ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದ ಬಾಂಧವ್ಯ ಗೆಳೆಯರ ಬಳಗದ ವತಿಯಿಂದ ಕಮಿಲ ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ದೆ ಹಾಗೂ ಜನ್ಮಾಷ್ಟಮಿ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮವನ್ನು ಡಾ.ರಾಮಕೃಷ್ಣ ಭಟ್ ದೇವಸ್ಯ ಉದ್ಘಾಟಿಸಿದರು. ತಾಪಂ ಮಾಜಿ ಸದಸ್ಯ ಅಶೋಕ್ ನೆಕ್ರಾಜೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿನೋದ್ ಕುಮಾರ್ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸ್ಫರ್ಧೆ ನಡೆಯಿತು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಸುಬ್ರಹ್ಮಣ್ಯ ಎಸ್ಎಸ್ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಧಾರ್ಮಿಕ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಗುತ್ತಿಗಾರು ಸಹಕಾರಿ ಬ್ಯಾಂಕ್ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಗ್ರಾಪಂ ಸದಸ್ಯೆ ಲತಾ ಆಜಡ್ಕ, ಶಾಲಾಮುಖ್ಯೋಪಾಧ್ಯಾಯಿನಿ ವನಜಾಕ್ಷಿ, ಅಖಿಲಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಉಪಸ್ಥಿತರಿದ್ದರು. ಬಾಂಧವ್ಯ ಗೆಳೆಯರ ಬಳಗದ ಅಧ್ಯಕ್ಷ ತುಂಗನಾಥ ಕಾಯನಕೋಡಿ ಸಭಾಧ್ಯಕ್ಷತೆ ವಹಿಸಿದ್ದರು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಬಾಂಧವ್ಯ ಗೆಳೆಯರ ಬಳಗದ ಕಾರ್ಯದರ್ಶಿ ಲೋಕೇಶ ಕಮಿಲ ಸ್ವಾಗತಿಸಿದರು, ಉಪಾಧ್ಯಕ್ಷ ಪುರುಷೋತ್ತಮ ಪುಚ್ಚಪ್ಪಾಡಿ ವಂದಿಸಿದರು. ತೇಜಪ್ಪ ಮಾಸ್ತರ್ ಸಂಪ್ಯಾಡಿ ಹಾಗೂ ಕುಶಾಲಪ್ಪ ತುಂಬತ್ತಾಜೆ ಕಾರ್ಯಕ್ರಮ ನಿರ್ವಹಿಸಿದರು.
ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…
ಕಿಸಾನ್ ಸಮ್ಮಾನ್ ನಿಧಿಯಿಂದ 9 ಕೋಟಿ 50 ಲಕ್ಷ ರೈತರಿಗೆ 21 ಸಾವಿರ…
ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…
ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…
ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16 ಸಾವಿರದ 114…
ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…