ಆಧುನಿಕ ಭಗೀರಥ ಖ್ಯಾತಿಯ ಕಾಮೇಗೌಡ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕಾಮೇಗೌಡ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸದೊಡ್ಡಿಯವರಾದ ಕಾಮೇಗೌಡ, ವೃತ್ತಿಯಲ್ಲಿ ಕುರಿಗಾಹಿ. ಕುಂದೂರು ಬೆಟ್ಟದ ಮೇಲೆ ಸ್ವತಃ 16 ಕೆರೆಗಳನ್ನು ನಿರ್ಮಾಣ ಮಾಡಿ ಅಂತರ್ಜಲ ಹೆಚ್ಚಳಕ್ಕೆ ಕಾರಣರಾಗಿದ್ದರು. ಅಲ್ಲದೇ ಸಾವಿರಾರು ಗಿಡಗಳನ್ನು ನೆಟ್ಟು ಪರಿಸರ ಕಾಳಜಿ ಮೆರೆದಿದ್ದರು.
ಕಾಮೇಗೌಡರ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೊಗಳಿದ್ದರು. ಜೂನ್ 28, 2020ರಂದು ಮೋದಿ ಕಾಮೇಗೌಡರನ್ನ ಕೊಂಡಾಡಿದ್ದರು. ‘ಮಳವಳ್ಳಿ ತಾಲೂಕಿನ ದಾಸರದೊಡ್ಡಿ ಗ್ರಾಮದ ರೈತ 80 ವರ್ಷದ ಕಾಮೇಗೌಡರ ಕೆಲಸ ಎಲ್ಲರಿಗೂ ಅಚ್ಚರಿ ತರುತ್ತದೆ.
ಅವರು ತಮ್ಮ ಕುರಿಸಾಗಣಿಕೆ ಜೊತೆಗೆ ಜಿಲ್ಲೆಯಲ್ಲಿ ಸುಮಾರು 16 ಕೆರೆಗಳನ್ನು ನಿರ್ಮಿಸಿ ಜಲಸಂಕ್ಷಣೆಯಲ್ಲಿ ತೊಡಗಿದ್ದಾರೆ. ಅವರ ಪ್ರಯತ್ನ ಬಹಳ ದೊಡ್ಡದು’ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇನ್ನು ಕಾಮೇಗೌಡರಿಗೆ ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಬಂದಿವೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…