ಹಿಂದುತ್ವದ ಬಗ್ಗೆ ಮಾತನಾಡಿದ್ದಕ್ಕೆ ನಟಿ ಕಂಗನಾ ರಣಾವತ್ ಅವರಿಗೆ ಆದ ನಷ್ಟ ಬರೋಬ್ಬರಿ 30-40 ಕೋಟಿ ರೂಪಾಯಿ. ಹೀಗೇಕೆ ಎನ್ನುವ ವಿಚಾರದ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ನಟಿ ಕಂಗನಾ ರಣಾವತ್ ಅವರು ಎಲ್ಲಾ ವಿಷಯಗಳ ಬಗ್ಗೆ ಮಾತನಾಡುತ್ತಾರೆ. ಸಮಾಜದ ಆಗು-ಹೋಗುಗಳ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಇದರಿಂದ ಅವರು ಸಾಕಷ್ಟು ವಿವಾದ ಮಾಡಿಕೊಂಡಿದ್ದೂ ಇದೆ. ಆದರೆ, ಇದಕ್ಕೆಲ್ಲ ಅವರು ಹೆಚ್ಚು ತಲೆಕೆಡಿಸಿಕೊಂಡವರಲ್ಲ. ಈಗ ಕಂಗನಾ ರಾಣವತ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಟ್ವಿಟರ್ ಮುಖ್ಯಸ್ಥ ಎಲಾನ್ ಮಸ್ಕ್ ಅವರು ಮಾತನಾಡಿದ ವಿಡಿಯೋ ಒಂದನ್ನು ಅವರು ಹಂಚಿಕೊಂಡಿದ್ದಾರೆ. ‘ನನಗೆ ಇಷ್ಟ ಬಂದಿದ್ದನ್ನು ನಾನು ಹೇಳುತ್ತೇನೆ. ಅದರಿಂದ ಹಣ ಕಳೆದುಕೊಂಡರೂ ತೊಂದರೆ ಇಲ್ಲ’ ಎಂದು ಎಲಾನ್ ಮಸ್ಕ್ ಅವರು ಈ ವಿಡಿಯೋದಲ್ಲಿ ಹೇಳಿದ್ದರು. ಈ ಮಾತು ಕಂಗನಾಗೆ ಇಷ್ಟವಾಗಿದೆ. ಇದು ಅವರ ಜೀವನದಲ್ಲೂ ನಡೆದಿದೆ ಎನ್ನಲಾಗುತ್ತಿದೆ.
‘ನಾನು ಹಿಂದುತ್ವದ ಬಗ್ಗೆ, ರಾಜಕಾರಣಿಗಳು ಹಾಗೂ ದೇಶ ವಿರೋಧಿಗಳ ಬಗ್ಗೆ ಮಾತನಾಡಿದ್ದಕ್ಕೆ ನನಗೆ 30-40 ಕೋಟಿ ರೂಪಾಯಿ ನಷ್ಟ ಆಗಿದೆ. 20-25 ಬ್ರ್ಯಾಂಡ್ಗಳು ತಮ್ಮ ಒಪ್ಪಂದವನ್ನು ರಾತ್ರೋರಾತ್ರಿ ರದ್ದು ಮಾಡಿಕೊಂಡವು’ ಎಂದಿದ್ದಾರೆ ಕಂಗನಾ.
‘ನಾನು ಸ್ವತಂತ್ರಳು. ನನಗೆ ಅನಿಸಿದ್ದನ್ನು ಹೇಳಲು ಯಾವುದೂ ಅಡ್ಡಿಯಾಗದು. ನಾನು ಎಲಾನ್ ಮಸ್ಕ್ ಅವರನ್ನು ಈ ವಿಚಾರದಲ್ಲಿ ಪ್ರಶಂಸಿಸುತ್ತೇನೆ. ಏಕೆಂದರೆ ಎಲ್ಲರೂ ದೌರ್ಬಲ್ಯಗಳನ್ನು ಮಾತ್ರ ಪ್ರದರ್ಶಿಸುತ್ತಾರೆ. ಆದರೆ, ಎಲಾನ್ ಮಸ್ಕ್ ಆ ರೀತಿ ಅಲ್ಲ. ಶ್ರೀಮಂತನಾದವನು ಹಣಕ್ಕಾಗಿ ಕಾಳಜಿ ವಹಿಸಬಾರದು’ ಎಂದಿದ್ದಾರೆ.
ಟ್ವಿಟರ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಕಂಗನಾ ರಣಾವತ್ ಅವರ ಟ್ವಿಟರ್ ಖಾತೆಯ ಮೇಲೆ ನಿರ್ಬಂಧ ಹೇರಲಾಗಿತ್ತು. ಆದರೆ, ಎಲಾನ್ ಮಸ್ಕ್ ಅವರು ಟ್ವಿಟರ್ನ ಪಡೆದುಕೊಂಡಮೇಲೆ ಈ ಖಾತೆಯನ್ನು ಹಿಂದಿರುಗಿ ನೀಡಲಾಗಿದೆ. ಈ ಕಾರಣಕ್ಕೂ ಅವರಿಗೆ ಎಲಾನ್ ಮಸ್ಕ್ ಮೇಲೆ ವಿಶೇಷ ಗೌರವ ಇದೆ.
ಸದ್ಯ ಕಂಗನಾ ರಣಾವತ್ ಅವರು ‘ಚಂದ್ರಮುಖಿ 2’ ಹಾಗೂ ‘ಎಮರ್ಜೆನ್ಸಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಎಮರ್ಜೆನ್ಸಿ’ ಚಿತ್ರಕ್ಕೆ ಕಂಗನಾ ರಣಾವತ್ ಅವರು ನಿರ್ದೇಶನ ಮಾಡುತ್ತಿದ್ದಾರೆ ಕೂಡ. ನಿರ್ಮಾಣದಲ್ಲೂ ಅವರ ಪಾಲಿದೆ.
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…