ಆಧುನಿಕ ಭಗೀರಥ ಖ್ಯಾತಿಯ ಕಾಮೇಗೌಡ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕಾಮೇಗೌಡ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸದೊಡ್ಡಿಯವರಾದ ಕಾಮೇಗೌಡ, ವೃತ್ತಿಯಲ್ಲಿ ಕುರಿಗಾಹಿ. ಕುಂದೂರು ಬೆಟ್ಟದ ಮೇಲೆ ಸ್ವತಃ 16 ಕೆರೆಗಳನ್ನು ನಿರ್ಮಾಣ ಮಾಡಿ ಅಂತರ್ಜಲ ಹೆಚ್ಚಳಕ್ಕೆ ಕಾರಣರಾಗಿದ್ದರು. ಅಲ್ಲದೇ ಸಾವಿರಾರು ಗಿಡಗಳನ್ನು ನೆಟ್ಟು ಪರಿಸರ ಕಾಳಜಿ ಮೆರೆದಿದ್ದರು.
ಕಾಮೇಗೌಡರ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೊಗಳಿದ್ದರು. ಜೂನ್ 28, 2020ರಂದು ಮೋದಿ ಕಾಮೇಗೌಡರನ್ನ ಕೊಂಡಾಡಿದ್ದರು. ‘ಮಳವಳ್ಳಿ ತಾಲೂಕಿನ ದಾಸರದೊಡ್ಡಿ ಗ್ರಾಮದ ರೈತ 80 ವರ್ಷದ ಕಾಮೇಗೌಡರ ಕೆಲಸ ಎಲ್ಲರಿಗೂ ಅಚ್ಚರಿ ತರುತ್ತದೆ.
ಅವರು ತಮ್ಮ ಕುರಿಸಾಗಣಿಕೆ ಜೊತೆಗೆ ಜಿಲ್ಲೆಯಲ್ಲಿ ಸುಮಾರು 16 ಕೆರೆಗಳನ್ನು ನಿರ್ಮಿಸಿ ಜಲಸಂಕ್ಷಣೆಯಲ್ಲಿ ತೊಡಗಿದ್ದಾರೆ. ಅವರ ಪ್ರಯತ್ನ ಬಹಳ ದೊಡ್ಡದು’ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇನ್ನು ಕಾಮೇಗೌಡರಿಗೆ ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಬಂದಿವೆ.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…