Advertisement

ಕನಸೆಂಬ ಪಕ್ಷಿಯ ಬೆನ್ನೇರಿ ಹೊರಟಾಗ…..!

Share
“ಕನಸು” ಈ ಜಗತ್ತಿನಲ್ಲಿ ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಯೂ ಸಹ  ತಾನು ಮುಂದೆ ಜೀವನದಲ್ಲಿ ಹೇಗೆ ಆಗಬೇಕು ಎಂಬ ಕನಸು ಕಾಣುತ್ತಲೇ ಬರುತ್ತಾನೆ. ಆ ಕನಸು ನನಸಾಗುತ್ತದೆಯೋ? ಇಲ್ಲವೋ! ಎಂದು ತಿಳಿಯಲು ಸಾಧ್ಯವಿಲ್ಲ. ಆದರೂ ಸಹ ಕನಸೆಂಬ ಪಕ್ಷಿಯ ಬೆನ್ನತ್ತಿ ಹೋಗುತ್ತಾನೆ! ಒಂದಲ್ಲಾ ಒಂದು ದಿನ ತಾನು ಆ ಕನಸನ್ನು ನನಸು ಮಾಡಿಕೊಳ್ಳುವೆ ಎಂಬ ಛಲ ಆತನಲ್ಲಿ ಇರುತ್ತದೆ.
ವ್ಯಕ್ತಿ ತನ್ನ ಜೀವನದಲ್ಲಿ ನೂರಾರು ಕನಸುಗಳನ್ನು ಕಾಣುವ ಬದಲು ಕೇವಲ ಒಂದು ಕನಸನ್ನು ಕಂಡು ಆ ಕನಸನ್ನು ನನಸು ಮಾಡಿಕೊಳ್ಳಲು ಮುಂದಡಿ ಇರಿಸಿದರೆ ಒಂದು ದಿನ ನನಸಾಗಿಯೇ ಆಗುತ್ತದೆ. ಕೇವಲ ಆ ಕನಸನ್ನು ಬೆನ್ನತ್ತಿ ಹೊರಟರೆ ಸಾಲದು,  ಕನಸನ್ನು ಬೆನ್ನತ್ತಿ ಹೋಗುವ ದಾರಿ ಹಾಗೂ ತಲುಪುವ ಗುರಿ ಎರಡೂ ಸಹ ಒಳ್ಳೆಯದಾಗಿರಬೇಕು.
ನಮ್ಮ ಗುರಿ ಸಾಧನೆಯು ಇನ್ನೊಬ್ಬರ ಜೀವನವನ್ನು ಹಾಳು ಮಾಡಬಾರದು, ನಮ್ಮ ಕನಸು ಇನ್ನೊಬ್ಬರ ಕನಸಿಗೆ ಮುಳ್ಳಾಗಬಾರದು, ನಮ್ಮ ನಿರ್ಧಾರಗಳು ಇನ್ನೊಬ್ಬರ ಬದುಕಿಗೆ ಮುಳುವಾಗಬಾರದು.
ಬದುಕಿನಲ್ಲಿ ನೂರಾರು ಕನಸುಗಳನ್ನು ಕಂಡು ಯಾವ ಕನಸನ್ನು ಈಡೇರಿಸಿಕೊಳ್ಳುವುದು ಎಂದು ಚಿಂತೆ ಮಾಡುವ ಬದಲು ಕೇವಲ ಒಂದು ಕನಸನ್ನು ಕಾಣಿ, ಹಾಗೂ ಆ ಕನಸನ್ನು ನನಸಾಗಿಸಲು ಹೋರಾಟ ಮಾಡಿ. ಯಾವುದೇ ಒಬ್ಬ ವ್ಯಕ್ತಿ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಮುಖ್ಯವಾಗಿ ಬೇಕಾಗಿರುವುದು ಏಕಾಗ್ರತೆ, ನಿಷ್ಠೆ, ಸತ್ಯ, ಅಹಿಂಸೆ, ಪ್ರೀತಿ ಹಾಗೂ ನಿರ್ದಿಷ್ಟ ಗುರಿ ಮತ್ತು ಉದ್ದೇಶ. ಈ ಅಂಶಗಳು ನಮ್ಮನ್ನು ನಮ್ಮ ಗುರಿಯೆಡೆಗೆ ತಲುಪಿಸಲು ಸಹಕಾರಿಯಾಗುತ್ತದೆ.
ಆದರೆ ಈ ಕನಸಿನ ಓಟದಲ್ಲಿ ಪ್ರೀತಿ, ಸ್ನೇಹ, ಸಂಬಂಧಗಳನ್ನು ಎಂದಿಗೂ ಮರೆಯದಿರಿ. ಏಕೆಂದರೆ ಒಂದು ನಿಜವಾದ ಪ್ರೀತಿ, ಒಂದು ನಿಜವಾದ ಸ್ನೇಹ, ನಿಮ್ಮ ಈ ಸಾಧನೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟಿರಬಹುದು.
ಸಾಧನೆಯ ಹಾದಿಯಲ್ಲಿ ಸಿಗುವ ಪ್ರತಿಯೊಬ್ಬರ ಭಾವನೆಗಳನ್ನು ಗೌರವಿಸಿ. ಏಕೆಂದರೆ ನಮ್ಮ ದೇಹಕ್ಕೆ ಬಂಧನ ಇರಬಹುದು ಆದರೆ ನಮ್ಮ ಭಾವನೆಗಳಿಗೆ ಬಂಧನವಿಲ್ಲ. ಹಾಗೂ ಆ ಭಾವನೆಗಳನ್ನು ಬಂಧಿಸಲು ಸಾಧ್ಯವೂ ಇಲ್ಲ. ಭಾವನೆಗಳು ಎಂದಿಗೂ ಸ್ವತಂತ್ರ. ಭಾವನೆಗಳೇ ಒಂದು ಪ್ರಪಂಚ.
“ಕನಸೆಂಬ ಪಕ್ಷಿಯ ಬೆನ್ನತ್ತಿ ಹೋಗು… ಆದರೆ ಎಂದಿಗೂ ಮರೆಯದಿರು ಪ್ರೀತಿ, ಸ್ನೇಹ, ಸಂಬಂಧಗಳನ್ನು…..”
# ಉಲ್ಲಾಸ್‌ ಕಜ್ಜೋಡಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

4 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

5 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

5 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

15 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

15 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

16 hours ago