ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಗುತ್ತಿಗಾರು-ಕಮಿಲ-ಬಳ್ಪ ರಸ್ತೆ ಅಭಿವೃದ್ಧಿಗೆ ಸಚಿವ ಎಸ್ ಅಂಗಾರ ಅವರು ಮಂಗಳವಾರದಂದು ಕಮಿಲದಲ್ಲಿ ಗುದ್ದಲಿ ಪೂಜೆ ನೆರವೇರಿಸಿದರು. ಗುದ್ದಲಿಪೂಜೆ ನೆರವೇರಿಸಿದ ಸಚಿವ ಅಂಗಾರ, “ಶೀಘ್ರದಲ್ಲಿಯೇ ಕಾಮಗಾರಿ ನಡೆಸಲಾಗುತ್ತದೆ. ಅಭಿವೃದ್ಧಿ ಪರವಾಗಿ ಯಾವತ್ತೂ ಯೋಜನೆ ರೂಪಿಸಲಾಗುತ್ತದೆ. ವಿರೋಧಗಳನ್ನು ಸ್ವೀಕರಿಸುವ ಮನೋಭಾವ ಇರಬೇಕಾಗುತ್ತದೆ” ಎಂದರು.
ಈ ಸಂದರ್ಭದಲ್ಲಿ ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಗ್ರಾಪಂ ಅಧ್ಯಕ್ಷೆ ರೇವತಿ ಆಚಳ್ಳಿ, ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಗ್ರಾಪಂ ಸದಸ್ಯ ವೆಂಕಟ್ ವಳಲಂಬೆ, ತಾಪಂ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ಗ್ರಾ ಪಂ ಸದಸ್ಯೆ ಲತಾ ಕುಮಾರಿ ಆಜಡ್ಕ, ಗ್ರಾಮ ಭಾರತ ತಂಡದ ಅಧ್ಯಕ್ಷ ಗಂಗಾಧರ ಭಟ್ ಪುಚ್ಚಪ್ಪಾಡಿ ಮೊದಲಾದವರು ಇದ್ದರು.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…