ಆಧುನಿಕ ಭಗೀರಥ ಖ್ಯಾತಿಯ ಕಾಮೇಗೌಡ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕಾಮೇಗೌಡ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸದೊಡ್ಡಿಯವರಾದ ಕಾಮೇಗೌಡ, ವೃತ್ತಿಯಲ್ಲಿ ಕುರಿಗಾಹಿ. ಕುಂದೂರು ಬೆಟ್ಟದ ಮೇಲೆ ಸ್ವತಃ 16 ಕೆರೆಗಳನ್ನು ನಿರ್ಮಾಣ ಮಾಡಿ ಅಂತರ್ಜಲ ಹೆಚ್ಚಳಕ್ಕೆ ಕಾರಣರಾಗಿದ್ದರು. ಅಲ್ಲದೇ ಸಾವಿರಾರು ಗಿಡಗಳನ್ನು ನೆಟ್ಟು ಪರಿಸರ ಕಾಳಜಿ ಮೆರೆದಿದ್ದರು.
ಕಾಮೇಗೌಡರ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೊಗಳಿದ್ದರು. ಜೂನ್ 28, 2020ರಂದು ಮೋದಿ ಕಾಮೇಗೌಡರನ್ನ ಕೊಂಡಾಡಿದ್ದರು. ‘ಮಳವಳ್ಳಿ ತಾಲೂಕಿನ ದಾಸರದೊಡ್ಡಿ ಗ್ರಾಮದ ರೈತ 80 ವರ್ಷದ ಕಾಮೇಗೌಡರ ಕೆಲಸ ಎಲ್ಲರಿಗೂ ಅಚ್ಚರಿ ತರುತ್ತದೆ.
ಅವರು ತಮ್ಮ ಕುರಿಸಾಗಣಿಕೆ ಜೊತೆಗೆ ಜಿಲ್ಲೆಯಲ್ಲಿ ಸುಮಾರು 16 ಕೆರೆಗಳನ್ನು ನಿರ್ಮಿಸಿ ಜಲಸಂಕ್ಷಣೆಯಲ್ಲಿ ತೊಡಗಿದ್ದಾರೆ. ಅವರ ಪ್ರಯತ್ನ ಬಹಳ ದೊಡ್ಡದು’ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇನ್ನು ಕಾಮೇಗೌಡರಿಗೆ ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಬಂದಿವೆ.
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…