ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದ ಶ್ರೀ ರಕ್ತೇಶ್ವರಿ ಸಾನ್ನಿಧ್ಯದಲ್ಲಿ ಸಾಮೂಹಿಕ ಶ್ರೀ ದುರ್ಗಾಪೂಜೆ ವೇ.ಮೂ. ಶ್ಯಾಮ ಭಟ್ ಹೊಸವಳಿಕೆ ಇವರ ನೇತೃತ್ವದಲ್ಲಿ ನಡೆಯಿತು. ಕೊರೋನಾ ಮುಂಜಾಗ್ರತಾ ಕ್ರಮಗಳಂತೆ ನಿಗದಿತ ಸಂಖ್ಯೆಯ ಭಕ್ತಾದಿಗಳಿಂದ ಪೂಜಾ ಕಾರ್ಯಕ್ರಮಗಳು ನಡೆದವು. ನವರಾತ್ರಿಯ ವಿಶೇಷ ಸಂದರ್ಭದಲ್ಲಿ ಪ್ರತೀ ವರ್ಷದಂತೆ ಪೂಜಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭ ಗುತ್ತಿಗಾರು ಶ್ರೀಕೃಷ್ಣ ಯಕ್ಷಗಾನ ಕಲಾಮಂಡಳಿ ವತಿಯಿಂದ ತಾಳಮದ್ದಳೆ ನಡೆಯಿತು.
ಈ ಸಂದರ್ಭ ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಮೊಕ್ತೇಸರ ಗುರುರಾಜ ಭಟ್ ಪುಚ್ಚಪ್ಪಾಡಿ, ಆಡಳಿತ ಸಮಿತಿ ಅಧ್ಯಕ್ಷ ಸೂರಪ್ಪ ಗೌಡ ಕೊಂದಾಳ, ಕಾರ್ಯದರ್ಶಿ ಶಿವ ಕುಮಾರ್ ಕಮಿಲ , ಪ್ರಮುಖರಾದ ಕೇಶವ ಗೌಡ ಕಾಂತಿಲ, ಉಮೇಶ್ ಕಮಿಲ, ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ಮಾಜಿ ಅಧ್ಯಕ್ಷ ತುಂಗನಾಥ ಕಮಿಲ , ದೇವಿಪ್ರಸಾದ್ ಚಿಕ್ಮುಳಿ ಮೊದಲಾದವರು ಉಪಸ್ಥಿತರಿದ್ದರು.
ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ರಸ್ತೆ ದುರಸ್ತಿಗೆ ಅನುದಾನ ನೀಡಿದ ಎಪಿಎಂಸಿ ಸದಸ್ಯೆ ಪ್ರೇಮಲತಾ ಚಿಕ್ಮುಳಿ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…