Advertisement

ಕನಸೆಂಬ ಪಕ್ಷಿಯ ಬೆನ್ನೇರಿ ಹೊರಟಾಗ…..!

Share
“ಕನಸು” ಈ ಜಗತ್ತಿನಲ್ಲಿ ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಯೂ ಸಹ  ತಾನು ಮುಂದೆ ಜೀವನದಲ್ಲಿ ಹೇಗೆ ಆಗಬೇಕು ಎಂಬ ಕನಸು ಕಾಣುತ್ತಲೇ ಬರುತ್ತಾನೆ. ಆ ಕನಸು ನನಸಾಗುತ್ತದೆಯೋ? ಇಲ್ಲವೋ! ಎಂದು ತಿಳಿಯಲು ಸಾಧ್ಯವಿಲ್ಲ. ಆದರೂ ಸಹ ಕನಸೆಂಬ ಪಕ್ಷಿಯ ಬೆನ್ನತ್ತಿ ಹೋಗುತ್ತಾನೆ! ಒಂದಲ್ಲಾ ಒಂದು ದಿನ ತಾನು ಆ ಕನಸನ್ನು ನನಸು ಮಾಡಿಕೊಳ್ಳುವೆ ಎಂಬ ಛಲ ಆತನಲ್ಲಿ ಇರುತ್ತದೆ.
ವ್ಯಕ್ತಿ ತನ್ನ ಜೀವನದಲ್ಲಿ ನೂರಾರು ಕನಸುಗಳನ್ನು ಕಾಣುವ ಬದಲು ಕೇವಲ ಒಂದು ಕನಸನ್ನು ಕಂಡು ಆ ಕನಸನ್ನು ನನಸು ಮಾಡಿಕೊಳ್ಳಲು ಮುಂದಡಿ ಇರಿಸಿದರೆ ಒಂದು ದಿನ ನನಸಾಗಿಯೇ ಆಗುತ್ತದೆ. ಕೇವಲ ಆ ಕನಸನ್ನು ಬೆನ್ನತ್ತಿ ಹೊರಟರೆ ಸಾಲದು,  ಕನಸನ್ನು ಬೆನ್ನತ್ತಿ ಹೋಗುವ ದಾರಿ ಹಾಗೂ ತಲುಪುವ ಗುರಿ ಎರಡೂ ಸಹ ಒಳ್ಳೆಯದಾಗಿರಬೇಕು.
ನಮ್ಮ ಗುರಿ ಸಾಧನೆಯು ಇನ್ನೊಬ್ಬರ ಜೀವನವನ್ನು ಹಾಳು ಮಾಡಬಾರದು, ನಮ್ಮ ಕನಸು ಇನ್ನೊಬ್ಬರ ಕನಸಿಗೆ ಮುಳ್ಳಾಗಬಾರದು, ನಮ್ಮ ನಿರ್ಧಾರಗಳು ಇನ್ನೊಬ್ಬರ ಬದುಕಿಗೆ ಮುಳುವಾಗಬಾರದು.
ಬದುಕಿನಲ್ಲಿ ನೂರಾರು ಕನಸುಗಳನ್ನು ಕಂಡು ಯಾವ ಕನಸನ್ನು ಈಡೇರಿಸಿಕೊಳ್ಳುವುದು ಎಂದು ಚಿಂತೆ ಮಾಡುವ ಬದಲು ಕೇವಲ ಒಂದು ಕನಸನ್ನು ಕಾಣಿ, ಹಾಗೂ ಆ ಕನಸನ್ನು ನನಸಾಗಿಸಲು ಹೋರಾಟ ಮಾಡಿ. ಯಾವುದೇ ಒಬ್ಬ ವ್ಯಕ್ತಿ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಮುಖ್ಯವಾಗಿ ಬೇಕಾಗಿರುವುದು ಏಕಾಗ್ರತೆ, ನಿಷ್ಠೆ, ಸತ್ಯ, ಅಹಿಂಸೆ, ಪ್ರೀತಿ ಹಾಗೂ ನಿರ್ದಿಷ್ಟ ಗುರಿ ಮತ್ತು ಉದ್ದೇಶ. ಈ ಅಂಶಗಳು ನಮ್ಮನ್ನು ನಮ್ಮ ಗುರಿಯೆಡೆಗೆ ತಲುಪಿಸಲು ಸಹಕಾರಿಯಾಗುತ್ತದೆ.
ಆದರೆ ಈ ಕನಸಿನ ಓಟದಲ್ಲಿ ಪ್ರೀತಿ, ಸ್ನೇಹ, ಸಂಬಂಧಗಳನ್ನು ಎಂದಿಗೂ ಮರೆಯದಿರಿ. ಏಕೆಂದರೆ ಒಂದು ನಿಜವಾದ ಪ್ರೀತಿ, ಒಂದು ನಿಜವಾದ ಸ್ನೇಹ, ನಿಮ್ಮ ಈ ಸಾಧನೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟಿರಬಹುದು.
ಸಾಧನೆಯ ಹಾದಿಯಲ್ಲಿ ಸಿಗುವ ಪ್ರತಿಯೊಬ್ಬರ ಭಾವನೆಗಳನ್ನು ಗೌರವಿಸಿ. ಏಕೆಂದರೆ ನಮ್ಮ ದೇಹಕ್ಕೆ ಬಂಧನ ಇರಬಹುದು ಆದರೆ ನಮ್ಮ ಭಾವನೆಗಳಿಗೆ ಬಂಧನವಿಲ್ಲ. ಹಾಗೂ ಆ ಭಾವನೆಗಳನ್ನು ಬಂಧಿಸಲು ಸಾಧ್ಯವೂ ಇಲ್ಲ. ಭಾವನೆಗಳು ಎಂದಿಗೂ ಸ್ವತಂತ್ರ. ಭಾವನೆಗಳೇ ಒಂದು ಪ್ರಪಂಚ.
“ಕನಸೆಂಬ ಪಕ್ಷಿಯ ಬೆನ್ನತ್ತಿ ಹೋಗು… ಆದರೆ ಎಂದಿಗೂ ಮರೆಯದಿರು ಪ್ರೀತಿ, ಸ್ನೇಹ, ಸಂಬಂಧಗಳನ್ನು…..”
# ಉಲ್ಲಾಸ್‌ ಕಜ್ಜೋಡಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

51 minutes ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

55 minutes ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 hour ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 hour ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

11 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago