ಸುದ್ದಿಗಳು

ಹಿಂದುತ್ವದ ಪರ ಬ್ಯಾಟಿಂಗ್ | ಕಂಗನಾಗೆ 40 ಕೋಟಿ ರೂಪಾಯಿ ನಷ್ಟ| ಬೇಸರ ಎಂದ ನಟಿ

Share

ಹಿಂದುತ್ವದ ಬಗ್ಗೆ ಮಾತನಾಡಿದ್ದಕ್ಕೆ ನಟಿ ಕಂಗನಾ ರಣಾವತ್ ಅವರಿಗೆ ಆದ ನಷ್ಟ ಬರೋಬ್ಬರಿ 30-40 ಕೋಟಿ ರೂಪಾಯಿ. ಹೀಗೇಕೆ ಎನ್ನುವ ವಿಚಾರದ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

Advertisement

ನಟಿ ಕಂಗನಾ ರಣಾವತ್ ಅವರು ಎಲ್ಲಾ ವಿಷಯಗಳ ಬಗ್ಗೆ ಮಾತನಾಡುತ್ತಾರೆ. ಸಮಾಜದ ಆಗು-ಹೋಗುಗಳ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಇದರಿಂದ ಅವರು ಸಾಕಷ್ಟು ವಿವಾದ ಮಾಡಿಕೊಂಡಿದ್ದೂ ಇದೆ. ಆದರೆ, ಇದಕ್ಕೆಲ್ಲ ಅವರು ಹೆಚ್ಚು ತಲೆಕೆಡಿಸಿಕೊಂಡವರಲ್ಲ. ಈಗ ಕಂಗನಾ ರಾಣವತ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಟ್ವಿಟರ್ ಮುಖ್ಯಸ್ಥ ಎಲಾನ್ ಮಸ್ಕ್ ಅವರು ಮಾತನಾಡಿದ ವಿಡಿಯೋ ಒಂದನ್ನು ಅವರು ಹಂಚಿಕೊಂಡಿದ್ದಾರೆ. ‘ನನಗೆ ಇಷ್ಟ ಬಂದಿದ್ದನ್ನು ನಾನು ಹೇಳುತ್ತೇನೆ. ಅದರಿಂದ ಹಣ ಕಳೆದುಕೊಂಡರೂ ತೊಂದರೆ ಇಲ್ಲ’ ಎಂದು ಎಲಾನ್ ಮಸ್ಕ್​ ಅವರು ಈ ವಿಡಿಯೋದಲ್ಲಿ ಹೇಳಿದ್ದರು. ಈ ಮಾತು ಕಂಗನಾಗೆ ಇಷ್ಟವಾಗಿದೆ. ಇದು ಅವರ ಜೀವನದಲ್ಲೂ ನಡೆದಿದೆ ಎನ್ನಲಾಗುತ್ತಿದೆ.

‘ನಾನು ಹಿಂದುತ್ವದ ಬಗ್ಗೆ, ರಾಜಕಾರಣಿಗಳು ಹಾಗೂ ದೇಶ ವಿರೋಧಿಗಳ ಬಗ್ಗೆ ಮಾತನಾಡಿದ್ದಕ್ಕೆ ನನಗೆ 30-40 ಕೋಟಿ ರೂಪಾಯಿ ನಷ್ಟ ಆಗಿದೆ. 20-25 ಬ್ರ್ಯಾಂಡ್​ಗಳು ತಮ್ಮ ಒಪ್ಪಂದವನ್ನು ರಾತ್ರೋರಾತ್ರಿ ರದ್ದು ಮಾಡಿಕೊಂಡವು’ ಎಂದಿದ್ದಾರೆ ಕಂಗನಾ.

‘ನಾನು ಸ್ವತಂತ್ರಳು. ನನಗೆ ಅನಿಸಿದ್ದನ್ನು ಹೇಳಲು ಯಾವುದೂ ಅಡ್ಡಿಯಾಗದು. ನಾನು ಎಲಾನ್ ಮಸ್ಕ್​ ಅವರನ್ನು ಈ ವಿಚಾರದಲ್ಲಿ ಪ್ರಶಂಸಿಸುತ್ತೇನೆ. ಏಕೆಂದರೆ ಎಲ್ಲರೂ ದೌರ್ಬಲ್ಯಗಳನ್ನು ಮಾತ್ರ ಪ್ರದರ್ಶಿಸುತ್ತಾರೆ. ಆದರೆ, ಎಲಾನ್ ಮಸ್ಕ್ ಆ ರೀತಿ ಅಲ್ಲ. ಶ್ರೀಮಂತನಾದವನು ಹಣಕ್ಕಾಗಿ ಕಾಳಜಿ ವಹಿಸಬಾರದು’ ಎಂದಿದ್ದಾರೆ.

ಟ್ವಿಟರ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಕಂಗನಾ ರಣಾವತ್ ಅವರ ಟ್ವಿಟರ್ ಖಾತೆಯ ಮೇಲೆ ನಿರ್ಬಂಧ ಹೇರಲಾಗಿತ್ತು. ಆದರೆ, ಎಲಾನ್ ಮಸ್ಕ್ ಅವರು ಟ್ವಿಟರ್​​ನ ಪಡೆದುಕೊಂಡಮೇಲೆ ಈ ಖಾತೆಯನ್ನು ಹಿಂದಿರುಗಿ ನೀಡಲಾಗಿದೆ. ಈ ಕಾರಣಕ್ಕೂ ಅವರಿಗೆ ಎಲಾನ್ ಮಸ್ಕ್​ ಮೇಲೆ ವಿಶೇಷ ಗೌರವ ಇದೆ.

ಸದ್ಯ ಕಂಗನಾ ರಣಾವತ್ ಅವರು ‘ಚಂದ್ರಮುಖಿ 2’ ಹಾಗೂ ‘ಎಮರ್ಜೆನ್ಸಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಎಮರ್ಜೆನ್ಸಿ’ ಚಿತ್ರಕ್ಕೆ ಕಂಗನಾ ರಣಾವತ್ ಅವರು ನಿರ್ದೇಶನ ಮಾಡುತ್ತಿದ್ದಾರೆ ಕೂಡ. ನಿರ್ಮಾಣದಲ್ಲೂ ಅವರ ಪಾಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…

15 hours ago

ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!

ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…

16 hours ago

2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…

1 day ago

ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…

1 day ago

ತಾಂತ್ರಿಕ ಸಮಸ್ಯೆ | ದೇಶಾದ್ಯಂತ ಯುಪಿಐ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ

ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…

1 day ago