Advertisement

ಕನಸೆಂಬ ಪಕ್ಷಿಯ ಬೆನ್ನೇರಿ ಹೊರಟಾಗ…..!

Share
“ಕನಸು” ಈ ಜಗತ್ತಿನಲ್ಲಿ ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಯೂ ಸಹ  ತಾನು ಮುಂದೆ ಜೀವನದಲ್ಲಿ ಹೇಗೆ ಆಗಬೇಕು ಎಂಬ ಕನಸು ಕಾಣುತ್ತಲೇ ಬರುತ್ತಾನೆ. ಆ ಕನಸು ನನಸಾಗುತ್ತದೆಯೋ? ಇಲ್ಲವೋ! ಎಂದು ತಿಳಿಯಲು ಸಾಧ್ಯವಿಲ್ಲ. ಆದರೂ ಸಹ ಕನಸೆಂಬ ಪಕ್ಷಿಯ ಬೆನ್ನತ್ತಿ ಹೋಗುತ್ತಾನೆ! ಒಂದಲ್ಲಾ ಒಂದು ದಿನ ತಾನು ಆ ಕನಸನ್ನು ನನಸು ಮಾಡಿಕೊಳ್ಳುವೆ ಎಂಬ ಛಲ ಆತನಲ್ಲಿ ಇರುತ್ತದೆ.
ವ್ಯಕ್ತಿ ತನ್ನ ಜೀವನದಲ್ಲಿ ನೂರಾರು ಕನಸುಗಳನ್ನು ಕಾಣುವ ಬದಲು ಕೇವಲ ಒಂದು ಕನಸನ್ನು ಕಂಡು ಆ ಕನಸನ್ನು ನನಸು ಮಾಡಿಕೊಳ್ಳಲು ಮುಂದಡಿ ಇರಿಸಿದರೆ ಒಂದು ದಿನ ನನಸಾಗಿಯೇ ಆಗುತ್ತದೆ. ಕೇವಲ ಆ ಕನಸನ್ನು ಬೆನ್ನತ್ತಿ ಹೊರಟರೆ ಸಾಲದು,  ಕನಸನ್ನು ಬೆನ್ನತ್ತಿ ಹೋಗುವ ದಾರಿ ಹಾಗೂ ತಲುಪುವ ಗುರಿ ಎರಡೂ ಸಹ ಒಳ್ಳೆಯದಾಗಿರಬೇಕು.
ನಮ್ಮ ಗುರಿ ಸಾಧನೆಯು ಇನ್ನೊಬ್ಬರ ಜೀವನವನ್ನು ಹಾಳು ಮಾಡಬಾರದು, ನಮ್ಮ ಕನಸು ಇನ್ನೊಬ್ಬರ ಕನಸಿಗೆ ಮುಳ್ಳಾಗಬಾರದು, ನಮ್ಮ ನಿರ್ಧಾರಗಳು ಇನ್ನೊಬ್ಬರ ಬದುಕಿಗೆ ಮುಳುವಾಗಬಾರದು.
ಬದುಕಿನಲ್ಲಿ ನೂರಾರು ಕನಸುಗಳನ್ನು ಕಂಡು ಯಾವ ಕನಸನ್ನು ಈಡೇರಿಸಿಕೊಳ್ಳುವುದು ಎಂದು ಚಿಂತೆ ಮಾಡುವ ಬದಲು ಕೇವಲ ಒಂದು ಕನಸನ್ನು ಕಾಣಿ, ಹಾಗೂ ಆ ಕನಸನ್ನು ನನಸಾಗಿಸಲು ಹೋರಾಟ ಮಾಡಿ. ಯಾವುದೇ ಒಬ್ಬ ವ್ಯಕ್ತಿ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಮುಖ್ಯವಾಗಿ ಬೇಕಾಗಿರುವುದು ಏಕಾಗ್ರತೆ, ನಿಷ್ಠೆ, ಸತ್ಯ, ಅಹಿಂಸೆ, ಪ್ರೀತಿ ಹಾಗೂ ನಿರ್ದಿಷ್ಟ ಗುರಿ ಮತ್ತು ಉದ್ದೇಶ. ಈ ಅಂಶಗಳು ನಮ್ಮನ್ನು ನಮ್ಮ ಗುರಿಯೆಡೆಗೆ ತಲುಪಿಸಲು ಸಹಕಾರಿಯಾಗುತ್ತದೆ.
ಆದರೆ ಈ ಕನಸಿನ ಓಟದಲ್ಲಿ ಪ್ರೀತಿ, ಸ್ನೇಹ, ಸಂಬಂಧಗಳನ್ನು ಎಂದಿಗೂ ಮರೆಯದಿರಿ. ಏಕೆಂದರೆ ಒಂದು ನಿಜವಾದ ಪ್ರೀತಿ, ಒಂದು ನಿಜವಾದ ಸ್ನೇಹ, ನಿಮ್ಮ ಈ ಸಾಧನೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟಿರಬಹುದು.
ಸಾಧನೆಯ ಹಾದಿಯಲ್ಲಿ ಸಿಗುವ ಪ್ರತಿಯೊಬ್ಬರ ಭಾವನೆಗಳನ್ನು ಗೌರವಿಸಿ. ಏಕೆಂದರೆ ನಮ್ಮ ದೇಹಕ್ಕೆ ಬಂಧನ ಇರಬಹುದು ಆದರೆ ನಮ್ಮ ಭಾವನೆಗಳಿಗೆ ಬಂಧನವಿಲ್ಲ. ಹಾಗೂ ಆ ಭಾವನೆಗಳನ್ನು ಬಂಧಿಸಲು ಸಾಧ್ಯವೂ ಇಲ್ಲ. ಭಾವನೆಗಳು ಎಂದಿಗೂ ಸ್ವತಂತ್ರ. ಭಾವನೆಗಳೇ ಒಂದು ಪ್ರಪಂಚ.
“ಕನಸೆಂಬ ಪಕ್ಷಿಯ ಬೆನ್ನತ್ತಿ ಹೋಗು… ಆದರೆ ಎಂದಿಗೂ ಮರೆಯದಿರು ಪ್ರೀತಿ, ಸ್ನೇಹ, ಸಂಬಂಧಗಳನ್ನು…..”
# ಉಲ್ಲಾಸ್‌ ಕಜ್ಜೋಡಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

3 days ago