ಕನಸೆಂಬ ಪಕ್ಷಿಯ ಬೆನ್ನೇರಿ ಹೊರಟಾಗ…..!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
“ಕನಸು” ಈ ಜಗತ್ತಿನಲ್ಲಿ ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಯೂ ಸಹ  ತಾನು ಮುಂದೆ ಜೀವನದಲ್ಲಿ ಹೇಗೆ ಆಗಬೇಕು ಎಂಬ ಕನಸು ಕಾಣುತ್ತಲೇ ಬರುತ್ತಾನೆ. ಆ ಕನಸು ನನಸಾಗುತ್ತದೆಯೋ? ಇಲ್ಲವೋ! ಎಂದು ತಿಳಿಯಲು ಸಾಧ್ಯವಿಲ್ಲ. ಆದರೂ ಸಹ ಕನಸೆಂಬ ಪಕ್ಷಿಯ ಬೆನ್ನತ್ತಿ ಹೋಗುತ್ತಾನೆ! ಒಂದಲ್ಲಾ ಒಂದು ದಿನ ತಾನು ಆ ಕನಸನ್ನು ನನಸು ಮಾಡಿಕೊಳ್ಳುವೆ ಎಂಬ ಛಲ ಆತನಲ್ಲಿ ಇರುತ್ತದೆ.
ವ್ಯಕ್ತಿ ತನ್ನ ಜೀವನದಲ್ಲಿ ನೂರಾರು ಕನಸುಗಳನ್ನು ಕಾಣುವ ಬದಲು ಕೇವಲ ಒಂದು ಕನಸನ್ನು ಕಂಡು ಆ ಕನಸನ್ನು ನನಸು ಮಾಡಿಕೊಳ್ಳಲು ಮುಂದಡಿ ಇರಿಸಿದರೆ ಒಂದು ದಿನ ನನಸಾಗಿಯೇ ಆಗುತ್ತದೆ. ಕೇವಲ ಆ ಕನಸನ್ನು ಬೆನ್ನತ್ತಿ ಹೊರಟರೆ ಸಾಲದು,  ಕನಸನ್ನು ಬೆನ್ನತ್ತಿ ಹೋಗುವ ದಾರಿ ಹಾಗೂ ತಲುಪುವ ಗುರಿ ಎರಡೂ ಸಹ ಒಳ್ಳೆಯದಾಗಿರಬೇಕು.
ನಮ್ಮ ಗುರಿ ಸಾಧನೆಯು ಇನ್ನೊಬ್ಬರ ಜೀವನವನ್ನು ಹಾಳು ಮಾಡಬಾರದು, ನಮ್ಮ ಕನಸು ಇನ್ನೊಬ್ಬರ ಕನಸಿಗೆ ಮುಳ್ಳಾಗಬಾರದು, ನಮ್ಮ ನಿರ್ಧಾರಗಳು ಇನ್ನೊಬ್ಬರ ಬದುಕಿಗೆ ಮುಳುವಾಗಬಾರದು.
ಬದುಕಿನಲ್ಲಿ ನೂರಾರು ಕನಸುಗಳನ್ನು ಕಂಡು ಯಾವ ಕನಸನ್ನು ಈಡೇರಿಸಿಕೊಳ್ಳುವುದು ಎಂದು ಚಿಂತೆ ಮಾಡುವ ಬದಲು ಕೇವಲ ಒಂದು ಕನಸನ್ನು ಕಾಣಿ, ಹಾಗೂ ಆ ಕನಸನ್ನು ನನಸಾಗಿಸಲು ಹೋರಾಟ ಮಾಡಿ. ಯಾವುದೇ ಒಬ್ಬ ವ್ಯಕ್ತಿ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಮುಖ್ಯವಾಗಿ ಬೇಕಾಗಿರುವುದು ಏಕಾಗ್ರತೆ, ನಿಷ್ಠೆ, ಸತ್ಯ, ಅಹಿಂಸೆ, ಪ್ರೀತಿ ಹಾಗೂ ನಿರ್ದಿಷ್ಟ ಗುರಿ ಮತ್ತು ಉದ್ದೇಶ. ಈ ಅಂಶಗಳು ನಮ್ಮನ್ನು ನಮ್ಮ ಗುರಿಯೆಡೆಗೆ ತಲುಪಿಸಲು ಸಹಕಾರಿಯಾಗುತ್ತದೆ.
ಆದರೆ ಈ ಕನಸಿನ ಓಟದಲ್ಲಿ ಪ್ರೀತಿ, ಸ್ನೇಹ, ಸಂಬಂಧಗಳನ್ನು ಎಂದಿಗೂ ಮರೆಯದಿರಿ. ಏಕೆಂದರೆ ಒಂದು ನಿಜವಾದ ಪ್ರೀತಿ, ಒಂದು ನಿಜವಾದ ಸ್ನೇಹ, ನಿಮ್ಮ ಈ ಸಾಧನೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟಿರಬಹುದು.
ಸಾಧನೆಯ ಹಾದಿಯಲ್ಲಿ ಸಿಗುವ ಪ್ರತಿಯೊಬ್ಬರ ಭಾವನೆಗಳನ್ನು ಗೌರವಿಸಿ. ಏಕೆಂದರೆ ನಮ್ಮ ದೇಹಕ್ಕೆ ಬಂಧನ ಇರಬಹುದು ಆದರೆ ನಮ್ಮ ಭಾವನೆಗಳಿಗೆ ಬಂಧನವಿಲ್ಲ. ಹಾಗೂ ಆ ಭಾವನೆಗಳನ್ನು ಬಂಧಿಸಲು ಸಾಧ್ಯವೂ ಇಲ್ಲ. ಭಾವನೆಗಳು ಎಂದಿಗೂ ಸ್ವತಂತ್ರ. ಭಾವನೆಗಳೇ ಒಂದು ಪ್ರಪಂಚ.
“ಕನಸೆಂಬ ಪಕ್ಷಿಯ ಬೆನ್ನತ್ತಿ ಹೋಗು… ಆದರೆ ಎಂದಿಗೂ ಮರೆಯದಿರು ಪ್ರೀತಿ, ಸ್ನೇಹ, ಸಂಬಂಧಗಳನ್ನು…..”
# ಉಲ್ಲಾಸ್‌ ಕಜ್ಜೋಡಿ
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಎರಡು ದಿನಗಳಿಂದ ಸಾಮಾನ್ಯ ಮಳೆ | ಗಾಳಿಯೊಂದಿಗೆ ಮಳೆ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ…

3 hours ago

ಕಾಡಾನೆ ಹಾವಳಿ | ಆನೆಗಳನ್ನು ಕಾಡಿಗಟ್ಟಲು  ಅರಣ್ಯಾಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚನೆ

ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ…

4 hours ago

ಮಾಂಗಲ್ಯ ದೋಷದ ಭೀತಿ | ವಿವಾಹ ಜೀವನದ ರಕ್ಷಣೆಗೆ ಜ್ಯೋತಿಷ್ಯ ಉಪಾಯಗಳು | ಮಾಂಗಲ್ಯ ದೋಷದ ಜ್ಯೋತಿಷ್ಯ ಮಹತ್ವ

ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಂಗಲ್ಯ ದೋಷ ಅಥವಾ ಮಾಂಗಲಿಕ ದೋಷ ಎಂಬುದು ಒಂದು…

4 hours ago

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ

ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…

12 hours ago

ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ

ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…

12 hours ago

ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ

ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…

14 hours ago