ಹಿಂದುತ್ವದ ಪರ ಬ್ಯಾಟಿಂಗ್ | ಕಂಗನಾಗೆ 40 ಕೋಟಿ ರೂಪಾಯಿ ನಷ್ಟ| ಬೇಸರ ಎಂದ ನಟಿ

May 18, 2023
10:00 AM

ಹಿಂದುತ್ವದ ಬಗ್ಗೆ ಮಾತನಾಡಿದ್ದಕ್ಕೆ ನಟಿ ಕಂಗನಾ ರಣಾವತ್ ಅವರಿಗೆ ಆದ ನಷ್ಟ ಬರೋಬ್ಬರಿ 30-40 ಕೋಟಿ ರೂಪಾಯಿ. ಹೀಗೇಕೆ ಎನ್ನುವ ವಿಚಾರದ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ನಟಿ ಕಂಗನಾ ರಣಾವತ್ ಅವರು ಎಲ್ಲಾ ವಿಷಯಗಳ ಬಗ್ಗೆ ಮಾತನಾಡುತ್ತಾರೆ. ಸಮಾಜದ ಆಗು-ಹೋಗುಗಳ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಇದರಿಂದ ಅವರು ಸಾಕಷ್ಟು ವಿವಾದ ಮಾಡಿಕೊಂಡಿದ್ದೂ ಇದೆ. ಆದರೆ, ಇದಕ್ಕೆಲ್ಲ ಅವರು ಹೆಚ್ಚು ತಲೆಕೆಡಿಸಿಕೊಂಡವರಲ್ಲ. ಈಗ ಕಂಗನಾ ರಾಣವತ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಟ್ವಿಟರ್ ಮುಖ್ಯಸ್ಥ ಎಲಾನ್ ಮಸ್ಕ್ ಅವರು ಮಾತನಾಡಿದ ವಿಡಿಯೋ ಒಂದನ್ನು ಅವರು ಹಂಚಿಕೊಂಡಿದ್ದಾರೆ. ‘ನನಗೆ ಇಷ್ಟ ಬಂದಿದ್ದನ್ನು ನಾನು ಹೇಳುತ್ತೇನೆ. ಅದರಿಂದ ಹಣ ಕಳೆದುಕೊಂಡರೂ ತೊಂದರೆ ಇಲ್ಲ’ ಎಂದು ಎಲಾನ್ ಮಸ್ಕ್​ ಅವರು ಈ ವಿಡಿಯೋದಲ್ಲಿ ಹೇಳಿದ್ದರು. ಈ ಮಾತು ಕಂಗನಾಗೆ ಇಷ್ಟವಾಗಿದೆ. ಇದು ಅವರ ಜೀವನದಲ್ಲೂ ನಡೆದಿದೆ ಎನ್ನಲಾಗುತ್ತಿದೆ.

‘ನಾನು ಹಿಂದುತ್ವದ ಬಗ್ಗೆ, ರಾಜಕಾರಣಿಗಳು ಹಾಗೂ ದೇಶ ವಿರೋಧಿಗಳ ಬಗ್ಗೆ ಮಾತನಾಡಿದ್ದಕ್ಕೆ ನನಗೆ 30-40 ಕೋಟಿ ರೂಪಾಯಿ ನಷ್ಟ ಆಗಿದೆ. 20-25 ಬ್ರ್ಯಾಂಡ್​ಗಳು ತಮ್ಮ ಒಪ್ಪಂದವನ್ನು ರಾತ್ರೋರಾತ್ರಿ ರದ್ದು ಮಾಡಿಕೊಂಡವು’ ಎಂದಿದ್ದಾರೆ ಕಂಗನಾ.

‘ನಾನು ಸ್ವತಂತ್ರಳು. ನನಗೆ ಅನಿಸಿದ್ದನ್ನು ಹೇಳಲು ಯಾವುದೂ ಅಡ್ಡಿಯಾಗದು. ನಾನು ಎಲಾನ್ ಮಸ್ಕ್​ ಅವರನ್ನು ಈ ವಿಚಾರದಲ್ಲಿ ಪ್ರಶಂಸಿಸುತ್ತೇನೆ. ಏಕೆಂದರೆ ಎಲ್ಲರೂ ದೌರ್ಬಲ್ಯಗಳನ್ನು ಮಾತ್ರ ಪ್ರದರ್ಶಿಸುತ್ತಾರೆ. ಆದರೆ, ಎಲಾನ್ ಮಸ್ಕ್ ಆ ರೀತಿ ಅಲ್ಲ. ಶ್ರೀಮಂತನಾದವನು ಹಣಕ್ಕಾಗಿ ಕಾಳಜಿ ವಹಿಸಬಾರದು’ ಎಂದಿದ್ದಾರೆ.

ಟ್ವಿಟರ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಕಂಗನಾ ರಣಾವತ್ ಅವರ ಟ್ವಿಟರ್ ಖಾತೆಯ ಮೇಲೆ ನಿರ್ಬಂಧ ಹೇರಲಾಗಿತ್ತು. ಆದರೆ, ಎಲಾನ್ ಮಸ್ಕ್ ಅವರು ಟ್ವಿಟರ್​​ನ ಪಡೆದುಕೊಂಡಮೇಲೆ ಈ ಖಾತೆಯನ್ನು ಹಿಂದಿರುಗಿ ನೀಡಲಾಗಿದೆ. ಈ ಕಾರಣಕ್ಕೂ ಅವರಿಗೆ ಎಲಾನ್ ಮಸ್ಕ್​ ಮೇಲೆ ವಿಶೇಷ ಗೌರವ ಇದೆ.

ಸದ್ಯ ಕಂಗನಾ ರಣಾವತ್ ಅವರು ‘ಚಂದ್ರಮುಖಿ 2’ ಹಾಗೂ ‘ಎಮರ್ಜೆನ್ಸಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಎಮರ್ಜೆನ್ಸಿ’ ಚಿತ್ರಕ್ಕೆ ಕಂಗನಾ ರಣಾವತ್ ಅವರು ನಿರ್ದೇಶನ ಮಾಡುತ್ತಿದ್ದಾರೆ ಕೂಡ. ನಿರ್ಮಾಣದಲ್ಲೂ ಅವರ ಪಾಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror