ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದ ಶ್ರೀ ರಕ್ತೇಶ್ವರಿ ಸಾನ್ನಿಧ್ಯದಲ್ಲಿ ಸಾಮೂಹಿಕ ಶ್ರೀ ದುರ್ಗಾಪೂಜೆ ವೇ.ಮೂ. ಶ್ಯಾಮ ಭಟ್ ಹೊಸವಳಿಕೆ ಇವರ ನೇತೃತ್ವದಲ್ಲಿ ನಡೆಯಿತು. ಕೊರೋನಾ ಮುಂಜಾಗ್ರತಾ ಕ್ರಮಗಳಂತೆ ನಿಗದಿತ ಸಂಖ್ಯೆಯ ಭಕ್ತಾದಿಗಳಿಂದ ಪೂಜಾ ಕಾರ್ಯಕ್ರಮಗಳು ನಡೆದವು. ನವರಾತ್ರಿಯ ವಿಶೇಷ ಸಂದರ್ಭದಲ್ಲಿ ಪ್ರತೀ ವರ್ಷದಂತೆ ಪೂಜಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭ ಗುತ್ತಿಗಾರು ಶ್ರೀಕೃಷ್ಣ ಯಕ್ಷಗಾನ ಕಲಾಮಂಡಳಿ ವತಿಯಿಂದ ತಾಳಮದ್ದಳೆ ನಡೆಯಿತು.
ಈ ಸಂದರ್ಭ ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಮೊಕ್ತೇಸರ ಗುರುರಾಜ ಭಟ್ ಪುಚ್ಚಪ್ಪಾಡಿ, ಆಡಳಿತ ಸಮಿತಿ ಅಧ್ಯಕ್ಷ ಸೂರಪ್ಪ ಗೌಡ ಕೊಂದಾಳ, ಕಾರ್ಯದರ್ಶಿ ಶಿವ ಕುಮಾರ್ ಕಮಿಲ , ಪ್ರಮುಖರಾದ ಕೇಶವ ಗೌಡ ಕಾಂತಿಲ, ಉಮೇಶ್ ಕಮಿಲ, ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ಮಾಜಿ ಅಧ್ಯಕ್ಷ ತುಂಗನಾಥ ಕಮಿಲ , ದೇವಿಪ್ರಸಾದ್ ಚಿಕ್ಮುಳಿ ಮೊದಲಾದವರು ಉಪಸ್ಥಿತರಿದ್ದರು.
ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ರಸ್ತೆ ದುರಸ್ತಿಗೆ ಅನುದಾನ ನೀಡಿದ ಎಪಿಎಂಸಿ ಸದಸ್ಯೆ ಪ್ರೇಮಲತಾ ಚಿಕ್ಮುಳಿ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…