ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದ ಶ್ರೀ ರಕ್ತೇಶ್ವರಿ ಸಾನ್ನಿಧ್ಯದಲ್ಲಿ ಸಾಮೂಹಿಕ ಶ್ರೀ ದುರ್ಗಾಪೂಜೆ ವೇ.ಮೂ. ಶ್ಯಾಮ ಭಟ್ ಹೊಸವಳಿಕೆ ಇವರ ನೇತೃತ್ವದಲ್ಲಿ ನಡೆಯಿತು. ಕೊರೋನಾ ಮುಂಜಾಗ್ರತಾ ಕ್ರಮಗಳಂತೆ ನಿಗದಿತ ಸಂಖ್ಯೆಯ ಭಕ್ತಾದಿಗಳಿಂದ ಪೂಜಾ ಕಾರ್ಯಕ್ರಮಗಳು ನಡೆದವು. ನವರಾತ್ರಿಯ ವಿಶೇಷ ಸಂದರ್ಭದಲ್ಲಿ ಪ್ರತೀ ವರ್ಷದಂತೆ ಪೂಜಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭ ಗುತ್ತಿಗಾರು ಶ್ರೀಕೃಷ್ಣ ಯಕ್ಷಗಾನ ಕಲಾಮಂಡಳಿ ವತಿಯಿಂದ ತಾಳಮದ್ದಳೆ ನಡೆಯಿತು.
ಈ ಸಂದರ್ಭ ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಮೊಕ್ತೇಸರ ಗುರುರಾಜ ಭಟ್ ಪುಚ್ಚಪ್ಪಾಡಿ, ಆಡಳಿತ ಸಮಿತಿ ಅಧ್ಯಕ್ಷ ಸೂರಪ್ಪ ಗೌಡ ಕೊಂದಾಳ, ಕಾರ್ಯದರ್ಶಿ ಶಿವ ಕುಮಾರ್ ಕಮಿಲ , ಪ್ರಮುಖರಾದ ಕೇಶವ ಗೌಡ ಕಾಂತಿಲ, ಉಮೇಶ್ ಕಮಿಲ, ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ಮಾಜಿ ಅಧ್ಯಕ್ಷ ತುಂಗನಾಥ ಕಮಿಲ , ದೇವಿಪ್ರಸಾದ್ ಚಿಕ್ಮುಳಿ ಮೊದಲಾದವರು ಉಪಸ್ಥಿತರಿದ್ದರು.
ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ರಸ್ತೆ ದುರಸ್ತಿಗೆ ಅನುದಾನ ನೀಡಿದ ಎಪಿಎಂಸಿ ಸದಸ್ಯೆ ಪ್ರೇಮಲತಾ ಚಿಕ್ಮುಳಿ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು.
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…