Advertisement
ಸುದ್ದಿಗಳು

ಕಲ್ಮಕಾರು | ಭಾರೀ ಮಳೆಗೆ ಭೂಕುಸಿತ | ಸಂಪರ್ಕ ಕಡಿತ | ಮನೆಗೆ ನುಗ್ಗಿದ ನೀರು | ಅತಂತ್ರ ಸ್ಥಿತಿ |

Share

ಸುಳ್ಯ ತಾಲೂಕಿನ ಕಲ್ಮಕಾರು ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ನಿನ್ನೆ ತಡರಾತ್ರಿ ಸುರಿದ ಭಾರೀ ಮಳೆಗೆ ಕಲ್ಮಕಾರು ಎಸ್ಟೇಟ್‌ ಪ್ರದೇಶದಲ್ಲಿ ಭೂಕುಸಿತ ಉಂಟಾಗಿ, ಮಣ್ಣು ಮಿಶ್ರಿತ ನೀರಿನೊಂದಿಗೆ ಮರಗಳು ಉರುಳಿ ಬಂದಿದೆ. ಕಲ್ಮಕಾರು ಎಸ್ಟೇಟ್‌ ಸಂಪರ್ಕ ಕಡಿತವಾಗಿದೆ.

ನಿನ್ನೆ ತಡರಾತ್ರಿ ಸುಮಾರು 2 ಗಂಟೆಗೆ ಭಾರೀ ಮಳೆ ಆರಂಭವಾಗಿತ್ತು. ಆರಂಭದಲ್ಲಿ ಕಲ್ಮಕಾರು ಎಸ್ಟೇಟ್‌ ಪ್ರದೇಶದಲ್ಲಿ  ಜಲಸ್ಫೋಟಗೊಂಡು ನೀರು ಹರಿಯಲು ಆರಂಭವಾಗಿತ್ತು. ಇದೇ ವೇಳೆಗೆ ಸಮೀಪದ ಜನರಿಗೆ ಸದ್ದು ಕೇಳಿದೆ. ಆದರೆ ಮಳೆಯ ಕಾರಣದಿಂದ ಹೊರಗಡೆ ಹೋಗಿರಲಿಲ್ಲ.  ಸುಮಾರು 3 ಗಂಟೆಯ ಆಸುಪಾಸಿನಲ್ಲಿ ಭಾರೀ ನೀರು ಕಲ್ಮಕಾರು ಪ್ರದೇಶದ ಇಡ್ಯಡ್ಕ ಮೊದಲಾದ ಕಡೆ ಭಾರೀ ನೀರು ಹರಿದಿದೆ. ತೋಟದ ಪೂರ್ತಿ ಕಲುಷಿತ ನೀರು ಹಾಗೂ ಮರ ಬಿದ್ದುಕೊಂಡಿದೆ. ಇಡ್ಯಡ್ಕದ ಕೆಲವು ಮನೆಯ ಸಮೀಪದವರೆಗೂ ನೀರು ಬಂದಿತ್ತು.  ಅನೇಕರಿಗೆ ಭಾರೀ ಮಳೆಯಿಂದ ನೀರು ಬಂದಿರುವುದು  ತಿಳಿಯಲೇ ಇಲ್ಲ. ಬೆಳಗ್ಗೆ ನೋಡಿದಾಗ ಹಲವಾರು ಮಂದಿಗೆ ತಿಳಿದಿದೆ. ಬೇರೆಯೇ ಹೊಳೆ ನಿರ್ಮಾಣವಾಗಿದೆ.

ಎರಡು ದಿನಗಳ ಹಿಂದೆ ಇಡ್ಯಡ್ಕದ ಕಾಲು ಸಂಕ ತುಂಡಾಗಿತ್ತು. ಇದೀಗ ಕಲ್ಮಕಾರು ಕಡೆಗೆ ಸಂಪರ್ಕ ಕಡಿತಗೊಂಡಿದೆ.  ಕಲ್ಮಕಾರು ಎಸ್ಟೇಟ್‌ ಪ್ರದೇಶದಲ್ಲಿ ಏನಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಕಲ್ಮಕಾರು ಸೇತುವೆ ಕೂಡಾ ಹಾನಿಯಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

10 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

11 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

21 hours ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

2 days ago