Advertisement
ಸುದ್ದಿಗಳು

ಹಿಂದುತ್ವದ ಪರ ಬ್ಯಾಟಿಂಗ್ | ಕಂಗನಾಗೆ 40 ಕೋಟಿ ರೂಪಾಯಿ ನಷ್ಟ| ಬೇಸರ ಎಂದ ನಟಿ

Share

ಹಿಂದುತ್ವದ ಬಗ್ಗೆ ಮಾತನಾಡಿದ್ದಕ್ಕೆ ನಟಿ ಕಂಗನಾ ರಣಾವತ್ ಅವರಿಗೆ ಆದ ನಷ್ಟ ಬರೋಬ್ಬರಿ 30-40 ಕೋಟಿ ರೂಪಾಯಿ. ಹೀಗೇಕೆ ಎನ್ನುವ ವಿಚಾರದ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ನಟಿ ಕಂಗನಾ ರಣಾವತ್ ಅವರು ಎಲ್ಲಾ ವಿಷಯಗಳ ಬಗ್ಗೆ ಮಾತನಾಡುತ್ತಾರೆ. ಸಮಾಜದ ಆಗು-ಹೋಗುಗಳ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಇದರಿಂದ ಅವರು ಸಾಕಷ್ಟು ವಿವಾದ ಮಾಡಿಕೊಂಡಿದ್ದೂ ಇದೆ. ಆದರೆ, ಇದಕ್ಕೆಲ್ಲ ಅವರು ಹೆಚ್ಚು ತಲೆಕೆಡಿಸಿಕೊಂಡವರಲ್ಲ. ಈಗ ಕಂಗನಾ ರಾಣವತ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಟ್ವಿಟರ್ ಮುಖ್ಯಸ್ಥ ಎಲಾನ್ ಮಸ್ಕ್ ಅವರು ಮಾತನಾಡಿದ ವಿಡಿಯೋ ಒಂದನ್ನು ಅವರು ಹಂಚಿಕೊಂಡಿದ್ದಾರೆ. ‘ನನಗೆ ಇಷ್ಟ ಬಂದಿದ್ದನ್ನು ನಾನು ಹೇಳುತ್ತೇನೆ. ಅದರಿಂದ ಹಣ ಕಳೆದುಕೊಂಡರೂ ತೊಂದರೆ ಇಲ್ಲ’ ಎಂದು ಎಲಾನ್ ಮಸ್ಕ್​ ಅವರು ಈ ವಿಡಿಯೋದಲ್ಲಿ ಹೇಳಿದ್ದರು. ಈ ಮಾತು ಕಂಗನಾಗೆ ಇಷ್ಟವಾಗಿದೆ. ಇದು ಅವರ ಜೀವನದಲ್ಲೂ ನಡೆದಿದೆ ಎನ್ನಲಾಗುತ್ತಿದೆ.

‘ನಾನು ಹಿಂದುತ್ವದ ಬಗ್ಗೆ, ರಾಜಕಾರಣಿಗಳು ಹಾಗೂ ದೇಶ ವಿರೋಧಿಗಳ ಬಗ್ಗೆ ಮಾತನಾಡಿದ್ದಕ್ಕೆ ನನಗೆ 30-40 ಕೋಟಿ ರೂಪಾಯಿ ನಷ್ಟ ಆಗಿದೆ. 20-25 ಬ್ರ್ಯಾಂಡ್​ಗಳು ತಮ್ಮ ಒಪ್ಪಂದವನ್ನು ರಾತ್ರೋರಾತ್ರಿ ರದ್ದು ಮಾಡಿಕೊಂಡವು’ ಎಂದಿದ್ದಾರೆ ಕಂಗನಾ.

‘ನಾನು ಸ್ವತಂತ್ರಳು. ನನಗೆ ಅನಿಸಿದ್ದನ್ನು ಹೇಳಲು ಯಾವುದೂ ಅಡ್ಡಿಯಾಗದು. ನಾನು ಎಲಾನ್ ಮಸ್ಕ್​ ಅವರನ್ನು ಈ ವಿಚಾರದಲ್ಲಿ ಪ್ರಶಂಸಿಸುತ್ತೇನೆ. ಏಕೆಂದರೆ ಎಲ್ಲರೂ ದೌರ್ಬಲ್ಯಗಳನ್ನು ಮಾತ್ರ ಪ್ರದರ್ಶಿಸುತ್ತಾರೆ. ಆದರೆ, ಎಲಾನ್ ಮಸ್ಕ್ ಆ ರೀತಿ ಅಲ್ಲ. ಶ್ರೀಮಂತನಾದವನು ಹಣಕ್ಕಾಗಿ ಕಾಳಜಿ ವಹಿಸಬಾರದು’ ಎಂದಿದ್ದಾರೆ.

ಟ್ವಿಟರ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಕಂಗನಾ ರಣಾವತ್ ಅವರ ಟ್ವಿಟರ್ ಖಾತೆಯ ಮೇಲೆ ನಿರ್ಬಂಧ ಹೇರಲಾಗಿತ್ತು. ಆದರೆ, ಎಲಾನ್ ಮಸ್ಕ್ ಅವರು ಟ್ವಿಟರ್​​ನ ಪಡೆದುಕೊಂಡಮೇಲೆ ಈ ಖಾತೆಯನ್ನು ಹಿಂದಿರುಗಿ ನೀಡಲಾಗಿದೆ. ಈ ಕಾರಣಕ್ಕೂ ಅವರಿಗೆ ಎಲಾನ್ ಮಸ್ಕ್​ ಮೇಲೆ ವಿಶೇಷ ಗೌರವ ಇದೆ.

ಸದ್ಯ ಕಂಗನಾ ರಣಾವತ್ ಅವರು ‘ಚಂದ್ರಮುಖಿ 2’ ಹಾಗೂ ‘ಎಮರ್ಜೆನ್ಸಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಎಮರ್ಜೆನ್ಸಿ’ ಚಿತ್ರಕ್ಕೆ ಕಂಗನಾ ರಣಾವತ್ ಅವರು ನಿರ್ದೇಶನ ಮಾಡುತ್ತಿದ್ದಾರೆ ಕೂಡ. ನಿರ್ಮಾಣದಲ್ಲೂ ಅವರ ಪಾಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

4 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

8 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago