಎರಡು ದಿನಗಳ ಹಿಂದೆ ಇಡ್ಯಡ್ಕದ ಕಾಲು ಸಂಕ ತುಂಡಾಗಿತ್ತು. ಇದೀಗ ಕಲ್ಮಕಾರು ಕಡೆಗೆ ಸಂಪರ್ಕ ಕಡಿತಗೊಂಡಿದೆ. ಕಲ್ಮಕಾರು ಎಸ್ಟೇಟ್ ಪ್ರದೇಶದಲ್ಲಿ ಏನಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಕಲ್ಮಕಾರು ಸೇತುವೆ ಕೂಡಾ ಹಾನಿಯಾಗಿದೆ.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…