ಹಿಂದುತ್ವದ ಪರ ಬ್ಯಾಟಿಂಗ್ | ಕಂಗನಾಗೆ 40 ಕೋಟಿ ರೂಪಾಯಿ ನಷ್ಟ| ಬೇಸರ ಎಂದ ನಟಿ

May 18, 2023
10:00 AM

ಹಿಂದುತ್ವದ ಬಗ್ಗೆ ಮಾತನಾಡಿದ್ದಕ್ಕೆ ನಟಿ ಕಂಗನಾ ರಣಾವತ್ ಅವರಿಗೆ ಆದ ನಷ್ಟ ಬರೋಬ್ಬರಿ 30-40 ಕೋಟಿ ರೂಪಾಯಿ. ಹೀಗೇಕೆ ಎನ್ನುವ ವಿಚಾರದ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

Advertisement
Advertisement

ನಟಿ ಕಂಗನಾ ರಣಾವತ್ ಅವರು ಎಲ್ಲಾ ವಿಷಯಗಳ ಬಗ್ಗೆ ಮಾತನಾಡುತ್ತಾರೆ. ಸಮಾಜದ ಆಗು-ಹೋಗುಗಳ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಇದರಿಂದ ಅವರು ಸಾಕಷ್ಟು ವಿವಾದ ಮಾಡಿಕೊಂಡಿದ್ದೂ ಇದೆ. ಆದರೆ, ಇದಕ್ಕೆಲ್ಲ ಅವರು ಹೆಚ್ಚು ತಲೆಕೆಡಿಸಿಕೊಂಡವರಲ್ಲ. ಈಗ ಕಂಗನಾ ರಾಣವತ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಟ್ವಿಟರ್ ಮುಖ್ಯಸ್ಥ ಎಲಾನ್ ಮಸ್ಕ್ ಅವರು ಮಾತನಾಡಿದ ವಿಡಿಯೋ ಒಂದನ್ನು ಅವರು ಹಂಚಿಕೊಂಡಿದ್ದಾರೆ. ‘ನನಗೆ ಇಷ್ಟ ಬಂದಿದ್ದನ್ನು ನಾನು ಹೇಳುತ್ತೇನೆ. ಅದರಿಂದ ಹಣ ಕಳೆದುಕೊಂಡರೂ ತೊಂದರೆ ಇಲ್ಲ’ ಎಂದು ಎಲಾನ್ ಮಸ್ಕ್​ ಅವರು ಈ ವಿಡಿಯೋದಲ್ಲಿ ಹೇಳಿದ್ದರು. ಈ ಮಾತು ಕಂಗನಾಗೆ ಇಷ್ಟವಾಗಿದೆ. ಇದು ಅವರ ಜೀವನದಲ್ಲೂ ನಡೆದಿದೆ ಎನ್ನಲಾಗುತ್ತಿದೆ.

‘ನಾನು ಹಿಂದುತ್ವದ ಬಗ್ಗೆ, ರಾಜಕಾರಣಿಗಳು ಹಾಗೂ ದೇಶ ವಿರೋಧಿಗಳ ಬಗ್ಗೆ ಮಾತನಾಡಿದ್ದಕ್ಕೆ ನನಗೆ 30-40 ಕೋಟಿ ರೂಪಾಯಿ ನಷ್ಟ ಆಗಿದೆ. 20-25 ಬ್ರ್ಯಾಂಡ್​ಗಳು ತಮ್ಮ ಒಪ್ಪಂದವನ್ನು ರಾತ್ರೋರಾತ್ರಿ ರದ್ದು ಮಾಡಿಕೊಂಡವು’ ಎಂದಿದ್ದಾರೆ ಕಂಗನಾ.

‘ನಾನು ಸ್ವತಂತ್ರಳು. ನನಗೆ ಅನಿಸಿದ್ದನ್ನು ಹೇಳಲು ಯಾವುದೂ ಅಡ್ಡಿಯಾಗದು. ನಾನು ಎಲಾನ್ ಮಸ್ಕ್​ ಅವರನ್ನು ಈ ವಿಚಾರದಲ್ಲಿ ಪ್ರಶಂಸಿಸುತ್ತೇನೆ. ಏಕೆಂದರೆ ಎಲ್ಲರೂ ದೌರ್ಬಲ್ಯಗಳನ್ನು ಮಾತ್ರ ಪ್ರದರ್ಶಿಸುತ್ತಾರೆ. ಆದರೆ, ಎಲಾನ್ ಮಸ್ಕ್ ಆ ರೀತಿ ಅಲ್ಲ. ಶ್ರೀಮಂತನಾದವನು ಹಣಕ್ಕಾಗಿ ಕಾಳಜಿ ವಹಿಸಬಾರದು’ ಎಂದಿದ್ದಾರೆ.

ಟ್ವಿಟರ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಕಂಗನಾ ರಣಾವತ್ ಅವರ ಟ್ವಿಟರ್ ಖಾತೆಯ ಮೇಲೆ ನಿರ್ಬಂಧ ಹೇರಲಾಗಿತ್ತು. ಆದರೆ, ಎಲಾನ್ ಮಸ್ಕ್ ಅವರು ಟ್ವಿಟರ್​​ನ ಪಡೆದುಕೊಂಡಮೇಲೆ ಈ ಖಾತೆಯನ್ನು ಹಿಂದಿರುಗಿ ನೀಡಲಾಗಿದೆ. ಈ ಕಾರಣಕ್ಕೂ ಅವರಿಗೆ ಎಲಾನ್ ಮಸ್ಕ್​ ಮೇಲೆ ವಿಶೇಷ ಗೌರವ ಇದೆ.

ಸದ್ಯ ಕಂಗನಾ ರಣಾವತ್ ಅವರು ‘ಚಂದ್ರಮುಖಿ 2’ ಹಾಗೂ ‘ಎಮರ್ಜೆನ್ಸಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಎಮರ್ಜೆನ್ಸಿ’ ಚಿತ್ರಕ್ಕೆ ಕಂಗನಾ ರಣಾವತ್ ಅವರು ನಿರ್ದೇಶನ ಮಾಡುತ್ತಿದ್ದಾರೆ ಕೂಡ. ನಿರ್ಮಾಣದಲ್ಲೂ ಅವರ ಪಾಲಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror