Advertisement
ಸುದ್ದಿಗಳು

ಹಿಂದುತ್ವದ ಪರ ಬ್ಯಾಟಿಂಗ್ | ಕಂಗನಾಗೆ 40 ಕೋಟಿ ರೂಪಾಯಿ ನಷ್ಟ| ಬೇಸರ ಎಂದ ನಟಿ

Share

ಹಿಂದುತ್ವದ ಬಗ್ಗೆ ಮಾತನಾಡಿದ್ದಕ್ಕೆ ನಟಿ ಕಂಗನಾ ರಣಾವತ್ ಅವರಿಗೆ ಆದ ನಷ್ಟ ಬರೋಬ್ಬರಿ 30-40 ಕೋಟಿ ರೂಪಾಯಿ. ಹೀಗೇಕೆ ಎನ್ನುವ ವಿಚಾರದ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ನಟಿ ಕಂಗನಾ ರಣಾವತ್ ಅವರು ಎಲ್ಲಾ ವಿಷಯಗಳ ಬಗ್ಗೆ ಮಾತನಾಡುತ್ತಾರೆ. ಸಮಾಜದ ಆಗು-ಹೋಗುಗಳ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಇದರಿಂದ ಅವರು ಸಾಕಷ್ಟು ವಿವಾದ ಮಾಡಿಕೊಂಡಿದ್ದೂ ಇದೆ. ಆದರೆ, ಇದಕ್ಕೆಲ್ಲ ಅವರು ಹೆಚ್ಚು ತಲೆಕೆಡಿಸಿಕೊಂಡವರಲ್ಲ. ಈಗ ಕಂಗನಾ ರಾಣವತ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಟ್ವಿಟರ್ ಮುಖ್ಯಸ್ಥ ಎಲಾನ್ ಮಸ್ಕ್ ಅವರು ಮಾತನಾಡಿದ ವಿಡಿಯೋ ಒಂದನ್ನು ಅವರು ಹಂಚಿಕೊಂಡಿದ್ದಾರೆ. ‘ನನಗೆ ಇಷ್ಟ ಬಂದಿದ್ದನ್ನು ನಾನು ಹೇಳುತ್ತೇನೆ. ಅದರಿಂದ ಹಣ ಕಳೆದುಕೊಂಡರೂ ತೊಂದರೆ ಇಲ್ಲ’ ಎಂದು ಎಲಾನ್ ಮಸ್ಕ್​ ಅವರು ಈ ವಿಡಿಯೋದಲ್ಲಿ ಹೇಳಿದ್ದರು. ಈ ಮಾತು ಕಂಗನಾಗೆ ಇಷ್ಟವಾಗಿದೆ. ಇದು ಅವರ ಜೀವನದಲ್ಲೂ ನಡೆದಿದೆ ಎನ್ನಲಾಗುತ್ತಿದೆ.

‘ನಾನು ಹಿಂದುತ್ವದ ಬಗ್ಗೆ, ರಾಜಕಾರಣಿಗಳು ಹಾಗೂ ದೇಶ ವಿರೋಧಿಗಳ ಬಗ್ಗೆ ಮಾತನಾಡಿದ್ದಕ್ಕೆ ನನಗೆ 30-40 ಕೋಟಿ ರೂಪಾಯಿ ನಷ್ಟ ಆಗಿದೆ. 20-25 ಬ್ರ್ಯಾಂಡ್​ಗಳು ತಮ್ಮ ಒಪ್ಪಂದವನ್ನು ರಾತ್ರೋರಾತ್ರಿ ರದ್ದು ಮಾಡಿಕೊಂಡವು’ ಎಂದಿದ್ದಾರೆ ಕಂಗನಾ.

‘ನಾನು ಸ್ವತಂತ್ರಳು. ನನಗೆ ಅನಿಸಿದ್ದನ್ನು ಹೇಳಲು ಯಾವುದೂ ಅಡ್ಡಿಯಾಗದು. ನಾನು ಎಲಾನ್ ಮಸ್ಕ್​ ಅವರನ್ನು ಈ ವಿಚಾರದಲ್ಲಿ ಪ್ರಶಂಸಿಸುತ್ತೇನೆ. ಏಕೆಂದರೆ ಎಲ್ಲರೂ ದೌರ್ಬಲ್ಯಗಳನ್ನು ಮಾತ್ರ ಪ್ರದರ್ಶಿಸುತ್ತಾರೆ. ಆದರೆ, ಎಲಾನ್ ಮಸ್ಕ್ ಆ ರೀತಿ ಅಲ್ಲ. ಶ್ರೀಮಂತನಾದವನು ಹಣಕ್ಕಾಗಿ ಕಾಳಜಿ ವಹಿಸಬಾರದು’ ಎಂದಿದ್ದಾರೆ.

ಟ್ವಿಟರ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಕಂಗನಾ ರಣಾವತ್ ಅವರ ಟ್ವಿಟರ್ ಖಾತೆಯ ಮೇಲೆ ನಿರ್ಬಂಧ ಹೇರಲಾಗಿತ್ತು. ಆದರೆ, ಎಲಾನ್ ಮಸ್ಕ್ ಅವರು ಟ್ವಿಟರ್​​ನ ಪಡೆದುಕೊಂಡಮೇಲೆ ಈ ಖಾತೆಯನ್ನು ಹಿಂದಿರುಗಿ ನೀಡಲಾಗಿದೆ. ಈ ಕಾರಣಕ್ಕೂ ಅವರಿಗೆ ಎಲಾನ್ ಮಸ್ಕ್​ ಮೇಲೆ ವಿಶೇಷ ಗೌರವ ಇದೆ.

ಸದ್ಯ ಕಂಗನಾ ರಣಾವತ್ ಅವರು ‘ಚಂದ್ರಮುಖಿ 2’ ಹಾಗೂ ‘ಎಮರ್ಜೆನ್ಸಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಎಮರ್ಜೆನ್ಸಿ’ ಚಿತ್ರಕ್ಕೆ ಕಂಗನಾ ರಣಾವತ್ ಅವರು ನಿರ್ದೇಶನ ಮಾಡುತ್ತಿದ್ದಾರೆ ಕೂಡ. ನಿರ್ಮಾಣದಲ್ಲೂ ಅವರ ಪಾಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

6 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

6 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

23 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago