ಆಧುನಿಕ ಭಗೀರಥ ಖ್ಯಾತಿಯ ಕಾಮೇಗೌಡ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕಾಮೇಗೌಡ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸದೊಡ್ಡಿಯವರಾದ ಕಾಮೇಗೌಡ, ವೃತ್ತಿಯಲ್ಲಿ ಕುರಿಗಾಹಿ. ಕುಂದೂರು ಬೆಟ್ಟದ ಮೇಲೆ ಸ್ವತಃ 16 ಕೆರೆಗಳನ್ನು ನಿರ್ಮಾಣ ಮಾಡಿ ಅಂತರ್ಜಲ ಹೆಚ್ಚಳಕ್ಕೆ ಕಾರಣರಾಗಿದ್ದರು. ಅಲ್ಲದೇ ಸಾವಿರಾರು ಗಿಡಗಳನ್ನು ನೆಟ್ಟು ಪರಿಸರ ಕಾಳಜಿ ಮೆರೆದಿದ್ದರು.
ಕಾಮೇಗೌಡರ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೊಗಳಿದ್ದರು. ಜೂನ್ 28, 2020ರಂದು ಮೋದಿ ಕಾಮೇಗೌಡರನ್ನ ಕೊಂಡಾಡಿದ್ದರು. ‘ಮಳವಳ್ಳಿ ತಾಲೂಕಿನ ದಾಸರದೊಡ್ಡಿ ಗ್ರಾಮದ ರೈತ 80 ವರ್ಷದ ಕಾಮೇಗೌಡರ ಕೆಲಸ ಎಲ್ಲರಿಗೂ ಅಚ್ಚರಿ ತರುತ್ತದೆ.
ಅವರು ತಮ್ಮ ಕುರಿಸಾಗಣಿಕೆ ಜೊತೆಗೆ ಜಿಲ್ಲೆಯಲ್ಲಿ ಸುಮಾರು 16 ಕೆರೆಗಳನ್ನು ನಿರ್ಮಿಸಿ ಜಲಸಂಕ್ಷಣೆಯಲ್ಲಿ ತೊಡಗಿದ್ದಾರೆ. ಅವರ ಪ್ರಯತ್ನ ಬಹಳ ದೊಡ್ಡದು’ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇನ್ನು ಕಾಮೇಗೌಡರಿಗೆ ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಬಂದಿವೆ.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…