Advertisement

ಕನಸೆಂಬ ಪಕ್ಷಿಯ ಬೆನ್ನೇರಿ ಹೊರಟಾಗ…..!

Share
“ಕನಸು” ಈ ಜಗತ್ತಿನಲ್ಲಿ ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಯೂ ಸಹ  ತಾನು ಮುಂದೆ ಜೀವನದಲ್ಲಿ ಹೇಗೆ ಆಗಬೇಕು ಎಂಬ ಕನಸು ಕಾಣುತ್ತಲೇ ಬರುತ್ತಾನೆ. ಆ ಕನಸು ನನಸಾಗುತ್ತದೆಯೋ? ಇಲ್ಲವೋ! ಎಂದು ತಿಳಿಯಲು ಸಾಧ್ಯವಿಲ್ಲ. ಆದರೂ ಸಹ ಕನಸೆಂಬ ಪಕ್ಷಿಯ ಬೆನ್ನತ್ತಿ ಹೋಗುತ್ತಾನೆ! ಒಂದಲ್ಲಾ ಒಂದು ದಿನ ತಾನು ಆ ಕನಸನ್ನು ನನಸು ಮಾಡಿಕೊಳ್ಳುವೆ ಎಂಬ ಛಲ ಆತನಲ್ಲಿ ಇರುತ್ತದೆ.
ವ್ಯಕ್ತಿ ತನ್ನ ಜೀವನದಲ್ಲಿ ನೂರಾರು ಕನಸುಗಳನ್ನು ಕಾಣುವ ಬದಲು ಕೇವಲ ಒಂದು ಕನಸನ್ನು ಕಂಡು ಆ ಕನಸನ್ನು ನನಸು ಮಾಡಿಕೊಳ್ಳಲು ಮುಂದಡಿ ಇರಿಸಿದರೆ ಒಂದು ದಿನ ನನಸಾಗಿಯೇ ಆಗುತ್ತದೆ. ಕೇವಲ ಆ ಕನಸನ್ನು ಬೆನ್ನತ್ತಿ ಹೊರಟರೆ ಸಾಲದು,  ಕನಸನ್ನು ಬೆನ್ನತ್ತಿ ಹೋಗುವ ದಾರಿ ಹಾಗೂ ತಲುಪುವ ಗುರಿ ಎರಡೂ ಸಹ ಒಳ್ಳೆಯದಾಗಿರಬೇಕು.
ನಮ್ಮ ಗುರಿ ಸಾಧನೆಯು ಇನ್ನೊಬ್ಬರ ಜೀವನವನ್ನು ಹಾಳು ಮಾಡಬಾರದು, ನಮ್ಮ ಕನಸು ಇನ್ನೊಬ್ಬರ ಕನಸಿಗೆ ಮುಳ್ಳಾಗಬಾರದು, ನಮ್ಮ ನಿರ್ಧಾರಗಳು ಇನ್ನೊಬ್ಬರ ಬದುಕಿಗೆ ಮುಳುವಾಗಬಾರದು.
ಬದುಕಿನಲ್ಲಿ ನೂರಾರು ಕನಸುಗಳನ್ನು ಕಂಡು ಯಾವ ಕನಸನ್ನು ಈಡೇರಿಸಿಕೊಳ್ಳುವುದು ಎಂದು ಚಿಂತೆ ಮಾಡುವ ಬದಲು ಕೇವಲ ಒಂದು ಕನಸನ್ನು ಕಾಣಿ, ಹಾಗೂ ಆ ಕನಸನ್ನು ನನಸಾಗಿಸಲು ಹೋರಾಟ ಮಾಡಿ. ಯಾವುದೇ ಒಬ್ಬ ವ್ಯಕ್ತಿ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಮುಖ್ಯವಾಗಿ ಬೇಕಾಗಿರುವುದು ಏಕಾಗ್ರತೆ, ನಿಷ್ಠೆ, ಸತ್ಯ, ಅಹಿಂಸೆ, ಪ್ರೀತಿ ಹಾಗೂ ನಿರ್ದಿಷ್ಟ ಗುರಿ ಮತ್ತು ಉದ್ದೇಶ. ಈ ಅಂಶಗಳು ನಮ್ಮನ್ನು ನಮ್ಮ ಗುರಿಯೆಡೆಗೆ ತಲುಪಿಸಲು ಸಹಕಾರಿಯಾಗುತ್ತದೆ.
ಆದರೆ ಈ ಕನಸಿನ ಓಟದಲ್ಲಿ ಪ್ರೀತಿ, ಸ್ನೇಹ, ಸಂಬಂಧಗಳನ್ನು ಎಂದಿಗೂ ಮರೆಯದಿರಿ. ಏಕೆಂದರೆ ಒಂದು ನಿಜವಾದ ಪ್ರೀತಿ, ಒಂದು ನಿಜವಾದ ಸ್ನೇಹ, ನಿಮ್ಮ ಈ ಸಾಧನೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟಿರಬಹುದು.
ಸಾಧನೆಯ ಹಾದಿಯಲ್ಲಿ ಸಿಗುವ ಪ್ರತಿಯೊಬ್ಬರ ಭಾವನೆಗಳನ್ನು ಗೌರವಿಸಿ. ಏಕೆಂದರೆ ನಮ್ಮ ದೇಹಕ್ಕೆ ಬಂಧನ ಇರಬಹುದು ಆದರೆ ನಮ್ಮ ಭಾವನೆಗಳಿಗೆ ಬಂಧನವಿಲ್ಲ. ಹಾಗೂ ಆ ಭಾವನೆಗಳನ್ನು ಬಂಧಿಸಲು ಸಾಧ್ಯವೂ ಇಲ್ಲ. ಭಾವನೆಗಳು ಎಂದಿಗೂ ಸ್ವತಂತ್ರ. ಭಾವನೆಗಳೇ ಒಂದು ಪ್ರಪಂಚ.
“ಕನಸೆಂಬ ಪಕ್ಷಿಯ ಬೆನ್ನತ್ತಿ ಹೋಗು… ಆದರೆ ಎಂದಿಗೂ ಮರೆಯದಿರು ಪ್ರೀತಿ, ಸ್ನೇಹ, ಸಂಬಂಧಗಳನ್ನು…..”
# ಉಲ್ಲಾಸ್‌ ಕಜ್ಜೋಡಿ
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

11 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago