ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದ ಶ್ರೀ ರಕ್ತೇಶ್ವರಿ ಸಾನ್ನಿಧ್ಯದಲ್ಲಿ ಸಾಮೂಹಿಕ ಶ್ರೀ ದುರ್ಗಾಪೂಜೆ ವೇ.ಮೂ. ಶ್ಯಾಮ ಭಟ್ ಹೊಸವಳಿಕೆ ಇವರ ನೇತೃತ್ವದಲ್ಲಿ ನಡೆಯಿತು. ಕೊರೋನಾ ಮುಂಜಾಗ್ರತಾ ಕ್ರಮಗಳಂತೆ ನಿಗದಿತ ಸಂಖ್ಯೆಯ ಭಕ್ತಾದಿಗಳಿಂದ ಪೂಜಾ ಕಾರ್ಯಕ್ರಮಗಳು ನಡೆದವು. ನವರಾತ್ರಿಯ ವಿಶೇಷ ಸಂದರ್ಭದಲ್ಲಿ ಪ್ರತೀ ವರ್ಷದಂತೆ ಪೂಜಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭ ಗುತ್ತಿಗಾರು ಶ್ರೀಕೃಷ್ಣ ಯಕ್ಷಗಾನ ಕಲಾಮಂಡಳಿ ವತಿಯಿಂದ ತಾಳಮದ್ದಳೆ ನಡೆಯಿತು.
ಈ ಸಂದರ್ಭ ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಮೊಕ್ತೇಸರ ಗುರುರಾಜ ಭಟ್ ಪುಚ್ಚಪ್ಪಾಡಿ, ಆಡಳಿತ ಸಮಿತಿ ಅಧ್ಯಕ್ಷ ಸೂರಪ್ಪ ಗೌಡ ಕೊಂದಾಳ, ಕಾರ್ಯದರ್ಶಿ ಶಿವ ಕುಮಾರ್ ಕಮಿಲ , ಪ್ರಮುಖರಾದ ಕೇಶವ ಗೌಡ ಕಾಂತಿಲ, ಉಮೇಶ್ ಕಮಿಲ, ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ಮಾಜಿ ಅಧ್ಯಕ್ಷ ತುಂಗನಾಥ ಕಮಿಲ , ದೇವಿಪ್ರಸಾದ್ ಚಿಕ್ಮುಳಿ ಮೊದಲಾದವರು ಉಪಸ್ಥಿತರಿದ್ದರು.
ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ರಸ್ತೆ ದುರಸ್ತಿಗೆ ಅನುದಾನ ನೀಡಿದ ಎಪಿಎಂಸಿ ಸದಸ್ಯೆ ಪ್ರೇಮಲತಾ ಚಿಕ್ಮುಳಿ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು.
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…