ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದ ಬಾಂಧವ್ಯ ಗೆಳೆಯರ ಬಳಗದ ವತಿಯಿಂದ ಕಮಿಲ ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ದೆ ಹಾಗೂ ಜನ್ಮಾಷ್ಟಮಿ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮವನ್ನು ಡಾ.ರಾಮಕೃಷ್ಣ ಭಟ್ ದೇವಸ್ಯ ಉದ್ಘಾಟಿಸಿದರು. ತಾಪಂ ಮಾಜಿ ಸದಸ್ಯ ಅಶೋಕ್ ನೆಕ್ರಾಜೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿನೋದ್ ಕುಮಾರ್ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸ್ಫರ್ಧೆ ನಡೆಯಿತು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಸುಬ್ರಹ್ಮಣ್ಯ ಎಸ್ಎಸ್ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಧಾರ್ಮಿಕ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಗುತ್ತಿಗಾರು ಸಹಕಾರಿ ಬ್ಯಾಂಕ್ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಗ್ರಾಪಂ ಸದಸ್ಯೆ ಲತಾ ಆಜಡ್ಕ, ಶಾಲಾಮುಖ್ಯೋಪಾಧ್ಯಾಯಿನಿ ವನಜಾಕ್ಷಿ, ಅಖಿಲಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಉಪಸ್ಥಿತರಿದ್ದರು. ಬಾಂಧವ್ಯ ಗೆಳೆಯರ ಬಳಗದ ಅಧ್ಯಕ್ಷ ತುಂಗನಾಥ ಕಾಯನಕೋಡಿ ಸಭಾಧ್ಯಕ್ಷತೆ ವಹಿಸಿದ್ದರು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಬಾಂಧವ್ಯ ಗೆಳೆಯರ ಬಳಗದ ಕಾರ್ಯದರ್ಶಿ ಲೋಕೇಶ ಕಮಿಲ ಸ್ವಾಗತಿಸಿದರು, ಉಪಾಧ್ಯಕ್ಷ ಪುರುಷೋತ್ತಮ ಪುಚ್ಚಪ್ಪಾಡಿ ವಂದಿಸಿದರು. ತೇಜಪ್ಪ ಮಾಸ್ತರ್ ಸಂಪ್ಯಾಡಿ ಹಾಗೂ ಕುಶಾಲಪ್ಪ ತುಂಬತ್ತಾಜೆ ಕಾರ್ಯಕ್ರಮ ನಿರ್ವಹಿಸಿದರು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…