ಸುದ್ದಿಗಳು

ಹಿಂದುತ್ವದ ಪರ ಬ್ಯಾಟಿಂಗ್ | ಕಂಗನಾಗೆ 40 ಕೋಟಿ ರೂಪಾಯಿ ನಷ್ಟ| ಬೇಸರ ಎಂದ ನಟಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಿಂದುತ್ವದ ಬಗ್ಗೆ ಮಾತನಾಡಿದ್ದಕ್ಕೆ ನಟಿ ಕಂಗನಾ ರಣಾವತ್ ಅವರಿಗೆ ಆದ ನಷ್ಟ ಬರೋಬ್ಬರಿ 30-40 ಕೋಟಿ ರೂಪಾಯಿ. ಹೀಗೇಕೆ ಎನ್ನುವ ವಿಚಾರದ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

Advertisement
Advertisement

ನಟಿ ಕಂಗನಾ ರಣಾವತ್ ಅವರು ಎಲ್ಲಾ ವಿಷಯಗಳ ಬಗ್ಗೆ ಮಾತನಾಡುತ್ತಾರೆ. ಸಮಾಜದ ಆಗು-ಹೋಗುಗಳ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಇದರಿಂದ ಅವರು ಸಾಕಷ್ಟು ವಿವಾದ ಮಾಡಿಕೊಂಡಿದ್ದೂ ಇದೆ. ಆದರೆ, ಇದಕ್ಕೆಲ್ಲ ಅವರು ಹೆಚ್ಚು ತಲೆಕೆಡಿಸಿಕೊಂಡವರಲ್ಲ. ಈಗ ಕಂಗನಾ ರಾಣವತ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಟ್ವಿಟರ್ ಮುಖ್ಯಸ್ಥ ಎಲಾನ್ ಮಸ್ಕ್ ಅವರು ಮಾತನಾಡಿದ ವಿಡಿಯೋ ಒಂದನ್ನು ಅವರು ಹಂಚಿಕೊಂಡಿದ್ದಾರೆ. ‘ನನಗೆ ಇಷ್ಟ ಬಂದಿದ್ದನ್ನು ನಾನು ಹೇಳುತ್ತೇನೆ. ಅದರಿಂದ ಹಣ ಕಳೆದುಕೊಂಡರೂ ತೊಂದರೆ ಇಲ್ಲ’ ಎಂದು ಎಲಾನ್ ಮಸ್ಕ್​ ಅವರು ಈ ವಿಡಿಯೋದಲ್ಲಿ ಹೇಳಿದ್ದರು. ಈ ಮಾತು ಕಂಗನಾಗೆ ಇಷ್ಟವಾಗಿದೆ. ಇದು ಅವರ ಜೀವನದಲ್ಲೂ ನಡೆದಿದೆ ಎನ್ನಲಾಗುತ್ತಿದೆ.

‘ನಾನು ಹಿಂದುತ್ವದ ಬಗ್ಗೆ, ರಾಜಕಾರಣಿಗಳು ಹಾಗೂ ದೇಶ ವಿರೋಧಿಗಳ ಬಗ್ಗೆ ಮಾತನಾಡಿದ್ದಕ್ಕೆ ನನಗೆ 30-40 ಕೋಟಿ ರೂಪಾಯಿ ನಷ್ಟ ಆಗಿದೆ. 20-25 ಬ್ರ್ಯಾಂಡ್​ಗಳು ತಮ್ಮ ಒಪ್ಪಂದವನ್ನು ರಾತ್ರೋರಾತ್ರಿ ರದ್ದು ಮಾಡಿಕೊಂಡವು’ ಎಂದಿದ್ದಾರೆ ಕಂಗನಾ.

‘ನಾನು ಸ್ವತಂತ್ರಳು. ನನಗೆ ಅನಿಸಿದ್ದನ್ನು ಹೇಳಲು ಯಾವುದೂ ಅಡ್ಡಿಯಾಗದು. ನಾನು ಎಲಾನ್ ಮಸ್ಕ್​ ಅವರನ್ನು ಈ ವಿಚಾರದಲ್ಲಿ ಪ್ರಶಂಸಿಸುತ್ತೇನೆ. ಏಕೆಂದರೆ ಎಲ್ಲರೂ ದೌರ್ಬಲ್ಯಗಳನ್ನು ಮಾತ್ರ ಪ್ರದರ್ಶಿಸುತ್ತಾರೆ. ಆದರೆ, ಎಲಾನ್ ಮಸ್ಕ್ ಆ ರೀತಿ ಅಲ್ಲ. ಶ್ರೀಮಂತನಾದವನು ಹಣಕ್ಕಾಗಿ ಕಾಳಜಿ ವಹಿಸಬಾರದು’ ಎಂದಿದ್ದಾರೆ.

Advertisement

ಟ್ವಿಟರ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಕಂಗನಾ ರಣಾವತ್ ಅವರ ಟ್ವಿಟರ್ ಖಾತೆಯ ಮೇಲೆ ನಿರ್ಬಂಧ ಹೇರಲಾಗಿತ್ತು. ಆದರೆ, ಎಲಾನ್ ಮಸ್ಕ್ ಅವರು ಟ್ವಿಟರ್​​ನ ಪಡೆದುಕೊಂಡಮೇಲೆ ಈ ಖಾತೆಯನ್ನು ಹಿಂದಿರುಗಿ ನೀಡಲಾಗಿದೆ. ಈ ಕಾರಣಕ್ಕೂ ಅವರಿಗೆ ಎಲಾನ್ ಮಸ್ಕ್​ ಮೇಲೆ ವಿಶೇಷ ಗೌರವ ಇದೆ.

ಸದ್ಯ ಕಂಗನಾ ರಣಾವತ್ ಅವರು ‘ಚಂದ್ರಮುಖಿ 2’ ಹಾಗೂ ‘ಎಮರ್ಜೆನ್ಸಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಎಮರ್ಜೆನ್ಸಿ’ ಚಿತ್ರಕ್ಕೆ ಕಂಗನಾ ರಣಾವತ್ ಅವರು ನಿರ್ದೇಶನ ಮಾಡುತ್ತಿದ್ದಾರೆ ಕೂಡ. ನಿರ್ಮಾಣದಲ್ಲೂ ಅವರ ಪಾಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

4 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

4 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

4 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

4 hours ago

ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…

4 hours ago

ಇಂದು ವಿಶ್ವ ರಕ್ತದಾನಿಗಳ ದಿನ

ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…

4 hours ago